Advertisement
ಕಲೆ-ಸಂಸ್ಕೃತಿ

ಬೆಳ್ಳಾರೆ ಜ್ಞಾನದೀಪ ಸಂಸ್ಥೆಯಲ್ಲಿ ಆಟಿ ಆಚರಣೆ : ಆಟಿ ಖಾದ್ಯಗಳ ಉಣಬಡಿಸಿದ ವಿದ್ಯಾರ್ಥಿಗಳು

Share

ಬೆಳ್ಳಾರೆ: ಆಟಿ ತಿಂಗಳಲ್ಲಿ ಹಲವಾರು ವಿಶೇಷ ಆಚರಣೆಗಳು ಇರುತ್ತವೆ. ಆಟಿ ತಿಂಗಳಿನಲ್ಲಿ ವಿವಿಧ ವಿಶೇಷ ಖಾದ್ಯಗಳನ್ನು ತಯಾರಿಸುವುದು ಪದ್ದತಿ. ಮನೆಯಲ್ಲಿ ,ಶಾಲೆಗಳಲ್ಲಿ, ಸಾರ್ವಜನಿಕ ಸಮಾರಂಭಗಳಲ್ಲಿ ಆಟಿ ಸಂದರ್ಭ ವಿಶೇಷ ಭಕ್ಷಗಳನ್ನು ತಯಾರಿಸಲಾಗುತ್ತದೆ. ಅಂತೆಯೆ  ಜ್ಞಾನದೀಪ ಶಿಕ್ಷಣಸಂಸ್ಥೆಯಲ್ಲಿ ಆಟಿಯ ಪ್ರಯುಕ್ತ ವಿವಿಧ ವಿಶೇಷ ಖಾದ್ಯಗಳ ಪ್ರದರ್ಶನ ನಡೆದಿದ್ದು ವಿದ್ಯಾರ್ಥಿಗಳ ಪಾಕ ಕೌಶಲ್ಯ ಸಾಬೀತುಪಡಿಸಿದೆ.

Advertisement
Advertisement

ನೂರಕ್ಕಿಂತಲೂ ಅಧಿಕ ವಿದ್ಯಾರ್ಥಿಗಳು ಪಾಕ ಕೌಶಲ್ಯವನ್ನು ಅತಿಥಿಗಳು ಹಾಗು ಸಾರ್ವಜನಿಕರಿಗೆ ತೋರ್ಪಡಿಸಿ ಮೆಚ್ಚುಗೆಗೆ ಪಾತ್ರರಾದರು. ಅತಿಥಿಗಳಾದ ರಾಮಕುಂಜೇಶ್ವರ ಶಾಲೆಯ ತುಳು ಹಾಗು ಕನ್ನಡ ಭಾಷಾ ಶಿಕ್ಷಕಿ ಸರಿತಾ ಜನಾರ್ಧನ್ ಹಾಗೂ ಜ್ಞಾನದೀಪ ಶಿಕ್ಷಣ ಸಂಸ್ಥೆಯ ಶಿಕ್ಷಕ ಸಂಸ್ಥೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ವಿಶ್ವನಾಥ್ ಖಾದ್ಯಗಳ ರುಚಿ ಸವಿದ ನಂತರ ಮಕ್ಕಳೇ ತಯಾರಿಸಿದ ಖಾದ್ಯಗಳ ಮಾಹಿತಿಯನ್ನು ಪಡೆದುಕೊಂಡರು.

Advertisement

ಪ್ರಥಮ ಬಾರಿಗೆ ಆಯೋಜನೆ:ಸದಾ ಒಂದಿಲ್ಲೊಂದು ವಿದ್ಯಾರ್ಥಿ ಪೂರಕವಾದ ಕಾರ್ಯಕ್ರಮಗಳನ್ನು ಆಯೋಜನೆಗೊಳಿಸುತ್ತಿರುವ ಜ್ಞಾನದೀಪ ಶಿಕ್ಷಣ ಸಂಸ್ಥೆ ಪ್ರಥಮ ಬಾರಿಗೆ ತನ್ನ ವಿದ್ಯಾರ್ಥಿಗಳಿಗೆ ಆಟಿದ ಪೊಲಬನ್ನು ಆಯೋಜನೆಗೊಳಿಸಿ ವಿದ್ಯಾರ್ಥಿಗಳ ಪಾಕ ಕೌಶಲ್ಯ ಸಾಬೀತುಪಡಿಸಲು ಅವಕಾಶ ಕಲ್ಪಿಸಿದೆ. ವಿದ್ಯಾರ್ಥಿಗಳು ಕೂಡ ಕಳೆದೆರಡು ದಿನಗಳಿಂದ ನಿರಂತರ ಶ್ರಮ ವಹಿಸಿ ಆಟಿದ ಪೊಲಬುನಲ್ಲಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಿದ್ದಾರೆ. ಸಂಸ್ಥೆಯ ಶಿಕ್ಷಕರು ಮಾರ್ಗದರ್ಶಕರಾಗಿ ಸಹಕರಿಸಿದರು.

