ಸುದ್ದಿಗಳು

ಬೆಳ್ಳಾರೆಯಲ್ಲಿ ಸ್ವಾತಂತ್ರ್ಯ ಸದನ ನಿರ್ಮಿಸಲು ಶಾಸಕರಿಗೆ ಮನವಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬೆಳ್ಳಾರೆ: ಸ್ವಾತಂತ್ರ್ಯ ಹೋರಾಟದ ಐತಿಹಾಸಿಕ ಸ್ಥಳವಾಗಿದ್ದ ಬೆಳ್ಳಾರೆಯ ಬಂಗ್ಲೆಗುಡ್ಡೆಯಲ್ಲಿ ಅಮರ ಸುಳ್ಯ ಸ್ವಾತಂತ್ರ್ಯ ಸದನ ನಿರ್ಮಾಣವಾಗಬೇಕು ಎಂದು ಬೆಳ್ಳಾರೆಯ ಸ್ನೇಹಿತರ ಕಲಾ ಸಂಘದ ವತಿಯಿಂದ ಸುಳ್ಯ ಶಾಸಕ ಎಸ್ ಅಂಗಾರ ಅವರಿಗೆ ಮನವಿ ಸಲ್ಲಿಸಲಾಯಿತು.

Advertisement
Advertisement

ಸ್ನೇಹಿತರ ಕಲಾ ಸಂಘದ ಅಧ್ಯಕ್ಷ ಕೊರಗಪ್ಪ ನಾಯ್ಕ ಕುರುಂಬುಡೇಲು ಶಾಸಕರಿಗೆ ಮನವಿ ಪತ್ರ ನೀಡಿದರು. ಪೂರ್ವಾಧ್ಯಕ್ಷರುಗಳಾದ ಚಂದ್ರಶೇಖರ ಪನ್ನೆ, ಪದ್ಮನಾಭ ಬೀಡು, ಆನಂದ ಗೌಡ ಪಡ್ಪು, ಕಾರ್ಯದರ್ಶಿ ಸಂಜಯ ನೆಟ್ಟಾರು, ಸದಸ್ಯರುಗಳಾದ ಶಿವರಾಮ ನಾಯಕ್ ಪನ್ನೆ, ಶೇಷಪ್ಪ ಕುಲಾಲ್ ಬಸ್ತಿಗುಡ್ಡೆ, ಜಯಂತ ಪೂಜಾರಿ ಕಾವಿನ ಮೂಲೆ, ಸತೀಶ್ ಕುಮಾರ್ ಕಿಲಂಗೋಡಿ ಉಪಸ್ಥಿತರಿದ್ದರು.

ಬೆಳ್ಳಾರೆ ಕೋಟೆಯಲ್ಲಿ ಒಂದು ಅಮರ ಸುಳ್ಯ ಸ್ವಾತಂತ್ರ್ಯ ಭವನ ನಿರ್ಮಾಣವಾಗಬೇಕು. ಆ ಭವನದಲ್ಲಿ 1837ರ ಬಂಡಾಯದಲ್ಲಿ ಪಾಲ್ಗೊಂಡ ಹಿರಿಯರ ಬಗೆಗಿನ ದಾಖಲೆಗಳು, ಆಗ ಬಳಸಲಾದ ಕತ್ತಿ, ಕೋವಿ ಮತ್ತು ಇತರ ಆಯುಧಗಳು, ರೈತ ಸಂಗ್ರಾಮದ ಬಗ್ಗೆ ಹೊರಬಂದಿರುವ ಎನ್. ಎಸ್. ದೇವಿಪ್ರಸಾದರ ಅಮರ ಸುಳ್ಯದ ಸ್ವಾತಂತ್ರ್ಯ ಸಮರ, ನಿರಂಜನರ ಕಲ್ಯಾಣ ಸ್ವಾಮಿ ಮತ್ತು ಅಪರಂಪಾರ, ಡಾ. ಪ್ರಭಾಕರ ಶಿಶಿಲರ ಮೂಡಣದ ಕೆಂಪು ಕಿರಣ ಮತ್ತು ಅಮರ ಕ್ರಾಂತಿ ವೀರರು, ವಿದ್ಯಾಧರ ಬಡ್ಡಡ್ಕ ಅವರ ಕೆದಂಬಾಡಿ ರಾಮಗೌಡ, ಪಾಲ್ತಾಡಿ ರಾಮಕೃಷ್ಣ ಆಚಾರ್‍ರ ಸ್ವಾತಂತ್ರ್ಯ ಯೋಧ ಕೆದಂಬಾಡಿ ರಾಮ ಗೌಡ, ಡಾ. ಪ್ರತಿಮಾ ಜಯರಾಂರ 1837ರ ಕೊಡಗು ಕೆನರಾ ಬಂಡಾಯ ಎಂಬಿತ್ಯಾದಿ ಕೃತಿಗಳಲ್ಲದೆ ಭಾರತದ ಸ್ವಾತಂತ್ರ್ಯ ಹೋರಾಟದ ಗಾಂಧೀ, ನೆಹರೂ, ಸುಭಾಶ್ಚಂದ್ರ ಭೋಸ್, ವಲ್ಲಭಬಾಯಿ ಪಟೇಲರಂತಹ ದೇಶ ಭಕ್ತರ ಬಗೆಗಿನ ಕೃತಿಗಳು ಓದುಗರಿಗೆ ಲಭ್ಯವಾಗುವಂತೆ ಮಾಡುವ ಗ್ರಂಥಾಲಯವೊಂದು ನಿರ್ಮಾಣವಾಗಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ. ಸ್ವಾತಂತ್ರ್ಯ ಸಮರದ ವಿವರದ ಕೆಲವು ದಾಖಲೆಗಳನ್ನು ಮತ್ತು ಅಮರಕ್ರಾಂತಿ ಸ್ವಾತಂತ್ರ್ಯ ಭವನದ ನಿರ್ಮಾಣ ವೆಚ್ಚದ ನೀಲಿ ನಕಾಶೆಯೊಂದನ್ನು ಪತ್ರದೊಂದಿಗೆ ನೀಡಲಾಯಿತು.

Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-06-2025 | ಕರಾವಳಿ ಜಿಲ್ಲೆಯಲ್ಲಿ ಮಳೆ ಏನಾಯ್ತು..? | ಜುಲೈ 6 ನಂತರ ಮಳೆ ಕಡಿಮೆ..?

ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ. ಇದರಿಂದ ಜುಲೈ ತಿಂಗಳ…

5 hours ago

ಮುಂಗಾರು ಮಳೆ ಸುದ್ದಿ | ಕೇರಳದಲ್ಲಿ ತೀವ್ರಗೊಳ್ಳಲಿದೆ ಮಳೆ | ದೆಹಲಿಯಲ್ಲೂ ಮಳೆ ಎಚ್ಚರಿಕೆ | ಹಿಮಾಚಲದಲ್ಲಿ 20 ಕ್ಕೂ ಹೆಚ್ಚು ಜೀವಹಾನಿ |

ಮುಂದಿನ 24 ಗಂಟೆಗಳಲ್ಲಿ ದೆಹಲಿಯನ್ನು ಮುಂಗಾರು ಆವರಿಸುವ ಸಾಧ್ಯತೆಯಿದೆ. ಎರಡು ದಿನಗಳ ಹಿಂದೆ…

12 hours ago

ಆಷಾಢ ಶುಕ್ರವಾರ, ಈ ಸ್ಥಳದಲ್ಲಿ ಈ ರಾಶಿಯವರು ಯಾವುದಾದರೂ ದೇವಿಯ ದೇವಸ್ಥಾನದಲ್ಲಿ ಹಿಟ್ಟಿನ ದೀಪ ಹಚ್ಚಿಡಿ..

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

13 hours ago

ಹೊಸರುಚಿ | ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್

ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್ :   ಬೇಕಾಗುವ ಸಾಮಗ್ರಿಗಳು  ಮತ್ತು ಮಾಡುವ…

13 hours ago

ಪರಿಸರ ವಿಚಾರದಲ್ಲಿ ಸರ್ಕಾರದ ಬೇಜವಾಬ್ದಾರಿ..! ಇಲ್ಲಿದೆ ಅಭಿಪ್ರಾಯ..

ಪರಿಸರಕ್ಕೆ ಸಂಬಂಧಿಸಿದ ವಿವಿಧ ವಿಷಯಗಳಲ್ಲಿ ಸರ್ಕಾರ ಬೇಜಾವಾಬ್ದಾರಿ ತೋರಿದೆ ಎಂದು ಲೇಖಕ ಅರವಿಂದ್‌…

20 hours ago

ಬೆಂಗಳೂರು-ಕಣ್ಣೂರು ರೈಲು ವಿಳಂಬ | ಸಕಾಲಿಕ ಸೇವೆಗೆ ಪ್ರಯಾಣಿಕರ ಒತ್ತಾಯ

ಕಣ್ಣೂರು-ಬೆಂಗಳೂರು ರೈಲು ತಡವಾಗಿ ಆಗಮಿಸುತ್ತಿದ್ದು ರೈಲು ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ತಕ್ಷಣವೇ ಇಲಾಖೆ…

21 hours ago