ಸುದ್ದಿಗಳು

ಬೆಳ್ಳಾರೆ ಪಂಚಾಯತ್ ಸಾಮಾಜಿಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬೆಳ್ಳಾರೆ: ಬೆಳ್ಳಾರೆ ಗ್ರಾಮ ಪಂಚಾಯತ್ ವತಿಯಿಂದ 2019-20ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಸಾಮಾಜಿಕ ಪರಿಶೋಧನಾ ವಿಶೇಷ ಗ್ರಾಮ ಸಭೆ ರಾಜೀವ್ ಗಾಂಧಿ ಸೇವಾ ಕೇಂದ್ರದಲ್ಲಿ ನಡೆಯಿತು.

Advertisement
Advertisement

ಸಾಮಾಜಿಕ ಪರಿಶೋಧನಾ ತಾಲೂಕು ಸಂಯೋಜನಾಧಿಕಾರಿ ರೋಹಿತ್ ಪ್ರಸ್ತಾವಿಸಿ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕುರಿತು ಸಮಗ್ರ ಮಾಹಿತಿ ನೀಡಿ ಪಿಂಚಣಿ ಖಾತೆದಾರರ ವರದಿಯನ್ನು ವಾಚಿಸಿದರು.. ತಾಂತ್ರಿಕ ಅಭ್ಯಂತಕ ಆತಿಷ್ ಮಾತನಾಡಿ ಕೃಷಿ ಹೊಂಡ ನಿರ್ಮಾಣಕ್ಕೆ, ಹಾಗು ಸಾರ್ವಜನಿಕ ಕಾಮಗಾರಿಗಳಿಗೆ ಅನುದಾನಗಳ ಮಾಹಿತಿ ನೀಡಿದರು. ಅದರೊಂದಿಗೆ ಪ್ರತಿಯೊಬ್ಬನ ಮನೆಯಲ್ಲಿ ಶೌಚಾಲಯ ನಿರ್ಮಿಸಿಕೊಳ್ಳಲು 12 ಸಾವಿರ ರೂಪಾಯಿಗಳ ಸಹಾಯಧನವನ್ನು ನೀಡಲಾಗುತ್ತಿದ್ದು, ಅಗತ್ಯವಿರುವವರು ಅರ್ಜಿಗಳನ್ನು ಸಲ್ಲಿಸಬಹುದು ಎಂದರು.

ತೋಟಗಾರಿಕಾ ಇಲಾಖೆಯ ಮಾಹಿತಿ ನೀಡಿದ ಬೆಳ್ಳಾರೆ ಗ್ರಾಮ ಪಂಚಾಯತ್‍ನ ಕಾರ್ಯದರ್ಶಿ ಭವ್ಯ ಅಡಿಕೆ ಕೃಷಿಗೆ ಉತ್ತೇಜನ ನೀಡಲಾಗುತ್ತಿದ್ದು, ಪ್ರತಿ ಅಡಿಕೆ ಗುಂಡಿಗೆ 110ರೂ(2.30ಫೀಟು ಅಗಲ ಮತ್ತು ಉದ್ದವಿದ್ದರೆ ಮಾತ್ರ) ನೀಡಲಾಗುತ್ತಿದೆ. ಅಂತೆಯೆ ತೆಂಗಿನ ಗುಂಡಿಯೊಂದಕ್ಕೆ 300 ರೂಪಾಯಿಗಳಂತೆ ಸಹಾಯಧನವನ್ನು ವಿತರಿಸಲಾಗುತ್ತಿದೆ. ಅಗತ್ಯವಿದ್ದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದರು.

ಬೆಳ್ಳಾರೆ ಸಮೀಪದ ಕಲ್ಲೋಣಿಯಲ್ಲಿ ಗ್ರಾಮ ಪಂಚಾಯತ್ ವತಿಯಿಂದ ಸಾರ್ವಜನಿಕ ಬಾವಿ ನಿರ್ಮಾಣವಾಗುತ್ತಿದ್ದು, ಮಕ್ಕಳು, ಹೊಂಡದ ಅರಿವಿಲ್ಲದವರು ಬಾವಿಯೊಳಗೆ ಬೀಳುವ ಅಪಾಯವಿದ್ದು, ಬಾವಿ ನಿರ್ಮಾಣವಾಗುತ್ತಿರುವ ಜಾಗ ಸುರಕ್ಷಿತವಾಗಿಲ್ಲವೆಂದು ಸಮಾಜಿಕ ಪರಿಶೋಧನಾ ಸಂಯೋಜನಾಧಿಕಾರಿ ರೋಹಿತ್ ಅವರು ಬೆಳ್ಳಾರೆ ಗ್ರಾಮ ಪಂಚಾಯಿತಿಯನ್ನು ಎಚ್ಚರಿಸಿದರು.

