Advertisement
ಕಲೆ-ಸಂಸ್ಕೃತಿ

ಬೆಳ್ಳಾರೆ ಜ್ಞಾನದೀಪ ಸಂಸ್ಥೆಯಲ್ಲಿ ಆಟಿ ಆಚರಣೆ : ಆಟಿ ಖಾದ್ಯಗಳ ಉಣಬಡಿಸಿದ ವಿದ್ಯಾರ್ಥಿಗಳು

Share

ಬೆಳ್ಳಾರೆ: ಆಟಿ ತಿಂಗಳಲ್ಲಿ ಹಲವಾರು ವಿಶೇಷ ಆಚರಣೆಗಳು ಇರುತ್ತವೆ. ಆಟಿ ತಿಂಗಳಿನಲ್ಲಿ ವಿವಿಧ ವಿಶೇಷ ಖಾದ್ಯಗಳನ್ನು ತಯಾರಿಸುವುದು ಪದ್ದತಿ. ಮನೆಯಲ್ಲಿ ,ಶಾಲೆಗಳಲ್ಲಿ, ಸಾರ್ವಜನಿಕ ಸಮಾರಂಭಗಳಲ್ಲಿ ಆಟಿ ಸಂದರ್ಭ ವಿಶೇಷ ಭಕ್ಷಗಳನ್ನು ತಯಾರಿಸಲಾಗುತ್ತದೆ. ಅಂತೆಯೆ  ಜ್ಞಾನದೀಪ ಶಿಕ್ಷಣಸಂಸ್ಥೆಯಲ್ಲಿ ಆಟಿಯ ಪ್ರಯುಕ್ತ ವಿವಿಧ ವಿಶೇಷ ಖಾದ್ಯಗಳ ಪ್ರದರ್ಶನ ನಡೆದಿದ್ದು ವಿದ್ಯಾರ್ಥಿಗಳ ಪಾಕ ಕೌಶಲ್ಯ ಸಾಬೀತುಪಡಿಸಿದೆ.

Advertisement
Advertisement
Advertisement
Advertisement

ನೂರಕ್ಕಿಂತಲೂ ಅಧಿಕ ವಿದ್ಯಾರ್ಥಿಗಳು ಪಾಕ ಕೌಶಲ್ಯವನ್ನು ಅತಿಥಿಗಳು ಹಾಗು ಸಾರ್ವಜನಿಕರಿಗೆ ತೋರ್ಪಡಿಸಿ ಮೆಚ್ಚುಗೆಗೆ ಪಾತ್ರರಾದರು. ಅತಿಥಿಗಳಾದ ರಾಮಕುಂಜೇಶ್ವರ ಶಾಲೆಯ ತುಳು ಹಾಗು ಕನ್ನಡ ಭಾಷಾ ಶಿಕ್ಷಕಿ ಸರಿತಾ ಜನಾರ್ಧನ್ ಹಾಗೂ ಜ್ಞಾನದೀಪ ಶಿಕ್ಷಣ ಸಂಸ್ಥೆಯ ಶಿಕ್ಷಕ ಸಂಸ್ಥೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ವಿಶ್ವನಾಥ್ ಖಾದ್ಯಗಳ ರುಚಿ ಸವಿದ ನಂತರ ಮಕ್ಕಳೇ ತಯಾರಿಸಿದ ಖಾದ್ಯಗಳ ಮಾಹಿತಿಯನ್ನು ಪಡೆದುಕೊಂಡರು.

Advertisement

ಪ್ರಥಮ ಬಾರಿಗೆ ಆಯೋಜನೆ:ಸದಾ ಒಂದಿಲ್ಲೊಂದು ವಿದ್ಯಾರ್ಥಿ ಪೂರಕವಾದ ಕಾರ್ಯಕ್ರಮಗಳನ್ನು ಆಯೋಜನೆಗೊಳಿಸುತ್ತಿರುವ ಜ್ಞಾನದೀಪ ಶಿಕ್ಷಣ ಸಂಸ್ಥೆ ಪ್ರಥಮ ಬಾರಿಗೆ ತನ್ನ ವಿದ್ಯಾರ್ಥಿಗಳಿಗೆ ಆಟಿದ ಪೊಲಬನ್ನು ಆಯೋಜನೆಗೊಳಿಸಿ ವಿದ್ಯಾರ್ಥಿಗಳ ಪಾಕ ಕೌಶಲ್ಯ ಸಾಬೀತುಪಡಿಸಲು ಅವಕಾಶ ಕಲ್ಪಿಸಿದೆ. ವಿದ್ಯಾರ್ಥಿಗಳು ಕೂಡ ಕಳೆದೆರಡು ದಿನಗಳಿಂದ ನಿರಂತರ ಶ್ರಮ ವಹಿಸಿ ಆಟಿದ ಪೊಲಬುನಲ್ಲಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಿದ್ದಾರೆ. ಸಂಸ್ಥೆಯ ಶಿಕ್ಷಕರು ಮಾರ್ಗದರ್ಶಕರಾಗಿ ಸಹಕರಿಸಿದರು.

