ಸುದ್ದಿಗಳು

ಬೆಳ್ಳಾರೆಯಲ್ಲಿ ಹೃದ್ರೋಗ ತಪಾಸಣಾ ಶಿಬಿರ ಮತ್ತು ಸಲಹೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬೆಳ್ಳಾರೆ : ಹಿತಾಯು ಕ್ಲಿನಿಕ್ ಮತ್ತು ಥೆರಪಿಸೆಂಟರ್ ಬೆಳ್ಳಾರೆ, ಟ್ರಿಕಾಗೋ, ಕೆ.ಎಂ.ಸಿ. ಆಸ್ಪತ್ರೆ ಮಂಗಳೂರು ಹಾಗೂ ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಇವುಗಳ ಸಹಭಾಗಿತ್ವದಲ್ಲಿ ಬೆಳ್ಳಾರೆಯ ಡಾ| ಶ್ರೇಯಸ್ ಭಾರದ್ವಾಜ್‍ ಅವರ ಹಿತಾಯು ಥೆರಪಿ ಸೆಂಟರ್ ನಲ್ಲಿ 15 ದಿನಗಳ ಹೃದ್ರೋಗ ತಪಾಸಣಾ ಶಿಬಿರ ಮತ್ತು ಸಲಹಾ ಶಿಬಿರ ಪ್ರಾರಂಭಗೊಂಡಿತು.

Advertisement

ಕೆ.ಎಂ.ಸಿ. ಆಸ್ಪತ್ರೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಮನಮೋಹನ ಮಾತನಾಡಿ, ಇಂದಿನ ಒತ್ತಡದ ವಾತಾವರಣದಲ್ಲಿ ಹೃದಯ ಸಂಬಂಧಿ ಎದೆನೋವು, ರಕ್ತದೊತ್ತಡ, ಉಸಿರಾಟ ತೊಂದರೆ, ಹೆಚ್ಚು ಕೊಬ್ಬಿನಾಂಶ, ಅನಿಯಮಿತ ಹೃದಯ ಬಡಿತ ಮೊದಲಾದ ಲಕ್ಷಣಗಳು ಕಂಡು ಬರುತ್ತಿದ್ದು,  ಇದರ ಶುಶ್ರೂಯೆ ಅತೀ ಅಗತ್ಯವಿರುತ್ತದೆ ಎಂದು ಹೇಳಿದರು.

ಅದರೊಂದಿಗೆ ಗ್ರಾಮೀಣ ಪ್ರದೇಶದ ಎಲ್ಲಾ ವರ್ಗದ ಜನರಿಗೂ ಆರೋಗ್ಯ ಕಾಳಜಿ ಬಗ್ಗೆ ಕೆ.ಎಂ.ಸಿ. ಮಂಗಳೂರು ತ್ವರಿತಗತಿಯ ಇ.ಸಿ.ಜಿ. ಸೇವೆಯನ್ನು ಹಿತಾಯು ಸೆಂಟರ್ ನಲ್ಲಿ ತೆರೆದಿದ್ದು, ರೋಗಿಗಳಿಗೆ ಕೇವಲ 10 ನಿಮಿಷದಲ್ಲಿ ಕೆ.ಎಂ.ಸಿ.ಯ ತಜ್ಞ ವೈದ್ಯರಿಂದ ರಿಪೋರ್ಟ್ ನೀಡಿ ಸೂಕ್ತ ಸಲಹೆಯನ್ನು ನೀಡಲಿರುತ್ತಾರೆ. ಮುಂದಿನ ದಿನಗಳಲ್ಲಿ ಇ.ಸಿ.ಜಿ. ಸೇವೆಯು ದಿನದ 24 ಗಂಟೆಯೂ ಸಾರ್ವಜನಿಕರಿಗೆ ಬೆಳ್ಳಾರೆಯ ಹಿತಾಯು ಕ್ಲಿನಿಕ್‍ನಲ್ಲಿ ಲಭ್ಯವಿರುತ್ತದೆ. ಬೆಳ್ಳಾರೆ ಪರಿಸರ್ ಸಾರ್ವಜನಿಕರು ಸದ್ರಿ ಸೇವೆ ಹಾಗೂ ಮಣಿಪಾಲ್ ಆರೋಗ್ಯ ಕಾರ್ಡ್‍ನ ವ್ಯವಸ್ಥೆಯನ್ನು ಸದುಪಯೋಗ ಪಡಿಸುವಂತೆ ಮಾಹಿತಿ ನೀಡಿದರು.

ರೋಟರಿ ಕ್ಲಬ್ ಬೆಳ್ಳಾರೆ ಟೌನ್‍ನ ಅಧ್ಯಕ್ಷ ರೊ| ಬಿ. ನರಸಿಂಹ ಜೋಶಿ ಸಭಾಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ರೋಟರಿಯ ನಿಕಟಪೂರ್ವ ಅಧ್ಯಕ್ಷ ಬಿ. ಸುಬ್ರಹ್ಮಣ್ಯ ಜೋಶಿ, ವಿನಯಕುಮಾರ್ .ಕೆ, ದಂತವೈದ್ಯ ಡಾ| ಅನಂತಕೃಷ್ಣ ಕೆದಿಲ ಹಾಗೂ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

ಡಾ| ಶ್ರೇಯಸ್ ಭಾರದ್ವಾಜ್ ಆರೋಗ್ಯ ಪದ್ಧತಿಯ ಬಗ್ಗೆ ವಿವರ ನೀಡಿ, ವಂದಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭೂಮಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ಮರುಯಾನ | ಕ್ಯಾಲಿಫೋರ್ನಿಯಾದ ಕಡಲತೀರದಲ್ಲಿ ಇಳಿಯಲಿರುವ ನೌಕೆ

ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…

7 hours ago

ಬದುಕು ಪುರಾಣ | ಮನವನ್ನು ಚುಚ್ಚುವ ಅಳಿಲು

ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…

8 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಧಾತ್ರಿ ಕೆ ರಾವ್

ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…

23 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಭವಿಷ್ಯ ಕೆ ಪಿ

ಭವಿಷ್ಯ ಕೆ ಪಿ, 8 ನೇ ತರಗತಿ, ಸೈಂಟ್‌ ಆನ್ಸ್‌ ಇಂಗ್ಲಿಷ್‌ ಮೀಡಿಯಂ…

23 hours ago

ಜು.16 ರಿಂದ ಕರಾವಳಿ-ಮಲೆನಾಡು ಭಾಗದಲ್ಲಿ ಭಾರೀ ಮಳೆ ಎನ್ನುತ್ತಿದೆ ಹವಾಮಾನ ವರದಿ

ರಾಜ್ಯದ ವಿವಿದೆಡೆ ಸದ್ಯ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೂಡಾ…

23 hours ago