ಬೆಳ್ಳಾರೆ: ರೋಟರಿ ಕ್ಲಬ್ ಬೆಳ್ಳಾರೆ ಟೌನ್ ವತಿಯಿಂದ ಕಾರ್ಮಿಕ ದಿನಾಚರಣೆ ಹಾಗೂ ಇಬ್ಬರು ಕಾರ್ಮಿಕ ಸಾಧಕರನ್ನು ಸನ್ಮಾನಿಸುವ ಕಾರ್ಯಕ್ರಮ ಬೆಳ್ಳಾರೆಯ ಪ್ರಸಾದ್ ಟೆಕ್ಸ್ಟೈಲ್ಸ್ನ ಸಭಾಂಗಣದಲ್ಲಿ ನಡೆಯಿತು.
ಕಲ್ಮಡ್ಕದ ಇಂದಾಜೆ ನಿವಾಸಿ ನುರಿತ ಇಲೆಕ್ಟ್ರೀಷಿಯನ್ ರುಕ್ಮಯ ಗೌಡ ಹಾಗು ಕಳಂಜ ಗ್ರಾಮದ ಕಿಲಂಗೋಡಿಯ ಅಚ್ಚುತ ನಾಯಕ್ರನ್ನು ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಅಧ್ಯಕ್ಷ ಎ.ಕೆ ಮಣಿಯಾಣಿ ಸನ್ಮಾನಿಸಿ ಗೌರವಿಸಿದರು. ಸ್ಥಾಪಕಾಧ್ಯಕ್ಷ ಶ್ಯಾಮಸುಂದರ ರೈ ಸನ್ಮಾನಿತರ ಪರಿಚಯಿಸಿ ಪ್ರಸ್ತಾವನೆಗೈದರು.
ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಬೆಳ್ಳಾರೆ ಟೌನ್ ನಿಯೋಜಿತ ಅಧ್ಯಕ್ಷ ಬಿ.ನರಸಿಂಹ ಜೋಶಿ, ಪೂವಾಧ್ಯಕ್ಷ ಕರುಣಾಕರ ಆಳ್ವ, ಮಾಧವ ಗೌಡ, ಬಿ.ಸುಬ್ರಹ್ಮಣ್ಯ ಜೋಶಿ, ಪ್ರಮೋದ್ಕುಮಾರ್ ಶೆಟ್ಟಿ ಕುಂಟುಪುಣಿಗುತ್ತು, ಪ್ರಭಾಕರ ಆಳ್ವ ಭಜನಿಗುತ್ತು, ವಿನಯ್ಕುಮಾರ್ ಭಾರದ್ವಾಜ್ ಹಾಗು ಐತ್ತಪ್ಪ ಗೌಡ ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎ.ಕೆ ಮಣಿಯಾಣಿ ಸ್ವಾಗತಿಸಿ, ಕಾರ್ಯದರ್ಶಿ ಗೋಪಾಲಕೃಷ್ಣ ವಿ.ಎಸ್ ವಂದಿಸಿದರು.
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…
ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…
ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…