ಬೆಳ್ಳಾರೆ: ಋಣ ಮುಕ್ತ ಕಾಯ್ದೆ ಅನುಷ್ಠಾನ ಹೋರಾಟ ಸಮಿತಿ ಸುಳ್ಯ ಇದರ ವತಿಯಿಂದ ಋಣ ಮುಕ್ತ ಕಾಯ್ದೆ ಹಾಗು ಮಾಹಿತಿ ಶಿಬಿರ ಶುಕ್ರವಾರ ಬೆಳ್ಳಾರೆಯ ರಾಜೀವ್ ಗಾಂಧಿ ಸೇವಾ ಕೇಂದ್ರದಲ್ಲಿ ನಡೆಯಿತು.
ಸಂಪನ್ಮೂಲ ವ್ಯಕ್ತಿ ಎಂ.ಬಿ ಸದಾಶಿವ ಮಾತನಾಡಿ 2019-20ರ ಸಾಲಿನಲ್ಲಿ ಕರ್ನಾಟಕ ಸರಕಾರ ಜಾರಿಗೆ ತಂದ ಋಣ ಮುಕ್ತ ಕಾಯ್ದೆಯಿಂದ ಬಡ ಜನರು ಜನರು ಶೋಷಣೆಯಿಂದ ಮುಕ್ತರಾಗಲು ಇಂತಹ ಸದಾವಕಾಶಗಳನ್ನು ಬಳಸಿಕೊಳ್ಳಬೇಕು. ಅಗತ್ಯವಿದ್ದವರಿಗೆ ಮಾಹಿತಿಗಳನ್ನು ನೀಡಲಾಗುವುದು ಮತ್ತು ಅವರ ವಿವರಗಳನ್ನು ಗೌಪ್ಯವಿಡಲಾಗುವುದು ಎಂದರು.
ವೇದಿಕೆಯಲ್ಲಿ ಮಾಜಿ ತಾಲೂಕು ಪಂಚಾಯತ್ ಸದಸ್ಯ ಅನಿಲ್ ರೈ ಚಾವಡಿಬಾಗಿಲು, ಬೆಳ್ಳಾರೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮುಸ್ತಾಫಾ ಬೆಳ್ಳಾರೆ, ಭ್ರಷ್ಟಾಚಾರ ನಿಗ್ರಹ ದಳದ ಪ್ರಶಾಂತ್ ರೈ, ದಯಾಕರ ಆಳ್ವ ಉಪಸ್ಥಿತರಿದ್ದರು.
ಸಮಿತಿಯ ಸಂಚಾಲಕ ಸಚಿನ್ರಾಜ್ ಶೆಟ್ಟಿ ಸ್ವಾಗತಿಸಿ, ವಂದಿಸಿದರು. ಸಮಿತಿ ಅಧ್ಯಕ್ಷ ಆನಂದ ಬೆಳ್ಳಾರೆ ಕಾರ್ಯಕ್ರಮ ನಿರೂಪಿಸಿದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…