Advertisement
ಸುದ್ದಿಗಳು

ಬೆಳ್ಳಾರೆಯಲ್ಲಿ ಸ್ವಾತಂತ್ರ್ಯ ಸದನ ನಿರ್ಮಿಸಲು ಶಾಸಕರಿಗೆ ಮನವಿ

Share

ಬೆಳ್ಳಾರೆ: ಸ್ವಾತಂತ್ರ್ಯ ಹೋರಾಟದ ಐತಿಹಾಸಿಕ ಸ್ಥಳವಾಗಿದ್ದ ಬೆಳ್ಳಾರೆಯ ಬಂಗ್ಲೆಗುಡ್ಡೆಯಲ್ಲಿ ಅಮರ ಸುಳ್ಯ ಸ್ವಾತಂತ್ರ್ಯ ಸದನ ನಿರ್ಮಾಣವಾಗಬೇಕು ಎಂದು ಬೆಳ್ಳಾರೆಯ ಸ್ನೇಹಿತರ ಕಲಾ ಸಂಘದ ವತಿಯಿಂದ ಸುಳ್ಯ ಶಾಸಕ ಎಸ್ ಅಂಗಾರ ಅವರಿಗೆ ಮನವಿ ಸಲ್ಲಿಸಲಾಯಿತು.

ಸ್ನೇಹಿತರ ಕಲಾ ಸಂಘದ ಅಧ್ಯಕ್ಷ ಕೊರಗಪ್ಪ ನಾಯ್ಕ ಕುರುಂಬುಡೇಲು ಶಾಸಕರಿಗೆ ಮನವಿ ಪತ್ರ ನೀಡಿದರು. ಪೂರ್ವಾಧ್ಯಕ್ಷರುಗಳಾದ ಚಂದ್ರಶೇಖರ ಪನ್ನೆ, ಪದ್ಮನಾಭ ಬೀಡು, ಆನಂದ ಗೌಡ ಪಡ್ಪು, ಕಾರ್ಯದರ್ಶಿ ಸಂಜಯ ನೆಟ್ಟಾರು, ಸದಸ್ಯರುಗಳಾದ ಶಿವರಾಮ ನಾಯಕ್ ಪನ್ನೆ, ಶೇಷಪ್ಪ ಕುಲಾಲ್ ಬಸ್ತಿಗುಡ್ಡೆ, ಜಯಂತ ಪೂಜಾರಿ ಕಾವಿನ ಮೂಲೆ, ಸತೀಶ್ ಕುಮಾರ್ ಕಿಲಂಗೋಡಿ ಉಪಸ್ಥಿತರಿದ್ದರು.

ಬೆಳ್ಳಾರೆ ಕೋಟೆಯಲ್ಲಿ ಒಂದು ಅಮರ ಸುಳ್ಯ ಸ್ವಾತಂತ್ರ್ಯ ಭವನ ನಿರ್ಮಾಣವಾಗಬೇಕು. ಆ ಭವನದಲ್ಲಿ 1837ರ ಬಂಡಾಯದಲ್ಲಿ ಪಾಲ್ಗೊಂಡ ಹಿರಿಯರ ಬಗೆಗಿನ ದಾಖಲೆಗಳು, ಆಗ ಬಳಸಲಾದ ಕತ್ತಿ, ಕೋವಿ ಮತ್ತು ಇತರ ಆಯುಧಗಳು, ರೈತ ಸಂಗ್ರಾಮದ ಬಗ್ಗೆ ಹೊರಬಂದಿರುವ ಎನ್. ಎಸ್. ದೇವಿಪ್ರಸಾದರ ಅಮರ ಸುಳ್ಯದ ಸ್ವಾತಂತ್ರ್ಯ ಸಮರ, ನಿರಂಜನರ ಕಲ್ಯಾಣ ಸ್ವಾಮಿ ಮತ್ತು ಅಪರಂಪಾರ, ಡಾ. ಪ್ರಭಾಕರ ಶಿಶಿಲರ ಮೂಡಣದ ಕೆಂಪು ಕಿರಣ ಮತ್ತು ಅಮರ ಕ್ರಾಂತಿ ವೀರರು, ವಿದ್ಯಾಧರ ಬಡ್ಡಡ್ಕ ಅವರ ಕೆದಂಬಾಡಿ ರಾಮಗೌಡ, ಪಾಲ್ತಾಡಿ ರಾಮಕೃಷ್ಣ ಆಚಾರ್‍ರ ಸ್ವಾತಂತ್ರ್ಯ ಯೋಧ ಕೆದಂಬಾಡಿ ರಾಮ ಗೌಡ, ಡಾ. ಪ್ರತಿಮಾ ಜಯರಾಂರ 1837ರ ಕೊಡಗು ಕೆನರಾ ಬಂಡಾಯ ಎಂಬಿತ್ಯಾದಿ ಕೃತಿಗಳಲ್ಲದೆ ಭಾರತದ ಸ್ವಾತಂತ್ರ್ಯ ಹೋರಾಟದ ಗಾಂಧೀ, ನೆಹರೂ, ಸುಭಾಶ್ಚಂದ್ರ ಭೋಸ್, ವಲ್ಲಭಬಾಯಿ ಪಟೇಲರಂತಹ ದೇಶ ಭಕ್ತರ ಬಗೆಗಿನ ಕೃತಿಗಳು ಓದುಗರಿಗೆ ಲಭ್ಯವಾಗುವಂತೆ ಮಾಡುವ ಗ್ರಂಥಾಲಯವೊಂದು ನಿರ್ಮಾಣವಾಗಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ. ಸ್ವಾತಂತ್ರ್ಯ ಸಮರದ ವಿವರದ ಕೆಲವು ದಾಖಲೆಗಳನ್ನು ಮತ್ತು ಅಮರಕ್ರಾಂತಿ ಸ್ವಾತಂತ್ರ್ಯ ಭವನದ ನಿರ್ಮಾಣ ವೆಚ್ಚದ ನೀಲಿ ನಕಾಶೆಯೊಂದನ್ನು ಪತ್ರದೊಂದಿಗೆ ನೀಡಲಾಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

36 minutes ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

6 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

6 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

23 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

1 day ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

1 day ago