ಬೆಳ್ಳಾರೆ: ರೋಟರಿ ಕ್ಲಬ್ ಬೆಳ್ಳಾರೆ ಟೌನ್ ವತಿಯಿಂದ ಕಾರ್ಮಿಕ ದಿನಾಚರಣೆ ಹಾಗೂ ಇಬ್ಬರು ಕಾರ್ಮಿಕ ಸಾಧಕರನ್ನು ಸನ್ಮಾನಿಸುವ ಕಾರ್ಯಕ್ರಮ ಬೆಳ್ಳಾರೆಯ ಪ್ರಸಾದ್ ಟೆಕ್ಸ್ಟೈಲ್ಸ್ನ ಸಭಾಂಗಣದಲ್ಲಿ ನಡೆಯಿತು.
ಕಲ್ಮಡ್ಕದ ಇಂದಾಜೆ ನಿವಾಸಿ ನುರಿತ ಇಲೆಕ್ಟ್ರೀಷಿಯನ್ ರುಕ್ಮಯ ಗೌಡ ಹಾಗು ಕಳಂಜ ಗ್ರಾಮದ ಕಿಲಂಗೋಡಿಯ ಅಚ್ಚುತ ನಾಯಕ್ರನ್ನು ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಅಧ್ಯಕ್ಷ ಎ.ಕೆ ಮಣಿಯಾಣಿ ಸನ್ಮಾನಿಸಿ ಗೌರವಿಸಿದರು. ಸ್ಥಾಪಕಾಧ್ಯಕ್ಷ ಶ್ಯಾಮಸುಂದರ ರೈ ಸನ್ಮಾನಿತರ ಪರಿಚಯಿಸಿ ಪ್ರಸ್ತಾವನೆಗೈದರು.
ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಬೆಳ್ಳಾರೆ ಟೌನ್ ನಿಯೋಜಿತ ಅಧ್ಯಕ್ಷ ಬಿ.ನರಸಿಂಹ ಜೋಶಿ, ಪೂವಾಧ್ಯಕ್ಷ ಕರುಣಾಕರ ಆಳ್ವ, ಮಾಧವ ಗೌಡ, ಬಿ.ಸುಬ್ರಹ್ಮಣ್ಯ ಜೋಶಿ, ಪ್ರಮೋದ್ಕುಮಾರ್ ಶೆಟ್ಟಿ ಕುಂಟುಪುಣಿಗುತ್ತು, ಪ್ರಭಾಕರ ಆಳ್ವ ಭಜನಿಗುತ್ತು, ವಿನಯ್ಕುಮಾರ್ ಭಾರದ್ವಾಜ್ ಹಾಗು ಐತ್ತಪ್ಪ ಗೌಡ ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎ.ಕೆ ಮಣಿಯಾಣಿ ಸ್ವಾಗತಿಸಿ, ಕಾರ್ಯದರ್ಶಿ ಗೋಪಾಲಕೃಷ್ಣ ವಿ.ಎಸ್ ವಂದಿಸಿದರು.
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…