Advertisement
ಕಲೆ-ಸಂಸ್ಕೃತಿ

ಬೆಳ್ಳಾರೆ ಜ್ಞಾನದೀಪ ಸಂಸ್ಥೆಯಲ್ಲಿ ಆಟಿ ಆಚರಣೆ : ಆಟಿ ಖಾದ್ಯಗಳ ಉಣಬಡಿಸಿದ ವಿದ್ಯಾರ್ಥಿಗಳು

Share

ಬೆಳ್ಳಾರೆ: ಆಟಿ ತಿಂಗಳಲ್ಲಿ ಹಲವಾರು ವಿಶೇಷ ಆಚರಣೆಗಳು ಇರುತ್ತವೆ. ಆಟಿ ತಿಂಗಳಿನಲ್ಲಿ ವಿವಿಧ ವಿಶೇಷ ಖಾದ್ಯಗಳನ್ನು ತಯಾರಿಸುವುದು ಪದ್ದತಿ. ಮನೆಯಲ್ಲಿ ,ಶಾಲೆಗಳಲ್ಲಿ, ಸಾರ್ವಜನಿಕ ಸಮಾರಂಭಗಳಲ್ಲಿ ಆಟಿ ಸಂದರ್ಭ ವಿಶೇಷ ಭಕ್ಷಗಳನ್ನು ತಯಾರಿಸಲಾಗುತ್ತದೆ. ಅಂತೆಯೆ  ಜ್ಞಾನದೀಪ ಶಿಕ್ಷಣಸಂಸ್ಥೆಯಲ್ಲಿ ಆಟಿಯ ಪ್ರಯುಕ್ತ ವಿವಿಧ ವಿಶೇಷ ಖಾದ್ಯಗಳ ಪ್ರದರ್ಶನ ನಡೆದಿದ್ದು ವಿದ್ಯಾರ್ಥಿಗಳ ಪಾಕ ಕೌಶಲ್ಯ ಸಾಬೀತುಪಡಿಸಿದೆ.

ನೂರಕ್ಕಿಂತಲೂ ಅಧಿಕ ವಿದ್ಯಾರ್ಥಿಗಳು ಪಾಕ ಕೌಶಲ್ಯವನ್ನು ಅತಿಥಿಗಳು ಹಾಗು ಸಾರ್ವಜನಿಕರಿಗೆ ತೋರ್ಪಡಿಸಿ ಮೆಚ್ಚುಗೆಗೆ ಪಾತ್ರರಾದರು. ಅತಿಥಿಗಳಾದ ರಾಮಕುಂಜೇಶ್ವರ ಶಾಲೆಯ ತುಳು ಹಾಗು ಕನ್ನಡ ಭಾಷಾ ಶಿಕ್ಷಕಿ ಸರಿತಾ ಜನಾರ್ಧನ್ ಹಾಗೂ ಜ್ಞಾನದೀಪ ಶಿಕ್ಷಣ ಸಂಸ್ಥೆಯ ಶಿಕ್ಷಕ ಸಂಸ್ಥೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ವಿಶ್ವನಾಥ್ ಖಾದ್ಯಗಳ ರುಚಿ ಸವಿದ ನಂತರ ಮಕ್ಕಳೇ ತಯಾರಿಸಿದ ಖಾದ್ಯಗಳ ಮಾಹಿತಿಯನ್ನು ಪಡೆದುಕೊಂಡರು.

ಪ್ರಥಮ ಬಾರಿಗೆ ಆಯೋಜನೆ:ಸದಾ ಒಂದಿಲ್ಲೊಂದು ವಿದ್ಯಾರ್ಥಿ ಪೂರಕವಾದ ಕಾರ್ಯಕ್ರಮಗಳನ್ನು ಆಯೋಜನೆಗೊಳಿಸುತ್ತಿರುವ ಜ್ಞಾನದೀಪ ಶಿಕ್ಷಣ ಸಂಸ್ಥೆ ಪ್ರಥಮ ಬಾರಿಗೆ ತನ್ನ ವಿದ್ಯಾರ್ಥಿಗಳಿಗೆ ಆಟಿದ ಪೊಲಬನ್ನು ಆಯೋಜನೆಗೊಳಿಸಿ ವಿದ್ಯಾರ್ಥಿಗಳ ಪಾಕ ಕೌಶಲ್ಯ ಸಾಬೀತುಪಡಿಸಲು ಅವಕಾಶ ಕಲ್ಪಿಸಿದೆ. ವಿದ್ಯಾರ್ಥಿಗಳು ಕೂಡ ಕಳೆದೆರಡು ದಿನಗಳಿಂದ ನಿರಂತರ ಶ್ರಮ ವಹಿಸಿ ಆಟಿದ ಪೊಲಬುನಲ್ಲಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಿದ್ದಾರೆ. ಸಂಸ್ಥೆಯ ಶಿಕ್ಷಕರು ಮಾರ್ಗದರ್ಶಕರಾಗಿ ಸಹಕರಿಸಿದರು.

