ಬೆಳ್ಳಾರೆ : ಬೆಳ್ಳಾರೆ ಪೊಲೀಸ್ ಠಾಣೆಯ ವತಿಯಿಂದ ಹಿರಿಯ ನಾಗರೀಕರ ಸಭೆ ನಡೆಯಿತು. ಠಾಣಾಧಿಕಾರಿ ಈರಯ್ಯ ಡಿ.ಎನ್ ಮಾಹಿತಿ ನೀಡಿ, ಮನೆಗೆ ಬರುವ ಅಪರಿಚಿತ ವ್ಯಕ್ತಿಗಳು, ಚಿನ್ನ ಪಾಲೀಶ್ ಮಾಡುವವರು, ಅನಾಮಧೇಯ ಕರೆ, ಬ್ಯಾಂಕ್ ಖಾತೆ ವಿವರ ಕೇಳುವ, ಎ.ಟಿ.ಎಂ ಸಂಖ್ಯೆ ಕೇಳುವವರ ಬಗ್ಗೆ ಜಾಗ್ರತೆ ವಹಿಸಲು ಸೂಚಿಸಿದರು. ಮನೆ ಮನೆಗಳಿಗೆ ಹಾಸಿಗೆ ದುರಸ್ಥಿ ನೆಪದಲ್ಲಿ, ಗುಜುರಿ ವ್ಯಾಪಾರಿ ಹೆಸರಿನಲ್ಲಿ ಬರುವ ವ್ಯಕ್ತಿಗಳ ಬಗ್ಗೆ ಎಚ್ಚರವಿರುವಂತೆ ಸಲಹೆ ನೀಡಿದರು.
ಹಿರಿಯ ನಾಗರೀಕರ ಗುರುತಿನ ಚೀಟಿ ಸೌಲಭ್ಯದ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಲಾಯಿತು. ಪ್ರೊಬೇಷನರಿ ಸಬ್ಇನ್ಸ್ಪೆಕ್ಟರ್ ಆಂಜನೇಯ ರೆಡ್ಡಿ ಸೇರಿದಂತೆ ಠಾಣೆಯ ಸಿಬಂದಿಗಳು, ಸುತ್ತಮುತ್ತಲಿನ ಊರುಗಳ ಹಿರಿಯ ನಾಗರೀಕರು ಉಪಸ್ಥಿತರಿದ್ದರು.
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…
ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…
ಕೋಲಾರ ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ ಕೈಗೊಳ್ಳಬೇಕು ಎಂದು…