Advertisement
ಸುದ್ದಿಗಳು

ಬೆಳ್ಳಾರೆಯಿಂದ ಸುಳ್ಯಕ್ಕೆ ಗಾಂಧಿನಡಿಗೆ ಆರಂಭ

Share

ಸುಳ್ಯ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ೧೫೦ನೇ ಜನ್ಮ ದಿನಾಚರಣೆಯ ಅಂಗವಾಗಿ ಸುಳ್ಯದ ಗಾಂಧಿ ಚಿಂತನ ವೇದಿಕೆಯು ವತಿಯಿಂದ ಬೆಳ್ಳಾರೆಯಿಂದ ಸುಳ್ಯದವರೆಗೆ ನಡೆಯುತ್ತಿರುವ ಗಾಂಧಿ ನಡಿಗೆ ಆರಂಭಗೊಂಡಿದೆ. ಮಹಾತ್ಮಾಗಾಂಧೀಜಿಯವರ ಆದರ್ಶ ಮತ್ತು ಚಿಂತನೆಗಳು ಎಲ್ಲೆಡೆ ಪಸರಿಸಬೇಕು ಎಂಬ ಉದ್ದೇಶದಿಂದ ಗಾಂಧಿನಡಿಗೆ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮಕ್ಕೆ ಮುನ್ನ ಗಾಂಧಿ ಚಿಂತನೆ ಕಾರ್ಯಕ್ರಮ ನಡೆಯಿತು. ಮಾಜಿ ವಿಧಾನ ಪರಿಷತ್ ಸದಸ್ಯ ಅಣ್ಣಾ ವಿನಯಚಂದ್ರ ಗಾಂಧಿ ಚಿಂತನೆ ನಡೆಸಿಕೊಟ್ಟರು.

ಹಿರಿಯರಾದ ಕಿಲಂಗೋಡಿ ಶಂಕರ ರಾವ್, ಡಾ.ಗೋಪಿನಾಥ್, ಚಿದಾನಂದ ರಾವ್ ಪಾಟಾಜೆ, ಮಹಮ್ಮದ್ ಇಂಜಿನಿಯರ್, ಮಣಿಕ್ಕಾರ ಗೋಪಾಲಕೃಷ್ಣ ಶ್ಯಾನುಭಾಗ್, ಕುಂಞಪ್ಪ ಮಾಸ್ತರ್, ಐತ್ತ ಪಾಟಾಜೆ ಮತ್ತಿತರರು ಉಪಸ್ಥಿತರಿದ್ದರು.

ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶಕುಂತಲಾ ನಾಗರಾಜ್ ಸ್ವಾಗತಿಸಿದರು. ಗಾಂಧಿ ಚಿಂತನಾ ವೇದಿಕೆ ಮುಖ್ಯ ಸಂಚಾಲಕ ಹರೀಶ್ ಬಂಟ್ವಾಳ್ ಪ್ರಸ್ತಾವನೆಗೈದರು. ಕೊರಗಪ್ಪ ಕುರುಂಬುಡೇಲು ವಂದಿಸಿದರು. ಗಾಂಧಿ ಚಿಂತನಾ ವೇದಿಕೆಯ ಡಾ.ಸುಂದರ್ ಕೇನಾಜೆ ಕಾರ್ಯಕ್ರಮ ನಿರೂಪಿಸಿದರು.
ಬಿಳಿ ಜುಬ್ಬ ಮತ್ತು ಗಾಂಧಿ ಟೋಪಿ ಧರಿಸಿದ ನೂರ ಐವತ್ತು ಮಂದಿ ಗಾಂಧಿ ನಡಿಗೆಗೆಯಲ್ಲಿ ಭಾಗವಹಿಸುತ್ತಿದ್ದಾರೆ.

ಇವರೊಂದಿಗೆ ಸುಳ್ಯ ನೆಹರು ಸ್ಮಾರಕ ಕಾಲೇಜಿನ ಕಾಲೇಜಿನ ಎನ್‌ಸಿಸಿ ಮತ್ತು ಎನ್‌ಎಸ್‌ಎಸ್ ಘಟಕ ಶ್ರೀ.ಧ,ಗ್ರಾ.ಯೋಜನೆಯ ಸದಸ್ಯರು, ಯುವಜನ ಸಂಯುಕ್ತ ಮಂಡಳಿ ಸದಸ್ಯರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸಾರ್ವಜನಿಕರು ಭಾಗವಹಿಸುತ್ತಿದ್ದಾರೆ. ಗಾಂಧಿ ನಡಿಗೆಯಲ್ಲಿ ರಾಷ್ಟ್ರ ಧ್ವಜಗಳು ರಾರಾಜಿಸುತ್ತಿದ್ದು ಗಾಂಧಿ ಭಾವಚಿತ್ರಕ್ಕೆ ಅಲ್ಲಲ್ಲಿ ಪುಷ್ಪಾರ್ಜನೆಯು ನಡೆಯುತ್ತಿದೆ. ಗಾಂಧಿ ಚಿಂತನ ವೇದಿಕೆಯ ಮುಖ್ಯ ಸಂಚಾಲಕ ಹರೀಶ್ ಬಂಟ್ವಾಳ್, ಸಂಚಾಲಕರುಗಳಾದ ಡಾ.ಸುಂದರ ಕೇನಾಜೆ, ದಿನೇಶ್ ಮಡಪ್ಪಾಡಿ ನೇತೃತ್ವ ವಹಿಸಿದ್ದಾರೆ. ಅಲ್ಲಲ್ಲಿ ಸ್ವಾಗತ, ಕಿರು ಸಭಾ ಕಾರ್ಯಕ್ರಮ ನಡೆದು ಮಧ್ಯಾಹ್ನ 3 ಗಂಟೆಗೆ ನಡಿಗೆ ಸುಳ್ಯಕ್ಕೆ ಆಗಮಿಸಲಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅತಿವೃಷ್ಟಿ, ಬರ, ಹೀಟ್‌ ವೇವ್‌ಗಳಿಗೆ ಯಾರು ಕಾರಣ? ಐಐಟಿ ದೆಹಲಿ ಅಧ್ಯಯನದಿಂದ ಕುತೂಹಲಕಾರಿ ಮಾಹಿತಿ!

ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…

2 hours ago

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ

ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…

15 hours ago

Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ

18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…

16 hours ago

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…

16 hours ago

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

1 day ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

1 day ago