ಬೆಳ್ಳಾರೆ: ರೋಟರಿ ಕ್ಲಬ್ ಬೆಳ್ಳಾರೆ ಟೌನ್ ವತಿಯಿಂದ ಕಾರ್ಮಿಕ ದಿನಾಚರಣೆ ಹಾಗೂ ಇಬ್ಬರು ಕಾರ್ಮಿಕ ಸಾಧಕರನ್ನು ಸನ್ಮಾನಿಸುವ ಕಾರ್ಯಕ್ರಮ ಬೆಳ್ಳಾರೆಯ ಪ್ರಸಾದ್ ಟೆಕ್ಸ್ಟೈಲ್ಸ್ನ ಸಭಾಂಗಣದಲ್ಲಿ ನಡೆಯಿತು.
ಕಲ್ಮಡ್ಕದ ಇಂದಾಜೆ ನಿವಾಸಿ ನುರಿತ ಇಲೆಕ್ಟ್ರೀಷಿಯನ್ ರುಕ್ಮಯ ಗೌಡ ಹಾಗು ಕಳಂಜ ಗ್ರಾಮದ ಕಿಲಂಗೋಡಿಯ ಅಚ್ಚುತ ನಾಯಕ್ರನ್ನು ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಅಧ್ಯಕ್ಷ ಎ.ಕೆ ಮಣಿಯಾಣಿ ಸನ್ಮಾನಿಸಿ ಗೌರವಿಸಿದರು. ಸ್ಥಾಪಕಾಧ್ಯಕ್ಷ ಶ್ಯಾಮಸುಂದರ ರೈ ಸನ್ಮಾನಿತರ ಪರಿಚಯಿಸಿ ಪ್ರಸ್ತಾವನೆಗೈದರು.
ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಬೆಳ್ಳಾರೆ ಟೌನ್ ನಿಯೋಜಿತ ಅಧ್ಯಕ್ಷ ಬಿ.ನರಸಿಂಹ ಜೋಶಿ, ಪೂವಾಧ್ಯಕ್ಷ ಕರುಣಾಕರ ಆಳ್ವ, ಮಾಧವ ಗೌಡ, ಬಿ.ಸುಬ್ರಹ್ಮಣ್ಯ ಜೋಶಿ, ಪ್ರಮೋದ್ಕುಮಾರ್ ಶೆಟ್ಟಿ ಕುಂಟುಪುಣಿಗುತ್ತು, ಪ್ರಭಾಕರ ಆಳ್ವ ಭಜನಿಗುತ್ತು, ವಿನಯ್ಕುಮಾರ್ ಭಾರದ್ವಾಜ್ ಹಾಗು ಐತ್ತಪ್ಪ ಗೌಡ ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎ.ಕೆ ಮಣಿಯಾಣಿ ಸ್ವಾಗತಿಸಿ, ಕಾರ್ಯದರ್ಶಿ ಗೋಪಾಲಕೃಷ್ಣ ವಿ.ಎಸ್ ವಂದಿಸಿದರು.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…