ಬೆಳ್ಳಾರೆ: ಬೆಳ್ಳಾರೆ ಯಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದ ಸುನ್ನೀ ಸೌಹಾರ್ದ ವೇದಿಕೆಯ ಅಧಿಕೃತ ಚಾಲನೆ ಹಾಗೂ ಘೋಷಣಾ ಸಮಾವೇಶವು ಸೋಮವಾರ ಸಂಜೆ ನಡೆಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಸೌಹಾರ್ದ ವೇದಿಕೆಯ ಸ್ಥಾಪಕಧ್ಯಕ್ಷ ಹಸೈನಾರ್ ಹಾಜಿ ಸಿ ಎಂ ವಹಿಸಿದ್ದರು. ಸೌಹಾರ್ದ ವೇದಿಕೆಯ ಪದಾಧಿಕಾರಿಗಳ ಹೆಸರನ್ನು ಯೂಸುಫ್ ಮುಸ್ಲಿಯಾರ್ ಘೋಷಣೆ ಮಾಡಿದರು. ಸುನ್ನೀ ಸೌಹಾರ್ದ ಸಮಿತಿ ಸದಸ್ಯರುಗಳಾದ ಶಾಫಿ ಬೆಳ್ಳಾರೆ ಹಾಗೂ ಹಸನ್ ಸಖಾಫಿ ಬೆಳ್ಳಾರೆ ಸೌಹಾರ್ದತೆ ಕುರಿತು ಮುಖ್ಯ ಭಾಷಣ ಮಾಡಿದರು. ಹನೀಫ್ ಬೆಳ್ಳಾರೆ ಪಾಸ್ತಾವಿಕ ಭಾಷಣ ಮಾಡಿದರು.
ಬೆಳ್ಳಾರೆ ಜಮಾಅತಿನ ಅಧ್ಯಕ್ಷ ಕೆ ಎಂ ಮಹಮ್ಮದ್ ಹಾಜಿ ಬೆಳ್ಳಾರೆ , ಜಮಾಅತಿನ ಮಾಜಿ ಅಧ್ಯಕ್ಷ ರುಗಳಾದ ಮೂಸಾ ಹಾಜಿ ಕಲ್ಲಪಣೆ ,ಹಾಜಿ ಮಹಮ್ಮದ್ ಇಂಜಿನಿಯರ್ ಬೆಳ್ಳಾರೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸೌಹಾರ್ದ ವೇದಿಕೆ ಯ ಪ್ರಧಾನ ಕಾರ್ಯದರ್ಶಿ ಜಲೀಲ್ ಎ ಆರ್ ಸ್ವಾಗತಿಸಿ , ಸದಸ್ಯ ಕೆ ಎ ಬಶೀರ್ ವಂದಿಸಿ ಕಾರ್ಯಕ್ರಮ ನಿರೂಪಿಸಿದರು.
ಅ.6 ರಂದು ಸುನ್ನೀ ಸೌಹಾರ್ದ ವೇದಿಕೆ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರವನ್ನ ಬೆಳ್ಳಾರೆ ದೇವಿಹೈಟ್ಸ್ ನಲ್ಲಿ ಮಾಡುವುದೆಂದು ಸಂಘಟಕರು ಇದೇ ವೇಳೆ ಪ್ರಕಟನೆಗೆ ತಿಳಿಸಿರುತ್ತಾರೆ.
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…