Advertisement
ವಿಶೇಷ ವರದಿಗಳು

ಬೆಳ್ಳಾರೆ ಪೇಟೆಯಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಬೇಕಂತೆ….!

Share

ಗ್ರಾಮೀಣ ಭಾಗದಲ್ಲಿ ಅಲ್ಲ, ಇದು ಬೆಳ್ಳಾರೆ ಪೇಟೆಯ ಪ್ರಶ್ನೆ. ಸೂಕ್ತವಾದ ಚರಂಡಿ ವ್ಯವಸ್ಥೆ ಇಲ್ಲದೆ ನೀರು ರಸ್ತೆಯಲ್ಲಿ ಹರಿಯುತ್ತದೆ, ಜನರಿಗೆ ಅಭಿಷೇಕವಾಗುತ್ತದೆ. ಸೂಕ್ತ ಕ್ರಮವಾಗಬೇಕು, ಚರಂಡಿ ವ್ಯವಸ್ಥೆಯಾಗಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಲೋಕೋಪಯೋಗಿ ಇಲಾಖೆ ಈ ಬಗ್ಗೆ ಗಮನಹರಿಸಬೇಕಿದೆ.

ಭರ್ಜರಿ ಮಳೆ ಬಂದರಂತೂ ಸಾಕು ಬೆಳ್ಳಾರೆ ಪೇಟೆಯ ರಸ್ತೆ ಮೇಲೆ ಸಂಪೂರ್ಣ ಚರಂಡಿ ನೀರು ಹರಿದು ಪೇಟೆಯೇ ಹೊಳೆಯಂತಾಗುತ್ತದೆ. ಅತಿಯಾದ ನೀರಿನ ಹರಿವಿನಿಂದ ನಡು ಪೇಟೆಯ ರಸ್ತೆಯೇ ಸಂಪೂರ್ಣ ಕೆಸರುಮಯವಾಗಿ ವಾಹನ ಸವಾರರು ಹಾಗು ಪಾದಾಚಾರಿಗಳು ಸಂಕಷ್ಟ ಎದುರಿಸುವಂತಾಗಿದೆ. ಇದಕ್ಕೆಲ್ಲ ಕಾರಣ ಬೆಳ್ಳಾರೆ ಪೇಟೆಯಲ್ಲಿರುವ ಅಸಮರ್ಪಕ ಚರಂಡಿ ವ್ಯವಸ್ಥೆ.

ಬೆಳ್ಳಾರೆ ಮೇಲಿನ ಪೇಟೆಯ ಬಸ್ ನಿಲ್ದಾಣ ಎದುರಿನಲ್ಲಿ ಬೃಹತ್ ಹೊಂಡ ನಿರ್ಮಾಣವಾಗಿದ್ದು ಕೆಸರು ನೀರು ನಿಂತು ಬಸ್ ನಿಲ್ದಾಣಕ್ಕೆ ಆಗಮಿಸಿದಾಗ ಪ್ರಯಾಣಿಕರಿಗೆ ಕೆಸರಿನ ಅಭಿಷೇಕವಾಗುತ್ತಿದೆ. ಇದರಿಂದ ಕೆಲವು ಬಸ್‍ಗಳು ನಿಲ್ದಾಣದೊಳಗೆ ಬಾರದೆ ರಸ್ತೆಯ ಮೇಲೆಯೆ ಹಲವು ಬಾರಿ ನಿಲುಗಡೆಯೂ ಮಾಡುವಂತಾಗಿದೆ. ನಿಲ್ದಾಣದ ಮುಂಭಾಗದಲ್ಲಿ ನಡೆಯಲಾರದಷ್ಟು ಕೆಸರಿನ ನೀರು ತುಂಬುತ್ತಿರುತ್ತದೆ. ಕೆಸರು ನೀರಿನೊಂದಿಗೆ ಪೇಟೆಯ ತ್ಯಾಜ್ಯಗಳು ಬೆರೆತಿರುವುದನ್ನು ಜೋರು ಮಳೆ ಬಂದಾಗ ಕಾಣ ಸಿಗುವುದು.
ಕೆಳಗಿನ ಪೇಟೆಯ ರಸ್ತೆಯೂ ಕೆಸರು ಗದ್ದೆಯಂತೆ ಬೆಳ್ಳಾರೆಯ ಮೇಲೆ ಪೇಟೆಗಿಂತ ಕೆಳಗಿನ ಪೇಟೆಯ ಸ್ಥಿತಿಯೂ ಭಿನ್ನವಾಗಿಲ್ಲ. ಇಲ್ಲಿಯೂ ಚರಂಡಿಯ ವ್ಯವಸ್ಥೆ ಸರಿಯಾಗಿಲ್ಲ. ಅಸಮರ್ಪಕವಾದ ಸ್ಲ್ಯಾಬ್ ಅಳವಡಿಕೆಯಿಂದಾಗಿ ಚರಂಡಿಯೊಳಗಿನ ನೀರು ತುಂಬಿ ರಸ್ತೆಯ ಮೇಲೆ ಹರಿಯುವಂತಗಿದೆ. ಉದಾಹರಣೆಯಾಗಿ ವರ್ಷದ ಮೊದಲ ಮಳೆಗೆ ಬೆಳ್ಳಾರೆಯ ಹಲವರಿಗೆ ಕೆಸರಿನ ಸಿಂಚನವಾಗಿದೆ.

