Advertisement

ಬೆಳ್ಳಾರೆ ಜ್ಞಾನದೀಪದಲ್ಲಿ ‘ಪರೀಕ್ಷೆ ಎದುರಿಸುವುದು ಹೇಗೆ?’ ತರಬೇತಿ ಕಾರ್ಯಕ್ರಮ

Share

ಬೆಳ್ಳಾರೆ: ಅಂಕ ಗಳಿಕೆಯನ್ನು ಮಾತ್ರ ಯೋಚಿಸದೇ ಭವಿಷ್ಯದ ಬಗ್ಗೆಯೂ ವಿದ್ಯಾರ್ಥಿಗಳು ಯೋಚಿಸಿಕೊಂಡು ಓದಿನಲ್ಲಿ ತೊಡಗಿದಾಗ ಯಶಸ್ಸು ಗಳಿಸಲು ಸಾಧ್ಯ. ಉನ್ನತ ಶೈಕ್ಷಣಿಕ ಭವಿಷ್ಯ ರೂಪಿಸಿಕೋಳ್ಳುವುದಕ್ಕೆ ಪರೀಕ್ಷೆಯನ್ನು ಉತ್ತಮ ರೀತಿಯಲ್ಲಿ ಎದುರಿಸುವುದು ಅನಿವಾರ್ಯ. ಇಚ್ಛಾಶಕ್ತಿ ಮತ್ತು ಶ್ರದ್ಧೆಯಿಂದ ಪರೀಕ್ಷೆಯನ್ನು ಸುಲಭವಾಗಿ ಎದುರಿಸಬಹುದು ಎಂದು ಶ್ರೀ ರಾಮಕುಂಕೇಶ್ವರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಸತೀಶ್ ಭಟ್ ಬಿಳಿನೆಲೆ ಹೇಳಿದರು.

ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್(ರಿ) ಪುತ್ತೂರು ಇದರ ವತಿಯಿಂದ ಜ್ಞಾನದೀಪ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ ಮತ್ತು ಇಂಟರ್ಯಾಕ್ಟ್ ಕ್ಲಬ್ ಸಹಭಾಗಿತ್ವದಲ್ಲಿ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ನಡೆದ ಪರೀಕ್ಷೆ ಎದುರಿಸುವುದು ಹೇಗೆ? ಎಂಬ ವಿಷಯದ ತರಬೇತು ಕಾರ್ಯಕ್ರಮದಲ್ಲಿ ಅವರು ತರಬೇತಿ ನೀಡಿದರು.

ಅಧ್ಯಯನ ತಂತ್ರಗಳನ್ನು ಬಳಸಿ ಸುಲಭವಾಗಿ ಪರೀಕ್ಷೆಗೆ ಸಿದ್ಧತೆ ನಡೆಸುವ ಹಾಗೂ ಉತ್ತಮ ಅಂಕ ಗಳಿಸುವ ವಿಧಾನಗಳನ್ನು ಸತೀಶ್ ಭಟ್ ಬಿಳಿನೆಲೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಬೆಳ್ಳಾರೆ ಟೌನ್ ರೋಟರಿ ಕ್ಲಬ್ ಪೂರ್ವಾಧ್ಯಕ್ಷ ನವೀನ್ ಕುಮಾರ್ ರೈ ತಂಬಿನಮಕ್ಕಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್‍ನ ಟ್ರಸ್ಟಿ ದಿನಕರ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಜ್ಞಾನದೀಪ ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ, ಜ್ಞಾನದೀಪ ಇಂಟರ್ಯಾಕ್ಟ್ ಕ್ಲಬ್ ಅಧ್ಯಕ್ಷೆ ಯಶ್ಮಿತಾ ಉಪಸ್ಥಿತರಿದ್ದರು. ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್‍ನ ಸಾರ್ವಜನಿಕ ಸಂಪರ್ಕ ಅಧಿಕಾರಿ ಬಿಪಿನ್‍ಚಂದ್ರ ಸ್ವಾಗತಿಸಿದರು. ಶ್ರೀ ಸರಸ್ವತಿ ಸೌಹಾರ್ದ ಸಹಕಾರಿಯ ಬೆಳ್ಳಾರೆ ಶಾಖೆಯ ವ್ಯವಸ್ಥಾಪಕ ಶಿವಪ್ರಸಾದ್ ಪೆರುವಾಜೆ ವಂದಿಸಿದರು. ಉಪನ್ಯಾಸಕ ಗಣೇಶ್ ನಾಯಕ್ ಕಾರ್ಯಕ್ರಮ ನಿರ್ವಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಾಳ ಮಧ್ಯಾಹ್ನದ ಲಹರಿ

"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…

2 hours ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

3 hours ago

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

6 hours ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

6 hours ago

ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ

ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"

9 hours ago

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ

ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…

18 hours ago