ಬೆಳ್ಳಾರೆ: ಋಣ ಮುಕ್ತ ಕಾಯ್ದೆ ಅನುಷ್ಠಾನ ಹೋರಾಟ ಸಮಿತಿ ಸುಳ್ಯ ಇದರ ವತಿಯಿಂದ ಋಣ ಮುಕ್ತ ಕಾಯ್ದೆ ಹಾಗು ಮಾಹಿತಿ ಶಿಬಿರ ಶುಕ್ರವಾರ ಬೆಳ್ಳಾರೆಯ ರಾಜೀವ್ ಗಾಂಧಿ ಸೇವಾ ಕೇಂದ್ರದಲ್ಲಿ ನಡೆಯಿತು.
ಸಂಪನ್ಮೂಲ ವ್ಯಕ್ತಿ ಎಂ.ಬಿ ಸದಾಶಿವ ಮಾತನಾಡಿ 2019-20ರ ಸಾಲಿನಲ್ಲಿ ಕರ್ನಾಟಕ ಸರಕಾರ ಜಾರಿಗೆ ತಂದ ಋಣ ಮುಕ್ತ ಕಾಯ್ದೆಯಿಂದ ಬಡ ಜನರು ಜನರು ಶೋಷಣೆಯಿಂದ ಮುಕ್ತರಾಗಲು ಇಂತಹ ಸದಾವಕಾಶಗಳನ್ನು ಬಳಸಿಕೊಳ್ಳಬೇಕು. ಅಗತ್ಯವಿದ್ದವರಿಗೆ ಮಾಹಿತಿಗಳನ್ನು ನೀಡಲಾಗುವುದು ಮತ್ತು ಅವರ ವಿವರಗಳನ್ನು ಗೌಪ್ಯವಿಡಲಾಗುವುದು ಎಂದರು.
ವೇದಿಕೆಯಲ್ಲಿ ಮಾಜಿ ತಾಲೂಕು ಪಂಚಾಯತ್ ಸದಸ್ಯ ಅನಿಲ್ ರೈ ಚಾವಡಿಬಾಗಿಲು, ಬೆಳ್ಳಾರೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮುಸ್ತಾಫಾ ಬೆಳ್ಳಾರೆ, ಭ್ರಷ್ಟಾಚಾರ ನಿಗ್ರಹ ದಳದ ಪ್ರಶಾಂತ್ ರೈ, ದಯಾಕರ ಆಳ್ವ ಉಪಸ್ಥಿತರಿದ್ದರು.
ಸಮಿತಿಯ ಸಂಚಾಲಕ ಸಚಿನ್ರಾಜ್ ಶೆಟ್ಟಿ ಸ್ವಾಗತಿಸಿ, ವಂದಿಸಿದರು. ಸಮಿತಿ ಅಧ್ಯಕ್ಷ ಆನಂದ ಬೆಳ್ಳಾರೆ ಕಾರ್ಯಕ್ರಮ ನಿರೂಪಿಸಿದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…