ಅಭಿವೃದ್ದಿಯ ಶಿಖರದೆಡೆಗೆ ದಾಪುಗಾಲಿಡುತ್ತಿರುವ ಬೆಳ್ಳಾರೆ ಪೇಟೆಯ ಶೋಭೆಯನ್ನು ಇಂತಹ ಸಮಸ್ಯೆಗಳು ಕುಂದಿಸುತ್ತಿದೆ. ಪ್ರತಿ ನಿತ್ಯ ಪೇಟೆಯ ರಸ್ತೆಯ ಮೇಲೆ ನೂರಾರು ವಿದ್ಯಾರ್ಥಿಗಳು, ವೃದ್ದರು ನಡೆದುಕೊಂಡು ಹೋಗುತ್ತಿರುತ್ತಾರೆ. ಕೆಸರಿದ್ದಾಗ ನಡೆದುಕೊಂಡು ಹೋಗಲು ಕಷ್ಟಪಡುವ ಇಂಥಹವರು ಕೆಲವು ಬಾರಿ ಕೆಳ ಪೇಟೆಯಿಂದ ಮೇಲೆ ಪೇಟೆಗೆ ಅಂದರೆ 100ರಿಂದ 150 ಮೀ. ರಸ್ತೆಯನ್ನೂ ರಿಕ್ಷಗಳಲ್ಲಿ ಹೋಗುವ ಪರಿಸ್ಥಿಯುಂಟಾಗಿದೆ.

ಚರಂಡಿಯ ದುಸ್ಥಿತಿಯಿಂದಾಗಿ ಉಂಟಾಗುತ್ತಿರುವ ತೊಂದರೆಯನ್ನು ಕಣ್ಣಾರೆ ಕಂಡ ಹಲವು ಜನರು ಮಳೆಗಾಲಕ್ಕೂ ಮೊದಲೇ ಚರಂಡಿ ಸರಿಪಡಿಸಿ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಕಲ್ಪಿಸಿದ್ದರೆ ಈ ಸಮಸ್ಯೆಯನ್ನು ತಪ್ಪಿಸಬಹುದಿತ್ತೆಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಚರಂಡಿ ಸರಿಪಡಿಸಿ ಸರಾಗವಾಗಿ ನೀರು ಹರಿದುಹೋಗಲು ವ್ಯವಸ್ಥೆ ಮಾಡುವಂತೆ ಲೋಕೋಪಯೋಗಿ ಇಲಾಖೆಗೆ ಮನವಿ ಮಾಡಲಾಗಿದೆ. – ಶಕುಂತಳಾ ನಾಗರಾಜ್ ಬೆಳ್ಳಾರೆ ಗ್ರಾ.ಪಂ ಅಧ್ಯಕ್ಷೆ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

6 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

6 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

8 hours ago

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

15 hours ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

16 hours ago

ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!

ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್‌ನಲ್ಲಿ…

17 hours ago