Advertisement
ಕಲೆ-ಸಂಸ್ಕೃತಿ

ಬೆಳ್ಳಾರೆ ಜ್ಞಾನದೀಪ ಸಂಸ್ಥೆಯಲ್ಲಿ ಆಟಿ ಆಚರಣೆ : ಆಟಿ ಖಾದ್ಯಗಳ ಉಣಬಡಿಸಿದ ವಿದ್ಯಾರ್ಥಿಗಳು

Share

ಬೆಳ್ಳಾರೆ: ಆಟಿ ತಿಂಗಳಲ್ಲಿ ಹಲವಾರು ವಿಶೇಷ ಆಚರಣೆಗಳು ಇರುತ್ತವೆ. ಆಟಿ ತಿಂಗಳಿನಲ್ಲಿ ವಿವಿಧ ವಿಶೇಷ ಖಾದ್ಯಗಳನ್ನು ತಯಾರಿಸುವುದು ಪದ್ದತಿ. ಮನೆಯಲ್ಲಿ ,ಶಾಲೆಗಳಲ್ಲಿ, ಸಾರ್ವಜನಿಕ ಸಮಾರಂಭಗಳಲ್ಲಿ ಆಟಿ ಸಂದರ್ಭ ವಿಶೇಷ ಭಕ್ಷಗಳನ್ನು ತಯಾರಿಸಲಾಗುತ್ತದೆ. ಅಂತೆಯೆ  ಜ್ಞಾನದೀಪ ಶಿಕ್ಷಣಸಂಸ್ಥೆಯಲ್ಲಿ ಆಟಿಯ ಪ್ರಯುಕ್ತ ವಿವಿಧ ವಿಶೇಷ ಖಾದ್ಯಗಳ ಪ್ರದರ್ಶನ ನಡೆದಿದ್ದು ವಿದ್ಯಾರ್ಥಿಗಳ ಪಾಕ ಕೌಶಲ್ಯ ಸಾಬೀತುಪಡಿಸಿದೆ.

ನೂರಕ್ಕಿಂತಲೂ ಅಧಿಕ ವಿದ್ಯಾರ್ಥಿಗಳು ಪಾಕ ಕೌಶಲ್ಯವನ್ನು ಅತಿಥಿಗಳು ಹಾಗು ಸಾರ್ವಜನಿಕರಿಗೆ ತೋರ್ಪಡಿಸಿ ಮೆಚ್ಚುಗೆಗೆ ಪಾತ್ರರಾದರು. ಅತಿಥಿಗಳಾದ ರಾಮಕುಂಜೇಶ್ವರ ಶಾಲೆಯ ತುಳು ಹಾಗು ಕನ್ನಡ ಭಾಷಾ ಶಿಕ್ಷಕಿ ಸರಿತಾ ಜನಾರ್ಧನ್ ಹಾಗೂ ಜ್ಞಾನದೀಪ ಶಿಕ್ಷಣ ಸಂಸ್ಥೆಯ ಶಿಕ್ಷಕ ಸಂಸ್ಥೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ವಿಶ್ವನಾಥ್ ಖಾದ್ಯಗಳ ರುಚಿ ಸವಿದ ನಂತರ ಮಕ್ಕಳೇ ತಯಾರಿಸಿದ ಖಾದ್ಯಗಳ ಮಾಹಿತಿಯನ್ನು ಪಡೆದುಕೊಂಡರು.

ಪ್ರಥಮ ಬಾರಿಗೆ ಆಯೋಜನೆ:ಸದಾ ಒಂದಿಲ್ಲೊಂದು ವಿದ್ಯಾರ್ಥಿ ಪೂರಕವಾದ ಕಾರ್ಯಕ್ರಮಗಳನ್ನು ಆಯೋಜನೆಗೊಳಿಸುತ್ತಿರುವ ಜ್ಞಾನದೀಪ ಶಿಕ್ಷಣ ಸಂಸ್ಥೆ ಪ್ರಥಮ ಬಾರಿಗೆ ತನ್ನ ವಿದ್ಯಾರ್ಥಿಗಳಿಗೆ ಆಟಿದ ಪೊಲಬನ್ನು ಆಯೋಜನೆಗೊಳಿಸಿ ವಿದ್ಯಾರ್ಥಿಗಳ ಪಾಕ ಕೌಶಲ್ಯ ಸಾಬೀತುಪಡಿಸಲು ಅವಕಾಶ ಕಲ್ಪಿಸಿದೆ. ವಿದ್ಯಾರ್ಥಿಗಳು ಕೂಡ ಕಳೆದೆರಡು ದಿನಗಳಿಂದ ನಿರಂತರ ಶ್ರಮ ವಹಿಸಿ ಆಟಿದ ಪೊಲಬುನಲ್ಲಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಿದ್ದಾರೆ. ಸಂಸ್ಥೆಯ ಶಿಕ್ಷಕರು ಮಾರ್ಗದರ್ಶಕರಾಗಿ ಸಹಕರಿಸಿದರು.

ವಿದ್ಯಾರ್ಥಿ ಬಾಣಸಿಗರ ಖಾದ್ಯಗಳ ವಿವರ:ನೂರಕ್ಕೂ ಅಧಿಕ ವಿದ್ಯಾರ್ಥಿಗಳು ತಲಾ ತಂಡವೊಂದರಂತೆ ರಚಿಸಿಕೊಂಡು ಬಗೆ ಬಗೆಯ 18 ಖಾದ್ಯಗಳನ್ನು ಪ್ರದರ್ಶನಕ್ಕೆ ಸಿದ್ದಪಡಿಸಿದರು. ಆಟಿ ಪೊಲಬುನಲ್ಲಿ ಪೀರೆಕಾಯಿ ಪಾಯಸ, ಸ್ವ ನಿರ್ಮಿತ ಗೋಬಿ ಮಚೂರಿ, ಪತ್ರೋಡೆ, ಕಾಯಿ ಹೋಳಿಗೆ, ಹೆಸರುಕಾಳು ಕೋಸಂಬರಿ, ಮಂಞಲ್‍ತಿರೆ, ವಿಶೇಷ ಉಪ್ಪಿನಕಾಯಿ, ಗುಳಿಯಪ್ಪ, ಬಟಾಟೆ ಬಜ್ಜಿ, ಅವಲಕ್ಕಿ, ಕಾಯಿಸುಳಿ ಕಡುಬು, ಪಂಚಕಜ್ಜಾಯ, ಹಲಸಿನ ಹಪ್ಪಳ ಅತಿಥಿಗಳು ಹಾಗು ಸಾರ್ವಜನಿಕರ ಪ್ರಮುಖ ಆಕರ್ಷಣಾ ತಿನಿಸುಗಳಾಗಿದ್ದವು.

 

ಮಕ್ಕಳಿಗೆ ಆಟಿಯ ಮಹತ್ವದ ಅರಿವಾಗಬೇಕು. ವಯಸ್ಸಿಗೂ ಮೀರಿದ ಪ್ರತಿಭೆಯನ್ನು ಮಕ್ಕಳು ಅನಾವರಣಗೊಳಿಸಿದ್ದಾರೆ. ಸ್ಪರ್ಧೆಗೆ ಬಿದ್ದವರಂತೆ ಪ್ರತಿಯೊಂದು ಖಾದ್ಯವನ್ನು ಮಕ್ಕಳು ವಿಭಿನ್ನವಾಗಿ ಮತ್ತು ರುಚಿಕಟ್ಟಾಗಿ ತಯಾರಿಸಿದ್ದಾರೆ. – ಸರಿತಾ ಜನಾರ್ಧನ್ ತುಳು ಮತ್ತು ಕನ್ನಡ ಶಿಕ್ಷಕಿ, ರಾಮಕುಂಜೇಶ್ವರ ಶಾಲೆ ಕಡಬ

ಮಕ್ಕಳು ಕೇವಲ ಪಠ್ಯಕ್ಕೆ ಸೀಮಿತವಾಗದೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ನಿಷ್ಣಾತರಾಗಬೇಕು. ಅದಕ್ಕಾಗಿ ಇಂತಹ ಆಚರಣೆ ಮತ್ತು ಚಟುವಟಿಕೆಗಳನ್ನು ನಡೆಸುತ್ತೇವೆ-  ಉಮೇಶ್ ಮಣಿಕ್ಕಾರ, ನಿರ್ದೇಶಕ ಜ್ಞಾನದೀಪ ಶಿಕ್ಷಣ ಸಂಸ್ಥೆ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

10 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

18 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

3 days ago