ಕಲೆ-ಸಂಸ್ಕೃತಿ

ಬೆಳ್ಳಾರೆ ಜ್ಞಾನದೀಪ ಸಂಸ್ಥೆಯಲ್ಲಿ ಆಟಿ ಆಚರಣೆ : ಆಟಿ ಖಾದ್ಯಗಳ ಉಣಬಡಿಸಿದ ವಿದ್ಯಾರ್ಥಿಗಳು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬೆಳ್ಳಾರೆ: ಆಟಿ ತಿಂಗಳಲ್ಲಿ ಹಲವಾರು ವಿಶೇಷ ಆಚರಣೆಗಳು ಇರುತ್ತವೆ. ಆಟಿ ತಿಂಗಳಿನಲ್ಲಿ ವಿವಿಧ ವಿಶೇಷ ಖಾದ್ಯಗಳನ್ನು ತಯಾರಿಸುವುದು ಪದ್ದತಿ. ಮನೆಯಲ್ಲಿ ,ಶಾಲೆಗಳಲ್ಲಿ, ಸಾರ್ವಜನಿಕ ಸಮಾರಂಭಗಳಲ್ಲಿ ಆಟಿ ಸಂದರ್ಭ ವಿಶೇಷ ಭಕ್ಷಗಳನ್ನು ತಯಾರಿಸಲಾಗುತ್ತದೆ. ಅಂತೆಯೆ  ಜ್ಞಾನದೀಪ ಶಿಕ್ಷಣಸಂಸ್ಥೆಯಲ್ಲಿ ಆಟಿಯ ಪ್ರಯುಕ್ತ ವಿವಿಧ ವಿಶೇಷ ಖಾದ್ಯಗಳ ಪ್ರದರ್ಶನ ನಡೆದಿದ್ದು ವಿದ್ಯಾರ್ಥಿಗಳ ಪಾಕ ಕೌಶಲ್ಯ ಸಾಬೀತುಪಡಿಸಿದೆ.

Advertisement

ನೂರಕ್ಕಿಂತಲೂ ಅಧಿಕ ವಿದ್ಯಾರ್ಥಿಗಳು ಪಾಕ ಕೌಶಲ್ಯವನ್ನು ಅತಿಥಿಗಳು ಹಾಗು ಸಾರ್ವಜನಿಕರಿಗೆ ತೋರ್ಪಡಿಸಿ ಮೆಚ್ಚುಗೆಗೆ ಪಾತ್ರರಾದರು. ಅತಿಥಿಗಳಾದ ರಾಮಕುಂಜೇಶ್ವರ ಶಾಲೆಯ ತುಳು ಹಾಗು ಕನ್ನಡ ಭಾಷಾ ಶಿಕ್ಷಕಿ ಸರಿತಾ ಜನಾರ್ಧನ್ ಹಾಗೂ ಜ್ಞಾನದೀಪ ಶಿಕ್ಷಣ ಸಂಸ್ಥೆಯ ಶಿಕ್ಷಕ ಸಂಸ್ಥೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ವಿಶ್ವನಾಥ್ ಖಾದ್ಯಗಳ ರುಚಿ ಸವಿದ ನಂತರ ಮಕ್ಕಳೇ ತಯಾರಿಸಿದ ಖಾದ್ಯಗಳ ಮಾಹಿತಿಯನ್ನು ಪಡೆದುಕೊಂಡರು.

ಪ್ರಥಮ ಬಾರಿಗೆ ಆಯೋಜನೆ:ಸದಾ ಒಂದಿಲ್ಲೊಂದು ವಿದ್ಯಾರ್ಥಿ ಪೂರಕವಾದ ಕಾರ್ಯಕ್ರಮಗಳನ್ನು ಆಯೋಜನೆಗೊಳಿಸುತ್ತಿರುವ ಜ್ಞಾನದೀಪ ಶಿಕ್ಷಣ ಸಂಸ್ಥೆ ಪ್ರಥಮ ಬಾರಿಗೆ ತನ್ನ ವಿದ್ಯಾರ್ಥಿಗಳಿಗೆ ಆಟಿದ ಪೊಲಬನ್ನು ಆಯೋಜನೆಗೊಳಿಸಿ ವಿದ್ಯಾರ್ಥಿಗಳ ಪಾಕ ಕೌಶಲ್ಯ ಸಾಬೀತುಪಡಿಸಲು ಅವಕಾಶ ಕಲ್ಪಿಸಿದೆ. ವಿದ್ಯಾರ್ಥಿಗಳು ಕೂಡ ಕಳೆದೆರಡು ದಿನಗಳಿಂದ ನಿರಂತರ ಶ್ರಮ ವಹಿಸಿ ಆಟಿದ ಪೊಲಬುನಲ್ಲಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಿದ್ದಾರೆ. ಸಂಸ್ಥೆಯ ಶಿಕ್ಷಕರು ಮಾರ್ಗದರ್ಶಕರಾಗಿ ಸಹಕರಿಸಿದರು.

