ಬೆಳ್ಳಾರೆ: ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಶ್ವಥ ಕಟ್ಟೆ ಬಳಿ ಇರುವ ಹೊಳೆಯ ಬದಿ ತಡೆಗೋಡೆ ನಿರ್ಮಾಣ ಮಾಡಲು ಸಣ್ಣ ನೀರಾವರಿ ಇಲಾಖೆಯಿಂದ ಶಾಸಕ ಎಸ್.ಅಂಗಾರ ರೂ.20. ಲಕ್ಷ ಅನುದಾನ ಒದಗಿಕೊಟ್ಟಿದ್ದು ಇದಕ್ಕೆ ಗುದ್ದಲಿ ಪೂಜೆಯನ್ನು ನ.16 ರಂದು ಶಾಸಕರು ನೆರವೇರಿಸಿದರು. ದೇವಸ್ಥಾನದ ಪ್ರಧಾನ ಅರ್ಚಕ ಉದಯಕುಮಾರ್ ಪೂಜಾ ಕಾರ್ಯ ನೆರವೇರಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುನಿಲ್ ರೈ ಪುಡ್ಕಜೆ, ಸದಸ್ಯರಾದ ಸುರೇಶ್ ಕುಮಾರ್ ರೈ ಪನ್ನೆಗುತ್ತು, ಗುಣವತಿ ಮಂಡೇಪು, ಶಶಿಕಲಾ ಚಾವಡಿಬಾಗಿಲು, ನಾಗೇಶ್ ಕುಲಾಲ್, ಜಯರಾಮ ಉಮಿಕ್ಕಳ, ಎನ್.ಎಸ್.ಡಿ.ವಿಠಲದಾಸ್, ಜನಾರ್ಧನ, ಗ್ರಾಮ ಪಂಚಾಯತ್ ಸದಸ್ಯ ನವೀನ್ ರೈ ತಂಬಿನಮಕ್ಕಿ, ಪ್ರೇಮಚಂದ್ರ ಬೆಳ್ಳಾರೆ, ಚಂದ್ರಶೇಖರ ಪನ್ನೆ, ಮೋನಪ್ಪ ತಂಬಿನಮಕ್ಕಿ, ವಸಂತ, ಉಲ್ಲಾಸ್, ಮಹೇಶ್, ಕಂಟ್ರಾಕ್ಟರ್ ಮೂಸಾ ಹಾಜಿ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.
ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…
ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…