ಬೆಳ್ಳಾರೆ: ಸ್ನೇಹಿತರ ಕಲಾ ಸಂಘ ಬೆಳ್ಳಾರೆ ಮತ್ತು ಜ್ಞಾನದೀಪ ಶಿಕ್ಷಣ ತರಬೇತಿ ಮತ್ತು ಅಭಿವೃದ್ಧಿ ಸಂಸ್ಥೆಯ ವತಿಯಿಂದ 64ನೇ ಕನ್ನಡ ರಾಜ್ಯೋತ್ಸವ ಅಂಬೇಡ್ಕರ್ ಭವನದ ಮುಂಭಾಗದಲ್ಲಿ ನಡೆಯಿತು. ಸ್ನೇಹಿತರ ಕಲಾ ಸಂಘದ ಅಧ್ಯಕ್ಷ ಕೊರಗಪ್ಪ ಕುರುಂಬುಡೇಲು ದ್ವಜಾರೋಹಣಗೈದರು.
ಪರ ರಾಜ್ಯದ ಕನ್ನಡಾಭಿಮಾನಿಗಳಿಗೆ ಸಮ್ಮಾನ: ಪರ ರಾಜ್ಯದಿಂದ ಬಂದು ಇಲ್ಲಿ ನೆಲೆಸಿ ಕನ್ನಡ ಕಲಿತು ಕನ್ನಡ ಭಾಷೆಯಲ್ಲಿ ವ್ಯವಹಸರಿಸುತ್ತಿರುವ ರಾಜಸ್ಥಾನದ ಅನಿಲ್ ಬರ್ಫಾ, ಶಾಂತಿದೇವಿ, ನರಸಿಂಗ್ ಪಟೇಲ್ ಹಾಗೂ ಕೇರಳದ ವಿನೋದ್ ಇವರುಗಳನ್ನು ಸಮ್ಮಾನಿಸಲಾಯಿತು. ಬೆಳ್ಳಾರೆ ಪರಿಸರದ ಪೂರ್ವ ಪ್ರಾಥಮಿಕ ,ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಗಳನ್ನು ನಡೆಸಿ ಬಹುಮಾನ ವಿತರಿಸಲಾಯಿತು.
ಸ್ನೇಹಿತರಕಲಾ ಸಂಘದ ನಿಕಟಪೂರ್ವಾಧ್ಯಕ್ಷ ಆನಂದ ಗೌಡ ಪಡ್ಪು, ಜ್ಞಾನದೀಪ ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಉಪಸ್ಥಿತರಿದ್ದರು. ಕೊರಗೊಪ್ಪ ಕುರುಂಬುಡೇಲು ಸ್ವಾಗತಿಸಿದರು. ಸ್ನೇಹಿತರ ಕಲಾ ಸಂಘದ ಕಾರ್ಯದರ್ಶಿ ಸಂಜಯ್ ನೆಟ್ಟಾರು ವಂದಿಸಿದರು. ಜ್ಞಾನದೀಪ ಸಂಸ್ಥೆಯ ಕನ್ನಡ ಉಪನ್ಯಾಸಕ ಗಣೇಶ್ ನಾಯಕ್ ಕಾರ್ಯಕ್ರಮ ನಿರ್ವಹಿಸಿದರು.
ಕಾಸರಗೋಡು ಜಿಲ್ಲೆಯ ದೈಗೋಳಿಯಲ್ಲಿರುವ ಸಾಯಿನಿಕೇತನ ಸೇವಾಶ್ರಮಕ್ಕೆ ಮಂಗಳೂರು ಎಂಆರ್ಪಿಎಲ್ ಪ್ರಾಯೋಜಕತ್ವದಲ್ಲಿ ನಿರ್ಮಾಣಗೊಂಡ ಕಟ್ಟದ…
ಮತದಾನ ಏಕೆ ಮಾಡಬೇಕು, ಯೋಚಿಸಿ ಏಕೆ ಮತದಾನ ಮಾಡಲೇಬೇಕು..? ಈ ಬಗ್ಗೆ ಅಭಿಪ್ರಾಯ…
ರಾಜ್ಯಕ್ಕೆ ಕೇಂದ್ರದಿಂದ(Central Govt) ಬರಬೇಕಾದ ಬರ ಪರಿಹಾರ ಕುರಿತಂತೆ ರಾಜ್ಯ ಹಾಗೂ ಕೇಂದ್ರ…
ಪರಿಸರ ಔಷಧ ಶಾಸ್ತ್ರವು(Environmental Medicine) ಸಾಮಾನ್ಯವಾಗಿ ಮಾನವನ ಆರೋಗ್ಯದ(Human health) ಮೇಲೆ ನಕಾರಾತ್ಮಕ…
ಕರ್ನಾಟಕದಲ್ಲಿ(Karnakta) ಮೊದಲ ಹಂತದ ಚುನಾವಣೆ(Election) ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ(Campaign)…