ಬೆಳ್ಳಾರೆ: ರೋಟರಿ ಕ್ಲಬ್ ಬೆಳ್ಳಾರೆ ಟೌನ್ ವತಿಯಿಂದ ಕಾರ್ಮಿಕ ದಿನಾಚರಣೆ ಹಾಗೂ ಇಬ್ಬರು ಕಾರ್ಮಿಕ ಸಾಧಕರನ್ನು ಸನ್ಮಾನಿಸುವ ಕಾರ್ಯಕ್ರಮ ಬೆಳ್ಳಾರೆಯ ಪ್ರಸಾದ್ ಟೆಕ್ಸ್ಟೈಲ್ಸ್ನ ಸಭಾಂಗಣದಲ್ಲಿ ನಡೆಯಿತು.
ಕಲ್ಮಡ್ಕದ ಇಂದಾಜೆ ನಿವಾಸಿ ನುರಿತ ಇಲೆಕ್ಟ್ರೀಷಿಯನ್ ರುಕ್ಮಯ ಗೌಡ ಹಾಗು ಕಳಂಜ ಗ್ರಾಮದ ಕಿಲಂಗೋಡಿಯ ಅಚ್ಚುತ ನಾಯಕ್ರನ್ನು ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಅಧ್ಯಕ್ಷ ಎ.ಕೆ ಮಣಿಯಾಣಿ ಸನ್ಮಾನಿಸಿ ಗೌರವಿಸಿದರು. ಸ್ಥಾಪಕಾಧ್ಯಕ್ಷ ಶ್ಯಾಮಸುಂದರ ರೈ ಸನ್ಮಾನಿತರ ಪರಿಚಯಿಸಿ ಪ್ರಸ್ತಾವನೆಗೈದರು.
ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಬೆಳ್ಳಾರೆ ಟೌನ್ ನಿಯೋಜಿತ ಅಧ್ಯಕ್ಷ ಬಿ.ನರಸಿಂಹ ಜೋಶಿ, ಪೂವಾಧ್ಯಕ್ಷ ಕರುಣಾಕರ ಆಳ್ವ, ಮಾಧವ ಗೌಡ, ಬಿ.ಸುಬ್ರಹ್ಮಣ್ಯ ಜೋಶಿ, ಪ್ರಮೋದ್ಕುಮಾರ್ ಶೆಟ್ಟಿ ಕುಂಟುಪುಣಿಗುತ್ತು, ಪ್ರಭಾಕರ ಆಳ್ವ ಭಜನಿಗುತ್ತು, ವಿನಯ್ಕುಮಾರ್ ಭಾರದ್ವಾಜ್ ಹಾಗು ಐತ್ತಪ್ಪ ಗೌಡ ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎ.ಕೆ ಮಣಿಯಾಣಿ ಸ್ವಾಗತಿಸಿ, ಕಾರ್ಯದರ್ಶಿ ಗೋಪಾಲಕೃಷ್ಣ ವಿ.ಎಸ್ ವಂದಿಸಿದರು.
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…