ಬೆಳ್ಳಾರೆ: ಸ್ನೇಹಿತರ ಕಲಾ ಸಂಘ ಬೆಳ್ಳಾರೆ ಮತ್ತು ಜ್ಞಾನದೀಪ ಶಿಕ್ಷಣ ತರಬೇತಿ ಮತ್ತು ಅಭಿವೃದ್ಧಿ ಸಂಸ್ಥೆಯ ವತಿಯಿಂದ 64ನೇ ಕನ್ನಡ ರಾಜ್ಯೋತ್ಸವ ಅಂಬೇಡ್ಕರ್ ಭವನದ ಮುಂಭಾಗದಲ್ಲಿ ನಡೆಯಿತು. ಸ್ನೇಹಿತರ ಕಲಾ ಸಂಘದ ಅಧ್ಯಕ್ಷ ಕೊರಗಪ್ಪ ಕುರುಂಬುಡೇಲು ದ್ವಜಾರೋಹಣಗೈದರು.
ಪರ ರಾಜ್ಯದ ಕನ್ನಡಾಭಿಮಾನಿಗಳಿಗೆ ಸಮ್ಮಾನ: ಪರ ರಾಜ್ಯದಿಂದ ಬಂದು ಇಲ್ಲಿ ನೆಲೆಸಿ ಕನ್ನಡ ಕಲಿತು ಕನ್ನಡ ಭಾಷೆಯಲ್ಲಿ ವ್ಯವಹಸರಿಸುತ್ತಿರುವ ರಾಜಸ್ಥಾನದ ಅನಿಲ್ ಬರ್ಫಾ, ಶಾಂತಿದೇವಿ, ನರಸಿಂಗ್ ಪಟೇಲ್ ಹಾಗೂ ಕೇರಳದ ವಿನೋದ್ ಇವರುಗಳನ್ನು ಸಮ್ಮಾನಿಸಲಾಯಿತು. ಬೆಳ್ಳಾರೆ ಪರಿಸರದ ಪೂರ್ವ ಪ್ರಾಥಮಿಕ ,ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಗಳನ್ನು ನಡೆಸಿ ಬಹುಮಾನ ವಿತರಿಸಲಾಯಿತು.
ಸ್ನೇಹಿತರಕಲಾ ಸಂಘದ ನಿಕಟಪೂರ್ವಾಧ್ಯಕ್ಷ ಆನಂದ ಗೌಡ ಪಡ್ಪು, ಜ್ಞಾನದೀಪ ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಉಪಸ್ಥಿತರಿದ್ದರು. ಕೊರಗೊಪ್ಪ ಕುರುಂಬುಡೇಲು ಸ್ವಾಗತಿಸಿದರು. ಸ್ನೇಹಿತರ ಕಲಾ ಸಂಘದ ಕಾರ್ಯದರ್ಶಿ ಸಂಜಯ್ ನೆಟ್ಟಾರು ವಂದಿಸಿದರು. ಜ್ಞಾನದೀಪ ಸಂಸ್ಥೆಯ ಕನ್ನಡ ಉಪನ್ಯಾಸಕ ಗಣೇಶ್ ನಾಯಕ್ ಕಾರ್ಯಕ್ರಮ ನಿರ್ವಹಿಸಿದರು.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…