ವಿದ್ಯಾರ್ಥಿ ಬಾಣಸಿಗರ ಖಾದ್ಯಗಳ ವಿವರ:ನೂರಕ್ಕೂ ಅಧಿಕ ವಿದ್ಯಾರ್ಥಿಗಳು ತಲಾ ತಂಡವೊಂದರಂತೆ ರಚಿಸಿಕೊಂಡು ಬಗೆ ಬಗೆಯ 18 ಖಾದ್ಯಗಳನ್ನು ಪ್ರದರ್ಶನಕ್ಕೆ ಸಿದ್ದಪಡಿಸಿದರು. ಆಟಿ ಪೊಲಬುನಲ್ಲಿ ಪೀರೆಕಾಯಿ ಪಾಯಸ, ಸ್ವ ನಿರ್ಮಿತ ಗೋಬಿ ಮಚೂರಿ, ಪತ್ರೋಡೆ, ಕಾಯಿ ಹೋಳಿಗೆ, ಹೆಸರುಕಾಳು ಕೋಸಂಬರಿ, ಮಂಞಲ್‍ತಿರೆ, ವಿಶೇಷ ಉಪ್ಪಿನಕಾಯಿ, ಗುಳಿಯಪ್ಪ, ಬಟಾಟೆ ಬಜ್ಜಿ, ಅವಲಕ್ಕಿ, ಕಾಯಿಸುಳಿ ಕಡುಬು, ಪಂಚಕಜ್ಜಾಯ, ಹಲಸಿನ ಹಪ್ಪಳ ಅತಿಥಿಗಳು ಹಾಗು ಸಾರ್ವಜನಿಕರ ಪ್ರಮುಖ ಆಕರ್ಷಣಾ ತಿನಿಸುಗಳಾಗಿದ್ದವು.

Advertisement

 

Advertisement

ಮಕ್ಕಳಿಗೆ ಆಟಿಯ ಮಹತ್ವದ ಅರಿವಾಗಬೇಕು. ವಯಸ್ಸಿಗೂ ಮೀರಿದ ಪ್ರತಿಭೆಯನ್ನು ಮಕ್ಕಳು ಅನಾವರಣಗೊಳಿಸಿದ್ದಾರೆ. ಸ್ಪರ್ಧೆಗೆ ಬಿದ್ದವರಂತೆ ಪ್ರತಿಯೊಂದು ಖಾದ್ಯವನ್ನು ಮಕ್ಕಳು ವಿಭಿನ್ನವಾಗಿ ಮತ್ತು ರುಚಿಕಟ್ಟಾಗಿ ತಯಾರಿಸಿದ್ದಾರೆ. – ಸರಿತಾ ಜನಾರ್ಧನ್ ತುಳು ಮತ್ತು ಕನ್ನಡ ಶಿಕ್ಷಕಿ, ರಾಮಕುಂಜೇಶ್ವರ ಶಾಲೆ ಕಡಬ

ಮಕ್ಕಳು ಕೇವಲ ಪಠ್ಯಕ್ಕೆ ಸೀಮಿತವಾಗದೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ನಿಷ್ಣಾತರಾಗಬೇಕು. ಅದಕ್ಕಾಗಿ ಇಂತಹ ಆಚರಣೆ ಮತ್ತು ಚಟುವಟಿಕೆಗಳನ್ನು ನಡೆಸುತ್ತೇವೆ-  ಉಮೇಶ್ ಮಣಿಕ್ಕಾರ, ನಿರ್ದೇಶಕ ಜ್ಞಾನದೀಪ ಶಿಕ್ಷಣ ಸಂಸ್ಥೆ

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

1 hour ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

3 hours ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

1 day ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

1 day ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

2 days ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

2 days ago