ಬೆಳ್ಳಾರೆ: ಬೆಳ್ಳಾರೆ ಯಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದ ಸುನ್ನೀ ಸೌಹಾರ್ದ ವೇದಿಕೆಯ ಅಧಿಕೃತ ಚಾಲನೆ ಹಾಗೂ ಘೋಷಣಾ ಸಮಾವೇಶವು ಸೋಮವಾರ ಸಂಜೆ ನಡೆಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಸೌಹಾರ್ದ ವೇದಿಕೆಯ ಸ್ಥಾಪಕಧ್ಯಕ್ಷ ಹಸೈನಾರ್ ಹಾಜಿ ಸಿ ಎಂ ವಹಿಸಿದ್ದರು. ಸೌಹಾರ್ದ ವೇದಿಕೆಯ ಪದಾಧಿಕಾರಿಗಳ ಹೆಸರನ್ನು ಯೂಸುಫ್ ಮುಸ್ಲಿಯಾರ್ ಘೋಷಣೆ ಮಾಡಿದರು. ಸುನ್ನೀ ಸೌಹಾರ್ದ ಸಮಿತಿ ಸದಸ್ಯರುಗಳಾದ ಶಾಫಿ ಬೆಳ್ಳಾರೆ ಹಾಗೂ ಹಸನ್ ಸಖಾಫಿ ಬೆಳ್ಳಾರೆ ಸೌಹಾರ್ದತೆ ಕುರಿತು ಮುಖ್ಯ ಭಾಷಣ ಮಾಡಿದರು. ಹನೀಫ್ ಬೆಳ್ಳಾರೆ ಪಾಸ್ತಾವಿಕ ಭಾಷಣ ಮಾಡಿದರು.
ಬೆಳ್ಳಾರೆ ಜಮಾಅತಿನ ಅಧ್ಯಕ್ಷ ಕೆ ಎಂ ಮಹಮ್ಮದ್ ಹಾಜಿ ಬೆಳ್ಳಾರೆ , ಜಮಾಅತಿನ ಮಾಜಿ ಅಧ್ಯಕ್ಷ ರುಗಳಾದ ಮೂಸಾ ಹಾಜಿ ಕಲ್ಲಪಣೆ ,ಹಾಜಿ ಮಹಮ್ಮದ್ ಇಂಜಿನಿಯರ್ ಬೆಳ್ಳಾರೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸೌಹಾರ್ದ ವೇದಿಕೆ ಯ ಪ್ರಧಾನ ಕಾರ್ಯದರ್ಶಿ ಜಲೀಲ್ ಎ ಆರ್ ಸ್ವಾಗತಿಸಿ , ಸದಸ್ಯ ಕೆ ಎ ಬಶೀರ್ ವಂದಿಸಿ ಕಾರ್ಯಕ್ರಮ ನಿರೂಪಿಸಿದರು.
ಅ.6 ರಂದು ಸುನ್ನೀ ಸೌಹಾರ್ದ ವೇದಿಕೆ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರವನ್ನ ಬೆಳ್ಳಾರೆ ದೇವಿಹೈಟ್ಸ್ ನಲ್ಲಿ ಮಾಡುವುದೆಂದು ಸಂಘಟಕರು ಇದೇ ವೇಳೆ ಪ್ರಕಟನೆಗೆ ತಿಳಿಸಿರುತ್ತಾರೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…