ಸಭೆಯ ಅಧ್ಯಕ್ಷತೆ ವಹಿಸಿದ ನೋಡೆಲ್ ಅಧಿಕಾರಿ ಹಾಗು ಶಿಕ್ಷಣ ಸಂಯೋಜನಾಧಿಕಾರಿ ವಸಂತಕುಮಾರ್ ಬೆಳ್ಳಾರೆ ಗ್ರಾಮ ಪಂಚಾಯತ್ ಕಾರ್ಯವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಉದ್ಯೋಗ ಖಾತರಿ ಯೋಜನೆಯಡಿ ಜನರ ಖಾತೆಗೆ ನೇರವಾಗಿ ಹಣ ಜಮೆಯಾಗುತ್ತದೆ. ಜನರು ನಿರಾಶರಾಗಬಾರದು. ಸಭೆಗೆ ಪ್ರತಿಯೊಬ್ಬ ಫಲಾನುಭವಿಗಳು ಬಂದರೆ ಸಂಬಂಧಿಸಿದ ವಿಷಯಗಳ ಕುರಿತು ನೇರ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳಬಹುದು ಎಂದರು

Advertisement

ವೇದಿಕೆಯಲ್ಲಿ ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶಕುಂತಳಾ ನಾಗರಾಜ್, ಉಪಾಧ್ಯಕ್ಷ ಮುಸ್ತಾಫಾ ಬೆಳ್ಳಾರೆ, ಸದಸ್ಯರಾದ ಆರಿಫ್ ಬೆಳ್ಳಾರೆ, ನವೀನ್ ರೈ ತಂಬಿನಮಕ್ಕಿ, ವಿಠಲ್‍ದಾಸ್, ಪೂರ್ಣಿಮಾ ಉಪಸ್ಥಿತರಿದ್ದರು. ಹರೀಶ್ ಸ್ವಾಗತಿಸಿ, ಕಾರ್ಯದರ್ಶಿ ಭವ್ಯ ಅನುಪಾಲನಾ ವಿವರವನ್ನು ವಾಚಿಸಿ ವಂದಿಸಿದರು. ಜಯರಾಮ್ ವಾರ್ಷಿಕ ವರದಿ ವಾಚಿಸಿ, ಕಾರ್ಯಕ್ರಮ ನಿರೂಪಿಸಿದರು. ದಿವ್ಯಾ ನಾಡಗೀತೆ ಹಾಡಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೋಲಾರ ಜಿಲ್ಲೆಯಲ್ಲಿ ನಾಳೆ ಮಾವು ಬೆಳೆಗಾರರಿಂದ ಬಂದ್ ಕರೆ |

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…

8 hours ago

ಕೃಷಿ ಜೊತೆಗೆ ತೋಟಗಾರಿಕಾ ಬೆಳೆಗಳಿಗೆ ಆದ್ಯತೆ ನೀಡಿ

ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…

9 hours ago

ಚಾಮರಾಜನಗರದ ಬೇಡುಗುಳಿ ಬಳಿ ಹುಲಿ ದಾಳಿಗೆ ಮೃತಪಟ್ಟ ಮಹಿಳೆ

ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…

9 hours ago

ರಾಜ್ಯದ ವಿವಿದೆಡೆ ಭಾರೀ ಮಳೆ  ಸಾಧ್ಯತೆ | ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡಿನಲ್ಲಿ  ಭಾರಿ ಮಳೆ ಮತ್ತು ಗುಡುಗು ಸಹಿತ…

9 hours ago

14 ಮುಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ

ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ…

10 hours ago

ಸಂಭಾವ್ಯ ಮಳೆ ಅನಾಹುತ ಪ್ರದೇಶಗಳನ್ನು ಗುರುತಿಸಲು ದ ಕ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ…

10 hours ago