ವಿದ್ಯಾರ್ಥಿ ಬಾಣಸಿಗರ ಖಾದ್ಯಗಳ ವಿವರ:ನೂರಕ್ಕೂ ಅಧಿಕ ವಿದ್ಯಾರ್ಥಿಗಳು ತಲಾ ತಂಡವೊಂದರಂತೆ ರಚಿಸಿಕೊಂಡು ಬಗೆ ಬಗೆಯ 18 ಖಾದ್ಯಗಳನ್ನು ಪ್ರದರ್ಶನಕ್ಕೆ ಸಿದ್ದಪಡಿಸಿದರು. ಆಟಿ ಪೊಲಬುನಲ್ಲಿ ಪೀರೆಕಾಯಿ ಪಾಯಸ, ಸ್ವ ನಿರ್ಮಿತ ಗೋಬಿ ಮಚೂರಿ, ಪತ್ರೋಡೆ, ಕಾಯಿ ಹೋಳಿಗೆ, ಹೆಸರುಕಾಳು ಕೋಸಂಬರಿ, ಮಂಞಲ್‍ತಿರೆ, ವಿಶೇಷ ಉಪ್ಪಿನಕಾಯಿ, ಗುಳಿಯಪ್ಪ, ಬಟಾಟೆ ಬಜ್ಜಿ, ಅವಲಕ್ಕಿ, ಕಾಯಿಸುಳಿ ಕಡುಬು, ಪಂಚಕಜ್ಜಾಯ, ಹಲಸಿನ ಹಪ್ಪಳ ಅತಿಥಿಗಳು ಹಾಗು ಸಾರ್ವಜನಿಕರ ಪ್ರಮುಖ ಆಕರ್ಷಣಾ ತಿನಿಸುಗಳಾಗಿದ್ದವು.

Advertisement

 

Advertisement

ಮಕ್ಕಳಿಗೆ ಆಟಿಯ ಮಹತ್ವದ ಅರಿವಾಗಬೇಕು. ವಯಸ್ಸಿಗೂ ಮೀರಿದ ಪ್ರತಿಭೆಯನ್ನು ಮಕ್ಕಳು ಅನಾವರಣಗೊಳಿಸಿದ್ದಾರೆ. ಸ್ಪರ್ಧೆಗೆ ಬಿದ್ದವರಂತೆ ಪ್ರತಿಯೊಂದು ಖಾದ್ಯವನ್ನು ಮಕ್ಕಳು ವಿಭಿನ್ನವಾಗಿ ಮತ್ತು ರುಚಿಕಟ್ಟಾಗಿ ತಯಾರಿಸಿದ್ದಾರೆ. – ಸರಿತಾ ಜನಾರ್ಧನ್ ತುಳು ಮತ್ತು ಕನ್ನಡ ಶಿಕ್ಷಕಿ, ರಾಮಕುಂಜೇಶ್ವರ ಶಾಲೆ ಕಡಬ

ಮಕ್ಕಳು ಕೇವಲ ಪಠ್ಯಕ್ಕೆ ಸೀಮಿತವಾಗದೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ನಿಷ್ಣಾತರಾಗಬೇಕು. ಅದಕ್ಕಾಗಿ ಇಂತಹ ಆಚರಣೆ ಮತ್ತು ಚಟುವಟಿಕೆಗಳನ್ನು ನಡೆಸುತ್ತೇವೆ-  ಉಮೇಶ್ ಮಣಿಕ್ಕಾರ, ನಿರ್ದೇಶಕ ಜ್ಞಾನದೀಪ ಶಿಕ್ಷಣ ಸಂಸ್ಥೆ

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕಾವೇರಿ ನದಿ ನೀರು ಮಲಿನ ತಡೆಯಲು ಕ್ರಮ | ಅಸ್ತಿ ವಿಸರ್ಜನೆ ಮಾಡದಂತೆ ಸೂಚನೆ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…

6 hours ago

ಸ್ವಾತಂತ್ರ್ಯಕ್ಕಾಗಿ ಮದುವೆ

ಕುಟುಂಬ ಎಂಬುದು ಸಮಾಜದ ಆಧಾರ ಸ್ಥಂಭ. ಮದುವೆ ಎಂಬುದು ಈ ಸ್ಥಂಭದ ತಳಪಾಯ.…

6 hours ago

ಅಡಿಕೆ ಕೊಳೆರೋಗ | ಸಿಎಂ ಜೊತೆ ಶಾಸಕ ಅಶೋಕ್ ಕುಮಾರ್ ರೈ ಚರ್ಚೆ

ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ…

12 hours ago

ಹವಾಮಾನ ವರದಿ | 14-08-2025 | ಆ.20 ರವರೆಗೂ ಮಳೆ -ತುಂತುರು ಮಳೆ

15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

12 hours ago

ಸಗಣಿಯಿಂದ 5500 ಕಿಮೀ ಮಾಲಿನ್ಯ ರಹಿತ ಪ್ರಯಾಣ..!

ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್‌ಗೆ ಸಮಾನವಾದ ಮೀಥೇನ್…

19 hours ago

ಬಾಗಿಲು ಇಲ್ಲದ ಮನೆಯಂತಾದ ಕನ್ನಡ ಸ್ಥಿತಿ : ರಾಘವೇಶ್ವರ ಶ್ರೀ

ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…

20 hours ago