ವಿಶೇಷ ವರದಿಗಳು

ಬೆಳ್ಳಾರೆ ಪೇಟೆಯಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಬೇಕಂತೆ….!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಗ್ರಾಮೀಣ ಭಾಗದಲ್ಲಿ ಅಲ್ಲ, ಇದು ಬೆಳ್ಳಾರೆ ಪೇಟೆಯ ಪ್ರಶ್ನೆ. ಸೂಕ್ತವಾದ ಚರಂಡಿ ವ್ಯವಸ್ಥೆ ಇಲ್ಲದೆ ನೀರು ರಸ್ತೆಯಲ್ಲಿ ಹರಿಯುತ್ತದೆ, ಜನರಿಗೆ ಅಭಿಷೇಕವಾಗುತ್ತದೆ. ಸೂಕ್ತ ಕ್ರಮವಾಗಬೇಕು, ಚರಂಡಿ ವ್ಯವಸ್ಥೆಯಾಗಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಲೋಕೋಪಯೋಗಿ ಇಲಾಖೆ ಈ ಬಗ್ಗೆ ಗಮನಹರಿಸಬೇಕಿದೆ.

Advertisement
Advertisement

ಭರ್ಜರಿ ಮಳೆ ಬಂದರಂತೂ ಸಾಕು ಬೆಳ್ಳಾರೆ ಪೇಟೆಯ ರಸ್ತೆ ಮೇಲೆ ಸಂಪೂರ್ಣ ಚರಂಡಿ ನೀರು ಹರಿದು ಪೇಟೆಯೇ ಹೊಳೆಯಂತಾಗುತ್ತದೆ. ಅತಿಯಾದ ನೀರಿನ ಹರಿವಿನಿಂದ ನಡು ಪೇಟೆಯ ರಸ್ತೆಯೇ ಸಂಪೂರ್ಣ ಕೆಸರುಮಯವಾಗಿ ವಾಹನ ಸವಾರರು ಹಾಗು ಪಾದಾಚಾರಿಗಳು ಸಂಕಷ್ಟ ಎದುರಿಸುವಂತಾಗಿದೆ. ಇದಕ್ಕೆಲ್ಲ ಕಾರಣ ಬೆಳ್ಳಾರೆ ಪೇಟೆಯಲ್ಲಿರುವ ಅಸಮರ್ಪಕ ಚರಂಡಿ ವ್ಯವಸ್ಥೆ.

ಬೆಳ್ಳಾರೆ ಮೇಲಿನ ಪೇಟೆಯ ಬಸ್ ನಿಲ್ದಾಣ ಎದುರಿನಲ್ಲಿ ಬೃಹತ್ ಹೊಂಡ ನಿರ್ಮಾಣವಾಗಿದ್ದು ಕೆಸರು ನೀರು ನಿಂತು ಬಸ್ ನಿಲ್ದಾಣಕ್ಕೆ ಆಗಮಿಸಿದಾಗ ಪ್ರಯಾಣಿಕರಿಗೆ ಕೆಸರಿನ ಅಭಿಷೇಕವಾಗುತ್ತಿದೆ. ಇದರಿಂದ ಕೆಲವು ಬಸ್‍ಗಳು ನಿಲ್ದಾಣದೊಳಗೆ ಬಾರದೆ ರಸ್ತೆಯ ಮೇಲೆಯೆ ಹಲವು ಬಾರಿ ನಿಲುಗಡೆಯೂ ಮಾಡುವಂತಾಗಿದೆ. ನಿಲ್ದಾಣದ ಮುಂಭಾಗದಲ್ಲಿ ನಡೆಯಲಾರದಷ್ಟು ಕೆಸರಿನ ನೀರು ತುಂಬುತ್ತಿರುತ್ತದೆ. ಕೆಸರು ನೀರಿನೊಂದಿಗೆ ಪೇಟೆಯ ತ್ಯಾಜ್ಯಗಳು ಬೆರೆತಿರುವುದನ್ನು ಜೋರು ಮಳೆ ಬಂದಾಗ ಕಾಣ ಸಿಗುವುದು.
ಕೆಳಗಿನ ಪೇಟೆಯ ರಸ್ತೆಯೂ ಕೆಸರು ಗದ್ದೆಯಂತೆ ಬೆಳ್ಳಾರೆಯ ಮೇಲೆ ಪೇಟೆಗಿಂತ ಕೆಳಗಿನ ಪೇಟೆಯ ಸ್ಥಿತಿಯೂ ಭಿನ್ನವಾಗಿಲ್ಲ. ಇಲ್ಲಿಯೂ ಚರಂಡಿಯ ವ್ಯವಸ್ಥೆ ಸರಿಯಾಗಿಲ್ಲ. ಅಸಮರ್ಪಕವಾದ ಸ್ಲ್ಯಾಬ್ ಅಳವಡಿಕೆಯಿಂದಾಗಿ ಚರಂಡಿಯೊಳಗಿನ ನೀರು ತುಂಬಿ ರಸ್ತೆಯ ಮೇಲೆ ಹರಿಯುವಂತಗಿದೆ. ಉದಾಹರಣೆಯಾಗಿ ವರ್ಷದ ಮೊದಲ ಮಳೆಗೆ ಬೆಳ್ಳಾರೆಯ ಹಲವರಿಗೆ ಕೆಸರಿನ ಸಿಂಚನವಾಗಿದೆ.

