ಬೆಳ್ಳಾರೆ : ಬೆಳ್ಳಾರೆ ಪೊಲೀಸ್ ಠಾಣೆಯ ವತಿಯಿಂದ ಹಿರಿಯ ನಾಗರೀಕರ ಸಭೆ ನಡೆಯಿತು. ಠಾಣಾಧಿಕಾರಿ ಈರಯ್ಯ ಡಿ.ಎನ್ ಮಾಹಿತಿ ನೀಡಿ, ಮನೆಗೆ ಬರುವ ಅಪರಿಚಿತ ವ್ಯಕ್ತಿಗಳು, ಚಿನ್ನ ಪಾಲೀಶ್ ಮಾಡುವವರು, ಅನಾಮಧೇಯ ಕರೆ, ಬ್ಯಾಂಕ್ ಖಾತೆ ವಿವರ ಕೇಳುವ, ಎ.ಟಿ.ಎಂ ಸಂಖ್ಯೆ ಕೇಳುವವರ ಬಗ್ಗೆ ಜಾಗ್ರತೆ ವಹಿಸಲು ಸೂಚಿಸಿದರು. ಮನೆ ಮನೆಗಳಿಗೆ ಹಾಸಿಗೆ ದುರಸ್ಥಿ ನೆಪದಲ್ಲಿ, ಗುಜುರಿ ವ್ಯಾಪಾರಿ ಹೆಸರಿನಲ್ಲಿ ಬರುವ ವ್ಯಕ್ತಿಗಳ ಬಗ್ಗೆ ಎಚ್ಚರವಿರುವಂತೆ ಸಲಹೆ ನೀಡಿದರು.
ಹಿರಿಯ ನಾಗರೀಕರ ಗುರುತಿನ ಚೀಟಿ ಸೌಲಭ್ಯದ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಲಾಯಿತು. ಪ್ರೊಬೇಷನರಿ ಸಬ್ಇನ್ಸ್ಪೆಕ್ಟರ್ ಆಂಜನೇಯ ರೆಡ್ಡಿ ಸೇರಿದಂತೆ ಠಾಣೆಯ ಸಿಬಂದಿಗಳು, ಸುತ್ತಮುತ್ತಲಿನ ಊರುಗಳ ಹಿರಿಯ ನಾಗರೀಕರು ಉಪಸ್ಥಿತರಿದ್ದರು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…