ವಿದ್ಯಾರ್ಥಿ ಬಾಣಸಿಗರ ಖಾದ್ಯಗಳ ವಿವರ:ನೂರಕ್ಕೂ ಅಧಿಕ ವಿದ್ಯಾರ್ಥಿಗಳು ತಲಾ ತಂಡವೊಂದರಂತೆ ರಚಿಸಿಕೊಂಡು ಬಗೆ ಬಗೆಯ 18 ಖಾದ್ಯಗಳನ್ನು ಪ್ರದರ್ಶನಕ್ಕೆ ಸಿದ್ದಪಡಿಸಿದರು. ಆಟಿ ಪೊಲಬುನಲ್ಲಿ ಪೀರೆಕಾಯಿ ಪಾಯಸ, ಸ್ವ ನಿರ್ಮಿತ ಗೋಬಿ ಮಚೂರಿ, ಪತ್ರೋಡೆ, ಕಾಯಿ ಹೋಳಿಗೆ, ಹೆಸರುಕಾಳು ಕೋಸಂಬರಿ, ಮಂಞಲ್‍ತಿರೆ, ವಿಶೇಷ ಉಪ್ಪಿನಕಾಯಿ, ಗುಳಿಯಪ್ಪ, ಬಟಾಟೆ ಬಜ್ಜಿ, ಅವಲಕ್ಕಿ, ಕಾಯಿಸುಳಿ ಕಡುಬು, ಪಂಚಕಜ್ಜಾಯ, ಹಲಸಿನ ಹಪ್ಪಳ ಅತಿಥಿಗಳು ಹಾಗು ಸಾರ್ವಜನಿಕರ ಪ್ರಮುಖ ಆಕರ್ಷಣಾ ತಿನಿಸುಗಳಾಗಿದ್ದವು.

 

ಮಕ್ಕಳಿಗೆ ಆಟಿಯ ಮಹತ್ವದ ಅರಿವಾಗಬೇಕು. ವಯಸ್ಸಿಗೂ ಮೀರಿದ ಪ್ರತಿಭೆಯನ್ನು ಮಕ್ಕಳು ಅನಾವರಣಗೊಳಿಸಿದ್ದಾರೆ. ಸ್ಪರ್ಧೆಗೆ ಬಿದ್ದವರಂತೆ ಪ್ರತಿಯೊಂದು ಖಾದ್ಯವನ್ನು ಮಕ್ಕಳು ವಿಭಿನ್ನವಾಗಿ ಮತ್ತು ರುಚಿಕಟ್ಟಾಗಿ ತಯಾರಿಸಿದ್ದಾರೆ. – ಸರಿತಾ ಜನಾರ್ಧನ್ ತುಳು ಮತ್ತು ಕನ್ನಡ ಶಿಕ್ಷಕಿ, ರಾಮಕುಂಜೇಶ್ವರ ಶಾಲೆ ಕಡಬ

ಮಕ್ಕಳು ಕೇವಲ ಪಠ್ಯಕ್ಕೆ ಸೀಮಿತವಾಗದೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ನಿಷ್ಣಾತರಾಗಬೇಕು. ಅದಕ್ಕಾಗಿ ಇಂತಹ ಆಚರಣೆ ಮತ್ತು ಚಟುವಟಿಕೆಗಳನ್ನು ನಡೆಸುತ್ತೇವೆ-  ಉಮೇಶ್ ಮಣಿಕ್ಕಾರ, ನಿರ್ದೇಶಕ ಜ್ಞಾನದೀಪ ಶಿಕ್ಷಣ ಸಂಸ್ಥೆ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ದಕ್ಷಿಣ ಕನ್ನಡ–ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರಿದೆ…!, ರಾಜ್ಯದಲ್ಲಿ ಎಲೆಚುಕ್ಕೆ ರೋಗದಿಂದ 88,559 ಹೆಕ್ಟೇರ್ ಹಾನಿ

ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರುವುದಾಗಿ ಅಂದಾಜಿಸಲಾಗಿದ್ದು,…

3 hours ago

ಚಾಮರಾಜನಗರ–ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ | ಬಿಸಿಲಿನ ನಡುವೆ ಇಳೆ ತಂಪು, ರೈತರಿಗೆ ಆತಂಕ

ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…

4 hours ago

ವಿದ್ಯುತ್ ಕೊರತೆಯ ನಿರ್ಣಾಯಕ ಸಮಸ್ಯೆಗೆ ಪರಿಹಾರ : ದೇಶದ ಸ್ಥಾಪಿತ ಸಾಮರ್ಥ್ಯ 520 ಗಿಗಾ ವ್ಯಾಟ್‌ ದಾಟಿತು

ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್‌ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…

4 hours ago

ಅಡಿಕೆ ಹಾನಿಕಾರಕವಲ್ಲ – ಅಧ್ಯಯನ ಪ್ರಗತಿಯಲ್ಲಿ | ಹಾಳೆತಟ್ಟೆ ಹಾನಿಕಾರಕವಲ್ಲ

ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…

12 hours ago

ಗಿರಿಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ | ಮುಳ್ಳಯ್ಯನಗಿರಿ–ಸೀತಾಳಯ್ಯಗಿರಿಯಲ್ಲಿ ಜಾಗೃತಿ ಕಾರ್ಯ

ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…

13 hours ago

ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ | ಲೀಟರ್‌ಗೆ ₹2 ಹೆಚ್ಚಳ ಘೋಷಿಸಿದ ಕೋಮುಲ್

ಯುಗಾದಿ ಹಿನ್ನೆಲೆ ಕೋಲಾರ ಜಿಲ್ಲೆಯಲ್ಲಿ ಹಾಲಿನ ದರ ಲೀಟರ್‌ಗೆ ₹2 ಹೆಚ್ಚಳ ಮಾಡಲಾಗಿದೆ.…

13 hours ago