ಬೆಳ್ಳಾರೆ: ಸ್ನೇಹಿತರ ಕಲಾ ಸಂಘ ಬೆಳ್ಳಾರೆ ಮತ್ತು ಜ್ಞಾನದೀಪ ಶಿಕ್ಷಣ ತರಬೇತಿ ಮತ್ತು ಅಭಿವೃದ್ಧಿ ಸಂಸ್ಥೆಯ ವತಿಯಿಂದ 64ನೇ ಕನ್ನಡ ರಾಜ್ಯೋತ್ಸವ ಅಂಬೇಡ್ಕರ್ ಭವನದ ಮುಂಭಾಗದಲ್ಲಿ ನಡೆಯಿತು. ಸ್ನೇಹಿತರ ಕಲಾ ಸಂಘದ ಅಧ್ಯಕ್ಷ ಕೊರಗಪ್ಪ ಕುರುಂಬುಡೇಲು ದ್ವಜಾರೋಹಣಗೈದರು.
ಪರ ರಾಜ್ಯದ ಕನ್ನಡಾಭಿಮಾನಿಗಳಿಗೆ ಸಮ್ಮಾನ: ಪರ ರಾಜ್ಯದಿಂದ ಬಂದು ಇಲ್ಲಿ ನೆಲೆಸಿ ಕನ್ನಡ ಕಲಿತು ಕನ್ನಡ ಭಾಷೆಯಲ್ಲಿ ವ್ಯವಹಸರಿಸುತ್ತಿರುವ ರಾಜಸ್ಥಾನದ ಅನಿಲ್ ಬರ್ಫಾ, ಶಾಂತಿದೇವಿ, ನರಸಿಂಗ್ ಪಟೇಲ್ ಹಾಗೂ ಕೇರಳದ ವಿನೋದ್ ಇವರುಗಳನ್ನು ಸಮ್ಮಾನಿಸಲಾಯಿತು. ಬೆಳ್ಳಾರೆ ಪರಿಸರದ ಪೂರ್ವ ಪ್ರಾಥಮಿಕ ,ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಗಳನ್ನು ನಡೆಸಿ ಬಹುಮಾನ ವಿತರಿಸಲಾಯಿತು.
ಸ್ನೇಹಿತರಕಲಾ ಸಂಘದ ನಿಕಟಪೂರ್ವಾಧ್ಯಕ್ಷ ಆನಂದ ಗೌಡ ಪಡ್ಪು, ಜ್ಞಾನದೀಪ ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಉಪಸ್ಥಿತರಿದ್ದರು. ಕೊರಗೊಪ್ಪ ಕುರುಂಬುಡೇಲು ಸ್ವಾಗತಿಸಿದರು. ಸ್ನೇಹಿತರ ಕಲಾ ಸಂಘದ ಕಾರ್ಯದರ್ಶಿ ಸಂಜಯ್ ನೆಟ್ಟಾರು ವಂದಿಸಿದರು. ಜ್ಞಾನದೀಪ ಸಂಸ್ಥೆಯ ಕನ್ನಡ ಉಪನ್ಯಾಸಕ ಗಣೇಶ್ ನಾಯಕ್ ಕಾರ್ಯಕ್ರಮ ನಿರ್ವಹಿಸಿದರು.
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…