ಅಭಿವೃದ್ದಿಯ ಶಿಖರದೆಡೆಗೆ ದಾಪುಗಾಲಿಡುತ್ತಿರುವ ಬೆಳ್ಳಾರೆ ಪೇಟೆಯ ಶೋಭೆಯನ್ನು ಇಂತಹ ಸಮಸ್ಯೆಗಳು ಕುಂದಿಸುತ್ತಿದೆ. ಪ್ರತಿ ನಿತ್ಯ ಪೇಟೆಯ ರಸ್ತೆಯ ಮೇಲೆ ನೂರಾರು ವಿದ್ಯಾರ್ಥಿಗಳು, ವೃದ್ದರು ನಡೆದುಕೊಂಡು ಹೋಗುತ್ತಿರುತ್ತಾರೆ. ಕೆಸರಿದ್ದಾಗ ನಡೆದುಕೊಂಡು ಹೋಗಲು ಕಷ್ಟಪಡುವ ಇಂಥಹವರು ಕೆಲವು ಬಾರಿ ಕೆಳ ಪೇಟೆಯಿಂದ ಮೇಲೆ ಪೇಟೆಗೆ ಅಂದರೆ 100ರಿಂದ 150 ಮೀ. ರಸ್ತೆಯನ್ನೂ ರಿಕ್ಷಗಳಲ್ಲಿ ಹೋಗುವ ಪರಿಸ್ಥಿಯುಂಟಾಗಿದೆ.

ಚರಂಡಿಯ ದುಸ್ಥಿತಿಯಿಂದಾಗಿ ಉಂಟಾಗುತ್ತಿರುವ ತೊಂದರೆಯನ್ನು ಕಣ್ಣಾರೆ ಕಂಡ ಹಲವು ಜನರು ಮಳೆಗಾಲಕ್ಕೂ ಮೊದಲೇ ಚರಂಡಿ ಸರಿಪಡಿಸಿ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಕಲ್ಪಿಸಿದ್ದರೆ ಈ ಸಮಸ್ಯೆಯನ್ನು ತಪ್ಪಿಸಬಹುದಿತ್ತೆಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Advertisement

ಚರಂಡಿ ಸರಿಪಡಿಸಿ ಸರಾಗವಾಗಿ ನೀರು ಹರಿದುಹೋಗಲು ವ್ಯವಸ್ಥೆ ಮಾಡುವಂತೆ ಲೋಕೋಪಯೋಗಿ ಇಲಾಖೆಗೆ ಮನವಿ ಮಾಡಲಾಗಿದೆ. – ಶಕುಂತಳಾ ನಾಗರಾಜ್ ಬೆಳ್ಳಾರೆ ಗ್ರಾ.ಪಂ ಅಧ್ಯಕ್ಷೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ  ಘಟನೆ ಗುಜರಾತಿನ ಅಹಮದಾಬಾದ್​​ನಲ್ಲಿ…

8 hours ago

ಹವಾಮಾನ ವರದಿ | 12-06-2025 | ಮುಂದೂಡಿದ ಭಾರೀ ಮಳೆ..! | ಜೂ.13 ರಿಂದ ಮುಂದುವರಿಯುವ ಮಳೆ |

ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…

9 hours ago

ತೆಂಗಿನ ಗೆರಟೆ ಮೌಲ್ಯವರ್ಧನೆ | ಇದು ಬರೀ “ಚಿಪ್ಪಿ”ಯಲ್ಲ ಇದರೊಳಗಿದೆ ಹಲವು ಬಗೆ..!

ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…

13 hours ago

ಮಳೆ ಹಿನ್ನೆಲೆ | ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆ

ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…

17 hours ago

ಶನಿ ಬುಧರಿಂದ ನವಪಂಚಮ ರಾಜಯೋಗ

2025 ರಲ್ಲಿ ಶನಿ ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ನಿರ್ಮಾಣವಾಗುತ್ತಿರುವ ನವಪಂಚಮ ರಾಜಯೋಗವು…

17 hours ago

ಸಂಪಾಜೆ ಗ್ರಾಮದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…

1 day ago