ವಿದ್ಯಾರ್ಥಿ ಬಾಣಸಿಗರ ಖಾದ್ಯಗಳ ವಿವರ:ನೂರಕ್ಕೂ ಅಧಿಕ ವಿದ್ಯಾರ್ಥಿಗಳು ತಲಾ ತಂಡವೊಂದರಂತೆ ರಚಿಸಿಕೊಂಡು ಬಗೆ ಬಗೆಯ 18 ಖಾದ್ಯಗಳನ್ನು ಪ್ರದರ್ಶನಕ್ಕೆ ಸಿದ್ದಪಡಿಸಿದರು. ಆಟಿ ಪೊಲಬುನಲ್ಲಿ ಪೀರೆಕಾಯಿ ಪಾಯಸ, ಸ್ವ ನಿರ್ಮಿತ ಗೋಬಿ ಮಚೂರಿ, ಪತ್ರೋಡೆ, ಕಾಯಿ ಹೋಳಿಗೆ, ಹೆಸರುಕಾಳು ಕೋಸಂಬರಿ, ಮಂಞಲ್‍ತಿರೆ, ವಿಶೇಷ ಉಪ್ಪಿನಕಾಯಿ, ಗುಳಿಯಪ್ಪ, ಬಟಾಟೆ ಬಜ್ಜಿ, ಅವಲಕ್ಕಿ, ಕಾಯಿಸುಳಿ ಕಡುಬು, ಪಂಚಕಜ್ಜಾಯ, ಹಲಸಿನ ಹಪ್ಪಳ ಅತಿಥಿಗಳು ಹಾಗು ಸಾರ್ವಜನಿಕರ ಪ್ರಮುಖ ಆಕರ್ಷಣಾ ತಿನಿಸುಗಳಾಗಿದ್ದವು.

Advertisement

 

Advertisement

ಮಕ್ಕಳಿಗೆ ಆಟಿಯ ಮಹತ್ವದ ಅರಿವಾಗಬೇಕು. ವಯಸ್ಸಿಗೂ ಮೀರಿದ ಪ್ರತಿಭೆಯನ್ನು ಮಕ್ಕಳು ಅನಾವರಣಗೊಳಿಸಿದ್ದಾರೆ. ಸ್ಪರ್ಧೆಗೆ ಬಿದ್ದವರಂತೆ ಪ್ರತಿಯೊಂದು ಖಾದ್ಯವನ್ನು ಮಕ್ಕಳು ವಿಭಿನ್ನವಾಗಿ ಮತ್ತು ರುಚಿಕಟ್ಟಾಗಿ ತಯಾರಿಸಿದ್ದಾರೆ. – ಸರಿತಾ ಜನಾರ್ಧನ್ ತುಳು ಮತ್ತು ಕನ್ನಡ ಶಿಕ್ಷಕಿ, ರಾಮಕುಂಜೇಶ್ವರ ಶಾಲೆ ಕಡಬ

ಮಕ್ಕಳು ಕೇವಲ ಪಠ್ಯಕ್ಕೆ ಸೀಮಿತವಾಗದೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ನಿಷ್ಣಾತರಾಗಬೇಕು. ಅದಕ್ಕಾಗಿ ಇಂತಹ ಆಚರಣೆ ಮತ್ತು ಚಟುವಟಿಕೆಗಳನ್ನು ನಡೆಸುತ್ತೇವೆ-  ಉಮೇಶ್ ಮಣಿಕ್ಕಾರ, ನಿರ್ದೇಶಕ ಜ್ಞಾನದೀಪ ಶಿಕ್ಷಣ ಸಂಸ್ಥೆ

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

17 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

4 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago