ಬೆಳ್ಳಾರೆ : ಬೆಳ್ಳಾರೆ ಪೊಲೀಸ್ ಠಾಣೆಯ ವತಿಯಿಂದ ಹಿರಿಯ ನಾಗರೀಕರ ಸಭೆ ನಡೆಯಿತು. ಠಾಣಾಧಿಕಾರಿ ಈರಯ್ಯ ಡಿ.ಎನ್ ಮಾಹಿತಿ ನೀಡಿ, ಮನೆಗೆ ಬರುವ ಅಪರಿಚಿತ ವ್ಯಕ್ತಿಗಳು, ಚಿನ್ನ ಪಾಲೀಶ್ ಮಾಡುವವರು, ಅನಾಮಧೇಯ ಕರೆ, ಬ್ಯಾಂಕ್ ಖಾತೆ ವಿವರ ಕೇಳುವ, ಎ.ಟಿ.ಎಂ ಸಂಖ್ಯೆ ಕೇಳುವವರ ಬಗ್ಗೆ ಜಾಗ್ರತೆ ವಹಿಸಲು ಸೂಚಿಸಿದರು. ಮನೆ ಮನೆಗಳಿಗೆ ಹಾಸಿಗೆ ದುರಸ್ಥಿ ನೆಪದಲ್ಲಿ, ಗುಜುರಿ ವ್ಯಾಪಾರಿ ಹೆಸರಿನಲ್ಲಿ ಬರುವ ವ್ಯಕ್ತಿಗಳ ಬಗ್ಗೆ ಎಚ್ಚರವಿರುವಂತೆ ಸಲಹೆ ನೀಡಿದರು.
ಹಿರಿಯ ನಾಗರೀಕರ ಗುರುತಿನ ಚೀಟಿ ಸೌಲಭ್ಯದ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಲಾಯಿತು. ಪ್ರೊಬೇಷನರಿ ಸಬ್ಇನ್ಸ್ಪೆಕ್ಟರ್ ಆಂಜನೇಯ ರೆಡ್ಡಿ ಸೇರಿದಂತೆ ಠಾಣೆಯ ಸಿಬಂದಿಗಳು, ಸುತ್ತಮುತ್ತಲಿನ ಊರುಗಳ ಹಿರಿಯ ನಾಗರೀಕರು ಉಪಸ್ಥಿತರಿದ್ದರು.
ಕೆಆರ್ಎಸ್ ಅಣೆಕಟ್ಟಿನ ನೀರಿನ ಮಟ್ಟ ಕೇವಲ 15 ದಿನಗಳಲ್ಲಿ 8 ಅಡಿ ಕುಸಿದಿದೆ.…
ತುಮಕೂರಿನಲ್ಲಿ ನವಿಲುಗಳಲ್ಲಿ H5N1 ಸೋಂಕು ದೃಢಪಟ್ಟಿದ್ದು, ನಾಲ್ಕು ಗ್ರಾಮಗಳನ್ನು ಕಂಟೋನ್ಮೆಂಟ್ ವಲಯಗಳಾಗಿ ಘೋಷಿಸಲಾಗಿದೆ.…
ಯಾದಗಿರಿ ಜಿಲ್ಲೆಯ 45 ಗ್ರಾಮಗಳಿಗೆ ಬಾಡಿಗೆ ಕೊಳವೆಬಾವಿಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ.…
ಗುರುವಾಯನಕೆರೆ–ಉಪ್ಪಿನಂಗಡಿ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ ₹13 ಕೋಟಿ ಅನುಮೋದನೆ ನೀಡಲಾಗಿದೆ. ಈ ಯೋಜನೆಯಿಂದ…
ಹೊಳೆಹೊನ್ನೂರಿನಲ್ಲಿ ನಡೆದ ಅಡಿಕೆ ಕಳ್ಳತನ ಪ್ರಕರಣದಲ್ಲಿ 350 ಚೀಲ ಅಡಿಕೆ ಮತ್ತು ಲಾರಿಯನ್ನು…
ಅಡಿಕೆ ಎಲೆ ಚುಕ್ಕೆ ರೋಗವು ಗಾಳಿ ಮತ್ತು ತೇವಾಂಶದಿಂದ ವೇಗವಾಗಿ ಹರಡುತ್ತಿದ್ದು, ತೋಟಗಳಿಗೆ…