ಸುಳ್ಯ: ತಾಲೂಕಿನ ಪ್ರಮುಖ ಪೇಟೆ ಎನಿಸಿಕೊಂಡ ಬೆಳ್ಳಾರೆಯ ರಸ್ತೆಯ ಮಳೆಗಾಲದ ಪರಿಸ್ಥಿತಿ ಇಲ್ಲಿದೆ. ಇಡೀ ರಸ್ತೆಯಲ್ಲಿ ನೀರು ಹರಿಯುತ್ತಿದೆ. ಸಾಕಷ್ಟು ಬಾರಿ ಸಾರ್ವಜನಿಕರು ಮನವಿ ಮಾಡಿದರು ಪ್ರಯೋಜನ ಆಗಿಲ್ಲ.
ಬೆಳ್ಳಾರೆಯಲ್ಲಿ ಹದಿನೈದು ನಿಮಿಷ ಮಳೆ ಸುರಿದರೆ ಸಾಕು , ನೀರು ಹರಿದು ಹೋಗಲು ಇಲ್ಲಿನ ಚರಂಡಿ ವ್ಯವಸ್ಥೆ ಸರಿಯಿಲ್ಲದೇ ಮಳೆನೀರೆಲ್ಲ ರಸ್ತೆಯಲ್ಲಿ ಹರಿದು ಹೋಗುತ್ತದೆ. ಸಾರ್ವಜನಿಕರಿಗೆ, ವಾಹನ ಸವಾರರಿಗೆ ವರ್ತಕರಿಗಂತು, ಇದೊಂದು ನುಂಗಲಾರದ ತುತ್ತಾಗಿ ಪರಿಣಮಿಸಿದೆ.ಬೆಳ್ಳಾರೆ ಮೇಲಿನ ಪೇಟೆಯಲ್ಲಿನ ಸಮಸ್ಯೆ ವಿಪರಿತ, ಇದಕ್ಕೆ ಅಸಮರ್ಪಕ ಚರಂಡಿ ವ್ಯವಸ್ಥೆಯೇ ಮುಖ್ಯ ಕಾರಣ ಎಂಬುದು ಎಲ್ಲರಿಗೂ ತಿಳಿದಿದೆ. ಈ ಸಮಸ್ಯೆ ಇಂದು ನಿನ್ನೆಯದಲ್ಲ. ಇನ್ನಾದರು ಸಂಬಂಧ ಪಟ್ಟ ಅಧಿಕಾರಿಗಳು ಇದರ ಬಗ್ಗೆ ಗಮನಹರಿಸಿ , ಸೂಕ್ತ ಕ್ರಮ ಕೈಗೊಳ್ಳುವರೇ ಎಂದು ಸಾರ್ವಜನಿಕರು ಮತ್ತೆ ಮನವಿ ಮಾಡುತ್ತಾರೆ.
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…