ಬೆಳ್ಳಾರೆ: ರೋಟರಿ ಕ್ಲಬ್ ಬೆಳ್ಳಾರೆ ಟೌನ್ ವತಿಯಿಂದ ಕಾರ್ಮಿಕ ದಿನಾಚರಣೆ ಹಾಗೂ ಇಬ್ಬರು ಕಾರ್ಮಿಕ ಸಾಧಕರನ್ನು ಸನ್ಮಾನಿಸುವ ಕಾರ್ಯಕ್ರಮ ಬೆಳ್ಳಾರೆಯ ಪ್ರಸಾದ್ ಟೆಕ್ಸ್ಟೈಲ್ಸ್ನ ಸಭಾಂಗಣದಲ್ಲಿ ನಡೆಯಿತು.
ಕಲ್ಮಡ್ಕದ ಇಂದಾಜೆ ನಿವಾಸಿ ನುರಿತ ಇಲೆಕ್ಟ್ರೀಷಿಯನ್ ರುಕ್ಮಯ ಗೌಡ ಹಾಗು ಕಳಂಜ ಗ್ರಾಮದ ಕಿಲಂಗೋಡಿಯ ಅಚ್ಚುತ ನಾಯಕ್ರನ್ನು ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಅಧ್ಯಕ್ಷ ಎ.ಕೆ ಮಣಿಯಾಣಿ ಸನ್ಮಾನಿಸಿ ಗೌರವಿಸಿದರು. ಸ್ಥಾಪಕಾಧ್ಯಕ್ಷ ಶ್ಯಾಮಸುಂದರ ರೈ ಸನ್ಮಾನಿತರ ಪರಿಚಯಿಸಿ ಪ್ರಸ್ತಾವನೆಗೈದರು.
ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಬೆಳ್ಳಾರೆ ಟೌನ್ ನಿಯೋಜಿತ ಅಧ್ಯಕ್ಷ ಬಿ.ನರಸಿಂಹ ಜೋಶಿ, ಪೂವಾಧ್ಯಕ್ಷ ಕರುಣಾಕರ ಆಳ್ವ, ಮಾಧವ ಗೌಡ, ಬಿ.ಸುಬ್ರಹ್ಮಣ್ಯ ಜೋಶಿ, ಪ್ರಮೋದ್ಕುಮಾರ್ ಶೆಟ್ಟಿ ಕುಂಟುಪುಣಿಗುತ್ತು, ಪ್ರಭಾಕರ ಆಳ್ವ ಭಜನಿಗುತ್ತು, ವಿನಯ್ಕುಮಾರ್ ಭಾರದ್ವಾಜ್ ಹಾಗು ಐತ್ತಪ್ಪ ಗೌಡ ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎ.ಕೆ ಮಣಿಯಾಣಿ ಸ್ವಾಗತಿಸಿ, ಕಾರ್ಯದರ್ಶಿ ಗೋಪಾಲಕೃಷ್ಣ ವಿ.ಎಸ್ ವಂದಿಸಿದರು.
ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ ಧಾರಾಕಾರ…
ಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…
ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್…
ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…