ಬೆಳ್ಳಾರೆ : ಬೆಳ್ಳಾರೆ ಪೊಲೀಸ್ ಠಾಣೆಯ ವತಿಯಿಂದ ಹಿರಿಯ ನಾಗರೀಕರ ಸಭೆ ನಡೆಯಿತು. ಠಾಣಾಧಿಕಾರಿ ಈರಯ್ಯ ಡಿ.ಎನ್ ಮಾಹಿತಿ ನೀಡಿ, ಮನೆಗೆ ಬರುವ ಅಪರಿಚಿತ ವ್ಯಕ್ತಿಗಳು, ಚಿನ್ನ ಪಾಲೀಶ್ ಮಾಡುವವರು, ಅನಾಮಧೇಯ ಕರೆ, ಬ್ಯಾಂಕ್ ಖಾತೆ ವಿವರ ಕೇಳುವ, ಎ.ಟಿ.ಎಂ ಸಂಖ್ಯೆ ಕೇಳುವವರ ಬಗ್ಗೆ ಜಾಗ್ರತೆ ವಹಿಸಲು ಸೂಚಿಸಿದರು. ಮನೆ ಮನೆಗಳಿಗೆ ಹಾಸಿಗೆ ದುರಸ್ಥಿ ನೆಪದಲ್ಲಿ, ಗುಜುರಿ ವ್ಯಾಪಾರಿ ಹೆಸರಿನಲ್ಲಿ ಬರುವ ವ್ಯಕ್ತಿಗಳ ಬಗ್ಗೆ ಎಚ್ಚರವಿರುವಂತೆ ಸಲಹೆ ನೀಡಿದರು.
ಹಿರಿಯ ನಾಗರೀಕರ ಗುರುತಿನ ಚೀಟಿ ಸೌಲಭ್ಯದ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಲಾಯಿತು. ಪ್ರೊಬೇಷನರಿ ಸಬ್ಇನ್ಸ್ಪೆಕ್ಟರ್ ಆಂಜನೇಯ ರೆಡ್ಡಿ ಸೇರಿದಂತೆ ಠಾಣೆಯ ಸಿಬಂದಿಗಳು, ಸುತ್ತಮುತ್ತಲಿನ ಊರುಗಳ ಹಿರಿಯ ನಾಗರೀಕರು ಉಪಸ್ಥಿತರಿದ್ದರು.
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…