Advertisement
ಸುದ್ದಿಗಳು

ಬೆಳ್ಳಾರೆಯಿಂದ ಸುಳ್ಯಕ್ಕೆ ಗಾಂಧಿನಡಿಗೆ ಆರಂಭ

Share

ಸುಳ್ಯ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ೧೫೦ನೇ ಜನ್ಮ ದಿನಾಚರಣೆಯ ಅಂಗವಾಗಿ ಸುಳ್ಯದ ಗಾಂಧಿ ಚಿಂತನ ವೇದಿಕೆಯು ವತಿಯಿಂದ ಬೆಳ್ಳಾರೆಯಿಂದ ಸುಳ್ಯದವರೆಗೆ ನಡೆಯುತ್ತಿರುವ ಗಾಂಧಿ ನಡಿಗೆ ಆರಂಭಗೊಂಡಿದೆ. ಮಹಾತ್ಮಾಗಾಂಧೀಜಿಯವರ ಆದರ್ಶ ಮತ್ತು ಚಿಂತನೆಗಳು ಎಲ್ಲೆಡೆ ಪಸರಿಸಬೇಕು ಎಂಬ ಉದ್ದೇಶದಿಂದ ಗಾಂಧಿನಡಿಗೆ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮಕ್ಕೆ ಮುನ್ನ ಗಾಂಧಿ ಚಿಂತನೆ ಕಾರ್ಯಕ್ರಮ ನಡೆಯಿತು. ಮಾಜಿ ವಿಧಾನ ಪರಿಷತ್ ಸದಸ್ಯ ಅಣ್ಣಾ ವಿನಯಚಂದ್ರ ಗಾಂಧಿ ಚಿಂತನೆ ನಡೆಸಿಕೊಟ್ಟರು.

ಹಿರಿಯರಾದ ಕಿಲಂಗೋಡಿ ಶಂಕರ ರಾವ್, ಡಾ.ಗೋಪಿನಾಥ್, ಚಿದಾನಂದ ರಾವ್ ಪಾಟಾಜೆ, ಮಹಮ್ಮದ್ ಇಂಜಿನಿಯರ್, ಮಣಿಕ್ಕಾರ ಗೋಪಾಲಕೃಷ್ಣ ಶ್ಯಾನುಭಾಗ್, ಕುಂಞಪ್ಪ ಮಾಸ್ತರ್, ಐತ್ತ ಪಾಟಾಜೆ ಮತ್ತಿತರರು ಉಪಸ್ಥಿತರಿದ್ದರು.

ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶಕುಂತಲಾ ನಾಗರಾಜ್ ಸ್ವಾಗತಿಸಿದರು. ಗಾಂಧಿ ಚಿಂತನಾ ವೇದಿಕೆ ಮುಖ್ಯ ಸಂಚಾಲಕ ಹರೀಶ್ ಬಂಟ್ವಾಳ್ ಪ್ರಸ್ತಾವನೆಗೈದರು. ಕೊರಗಪ್ಪ ಕುರುಂಬುಡೇಲು ವಂದಿಸಿದರು. ಗಾಂಧಿ ಚಿಂತನಾ ವೇದಿಕೆಯ ಡಾ.ಸುಂದರ್ ಕೇನಾಜೆ ಕಾರ್ಯಕ್ರಮ ನಿರೂಪಿಸಿದರು.
ಬಿಳಿ ಜುಬ್ಬ ಮತ್ತು ಗಾಂಧಿ ಟೋಪಿ ಧರಿಸಿದ ನೂರ ಐವತ್ತು ಮಂದಿ ಗಾಂಧಿ ನಡಿಗೆಗೆಯಲ್ಲಿ ಭಾಗವಹಿಸುತ್ತಿದ್ದಾರೆ.

ಇವರೊಂದಿಗೆ ಸುಳ್ಯ ನೆಹರು ಸ್ಮಾರಕ ಕಾಲೇಜಿನ ಕಾಲೇಜಿನ ಎನ್‌ಸಿಸಿ ಮತ್ತು ಎನ್‌ಎಸ್‌ಎಸ್ ಘಟಕ ಶ್ರೀ.ಧ,ಗ್ರಾ.ಯೋಜನೆಯ ಸದಸ್ಯರು, ಯುವಜನ ಸಂಯುಕ್ತ ಮಂಡಳಿ ಸದಸ್ಯರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸಾರ್ವಜನಿಕರು ಭಾಗವಹಿಸುತ್ತಿದ್ದಾರೆ. ಗಾಂಧಿ ನಡಿಗೆಯಲ್ಲಿ ರಾಷ್ಟ್ರ ಧ್ವಜಗಳು ರಾರಾಜಿಸುತ್ತಿದ್ದು ಗಾಂಧಿ ಭಾವಚಿತ್ರಕ್ಕೆ ಅಲ್ಲಲ್ಲಿ ಪುಷ್ಪಾರ್ಜನೆಯು ನಡೆಯುತ್ತಿದೆ. ಗಾಂಧಿ ಚಿಂತನ ವೇದಿಕೆಯ ಮುಖ್ಯ ಸಂಚಾಲಕ ಹರೀಶ್ ಬಂಟ್ವಾಳ್, ಸಂಚಾಲಕರುಗಳಾದ ಡಾ.ಸುಂದರ ಕೇನಾಜೆ, ದಿನೇಶ್ ಮಡಪ್ಪಾಡಿ ನೇತೃತ್ವ ವಹಿಸಿದ್ದಾರೆ. ಅಲ್ಲಲ್ಲಿ ಸ್ವಾಗತ, ಕಿರು ಸಭಾ ಕಾರ್ಯಕ್ರಮ ನಡೆದು ಮಧ್ಯಾಹ್ನ 3 ಗಂಟೆಗೆ ನಡಿಗೆ ಸುಳ್ಯಕ್ಕೆ ಆಗಮಿಸಲಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

6 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

6 hours ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

22 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

1 day ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

1 day ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

1 day ago