ಬೆಳ್ಳಾರೆ: ರೋಟರಿ ಕ್ಲಬ್ ಬೆಳ್ಳಾರೆ ಟೌನ್ ವತಿಯಿಂದ ಕಾರ್ಮಿಕ ದಿನಾಚರಣೆ ಹಾಗೂ ಇಬ್ಬರು ಕಾರ್ಮಿಕ ಸಾಧಕರನ್ನು ಸನ್ಮಾನಿಸುವ ಕಾರ್ಯಕ್ರಮ ಬೆಳ್ಳಾರೆಯ ಪ್ರಸಾದ್ ಟೆಕ್ಸ್ಟೈಲ್ಸ್ನ ಸಭಾಂಗಣದಲ್ಲಿ ನಡೆಯಿತು.
ಕಲ್ಮಡ್ಕದ ಇಂದಾಜೆ ನಿವಾಸಿ ನುರಿತ ಇಲೆಕ್ಟ್ರೀಷಿಯನ್ ರುಕ್ಮಯ ಗೌಡ ಹಾಗು ಕಳಂಜ ಗ್ರಾಮದ ಕಿಲಂಗೋಡಿಯ ಅಚ್ಚುತ ನಾಯಕ್ರನ್ನು ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಅಧ್ಯಕ್ಷ ಎ.ಕೆ ಮಣಿಯಾಣಿ ಸನ್ಮಾನಿಸಿ ಗೌರವಿಸಿದರು. ಸ್ಥಾಪಕಾಧ್ಯಕ್ಷ ಶ್ಯಾಮಸುಂದರ ರೈ ಸನ್ಮಾನಿತರ ಪರಿಚಯಿಸಿ ಪ್ರಸ್ತಾವನೆಗೈದರು.
ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಬೆಳ್ಳಾರೆ ಟೌನ್ ನಿಯೋಜಿತ ಅಧ್ಯಕ್ಷ ಬಿ.ನರಸಿಂಹ ಜೋಶಿ, ಪೂವಾಧ್ಯಕ್ಷ ಕರುಣಾಕರ ಆಳ್ವ, ಮಾಧವ ಗೌಡ, ಬಿ.ಸುಬ್ರಹ್ಮಣ್ಯ ಜೋಶಿ, ಪ್ರಮೋದ್ಕುಮಾರ್ ಶೆಟ್ಟಿ ಕುಂಟುಪುಣಿಗುತ್ತು, ಪ್ರಭಾಕರ ಆಳ್ವ ಭಜನಿಗುತ್ತು, ವಿನಯ್ಕುಮಾರ್ ಭಾರದ್ವಾಜ್ ಹಾಗು ಐತ್ತಪ್ಪ ಗೌಡ ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎ.ಕೆ ಮಣಿಯಾಣಿ ಸ್ವಾಗತಿಸಿ, ಕಾರ್ಯದರ್ಶಿ ಗೋಪಾಲಕೃಷ್ಣ ವಿ.ಎಸ್ ವಂದಿಸಿದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…