Advertisement
ಸುದ್ದಿಗಳು

ಬೆಳ್ಳಾರೆಯಲ್ಲಿ ಸ್ವಾತಂತ್ರ್ಯ ಸದನ ನಿರ್ಮಿಸಲು ಶಾಸಕರಿಗೆ ಮನವಿ

Share

ಬೆಳ್ಳಾರೆ: ಸ್ವಾತಂತ್ರ್ಯ ಹೋರಾಟದ ಐತಿಹಾಸಿಕ ಸ್ಥಳವಾಗಿದ್ದ ಬೆಳ್ಳಾರೆಯ ಬಂಗ್ಲೆಗುಡ್ಡೆಯಲ್ಲಿ ಅಮರ ಸುಳ್ಯ ಸ್ವಾತಂತ್ರ್ಯ ಸದನ ನಿರ್ಮಾಣವಾಗಬೇಕು ಎಂದು ಬೆಳ್ಳಾರೆಯ ಸ್ನೇಹಿತರ ಕಲಾ ಸಂಘದ ವತಿಯಿಂದ ಸುಳ್ಯ ಶಾಸಕ ಎಸ್ ಅಂಗಾರ ಅವರಿಗೆ ಮನವಿ ಸಲ್ಲಿಸಲಾಯಿತು.

ಸ್ನೇಹಿತರ ಕಲಾ ಸಂಘದ ಅಧ್ಯಕ್ಷ ಕೊರಗಪ್ಪ ನಾಯ್ಕ ಕುರುಂಬುಡೇಲು ಶಾಸಕರಿಗೆ ಮನವಿ ಪತ್ರ ನೀಡಿದರು. ಪೂರ್ವಾಧ್ಯಕ್ಷರುಗಳಾದ ಚಂದ್ರಶೇಖರ ಪನ್ನೆ, ಪದ್ಮನಾಭ ಬೀಡು, ಆನಂದ ಗೌಡ ಪಡ್ಪು, ಕಾರ್ಯದರ್ಶಿ ಸಂಜಯ ನೆಟ್ಟಾರು, ಸದಸ್ಯರುಗಳಾದ ಶಿವರಾಮ ನಾಯಕ್ ಪನ್ನೆ, ಶೇಷಪ್ಪ ಕುಲಾಲ್ ಬಸ್ತಿಗುಡ್ಡೆ, ಜಯಂತ ಪೂಜಾರಿ ಕಾವಿನ ಮೂಲೆ, ಸತೀಶ್ ಕುಮಾರ್ ಕಿಲಂಗೋಡಿ ಉಪಸ್ಥಿತರಿದ್ದರು.

ಬೆಳ್ಳಾರೆ ಕೋಟೆಯಲ್ಲಿ ಒಂದು ಅಮರ ಸುಳ್ಯ ಸ್ವಾತಂತ್ರ್ಯ ಭವನ ನಿರ್ಮಾಣವಾಗಬೇಕು. ಆ ಭವನದಲ್ಲಿ 1837ರ ಬಂಡಾಯದಲ್ಲಿ ಪಾಲ್ಗೊಂಡ ಹಿರಿಯರ ಬಗೆಗಿನ ದಾಖಲೆಗಳು, ಆಗ ಬಳಸಲಾದ ಕತ್ತಿ, ಕೋವಿ ಮತ್ತು ಇತರ ಆಯುಧಗಳು, ರೈತ ಸಂಗ್ರಾಮದ ಬಗ್ಗೆ ಹೊರಬಂದಿರುವ ಎನ್. ಎಸ್. ದೇವಿಪ್ರಸಾದರ ಅಮರ ಸುಳ್ಯದ ಸ್ವಾತಂತ್ರ್ಯ ಸಮರ, ನಿರಂಜನರ ಕಲ್ಯಾಣ ಸ್ವಾಮಿ ಮತ್ತು ಅಪರಂಪಾರ, ಡಾ. ಪ್ರಭಾಕರ ಶಿಶಿಲರ ಮೂಡಣದ ಕೆಂಪು ಕಿರಣ ಮತ್ತು ಅಮರ ಕ್ರಾಂತಿ ವೀರರು, ವಿದ್ಯಾಧರ ಬಡ್ಡಡ್ಕ ಅವರ ಕೆದಂಬಾಡಿ ರಾಮಗೌಡ, ಪಾಲ್ತಾಡಿ ರಾಮಕೃಷ್ಣ ಆಚಾರ್‍ರ ಸ್ವಾತಂತ್ರ್ಯ ಯೋಧ ಕೆದಂಬಾಡಿ ರಾಮ ಗೌಡ, ಡಾ. ಪ್ರತಿಮಾ ಜಯರಾಂರ 1837ರ ಕೊಡಗು ಕೆನರಾ ಬಂಡಾಯ ಎಂಬಿತ್ಯಾದಿ ಕೃತಿಗಳಲ್ಲದೆ ಭಾರತದ ಸ್ವಾತಂತ್ರ್ಯ ಹೋರಾಟದ ಗಾಂಧೀ, ನೆಹರೂ, ಸುಭಾಶ್ಚಂದ್ರ ಭೋಸ್, ವಲ್ಲಭಬಾಯಿ ಪಟೇಲರಂತಹ ದೇಶ ಭಕ್ತರ ಬಗೆಗಿನ ಕೃತಿಗಳು ಓದುಗರಿಗೆ ಲಭ್ಯವಾಗುವಂತೆ ಮಾಡುವ ಗ್ರಂಥಾಲಯವೊಂದು ನಿರ್ಮಾಣವಾಗಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ. ಸ್ವಾತಂತ್ರ್ಯ ಸಮರದ ವಿವರದ ಕೆಲವು ದಾಖಲೆಗಳನ್ನು ಮತ್ತು ಅಮರಕ್ರಾಂತಿ ಸ್ವಾತಂತ್ರ್ಯ ಭವನದ ನಿರ್ಮಾಣ ವೆಚ್ಚದ ನೀಲಿ ನಕಾಶೆಯೊಂದನ್ನು ಪತ್ರದೊಂದಿಗೆ ನೀಡಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

6 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

1 day ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

2 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago