Advertisement
ವಿಶೇಷ ವರದಿಗಳು

ಬೆಳ್ಳಾರೆ ಪೇಟೆಯಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಬೇಕಂತೆ….!

Share

ಗ್ರಾಮೀಣ ಭಾಗದಲ್ಲಿ ಅಲ್ಲ, ಇದು ಬೆಳ್ಳಾರೆ ಪೇಟೆಯ ಪ್ರಶ್ನೆ. ಸೂಕ್ತವಾದ ಚರಂಡಿ ವ್ಯವಸ್ಥೆ ಇಲ್ಲದೆ ನೀರು ರಸ್ತೆಯಲ್ಲಿ ಹರಿಯುತ್ತದೆ, ಜನರಿಗೆ ಅಭಿಷೇಕವಾಗುತ್ತದೆ. ಸೂಕ್ತ ಕ್ರಮವಾಗಬೇಕು, ಚರಂಡಿ ವ್ಯವಸ್ಥೆಯಾಗಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಲೋಕೋಪಯೋಗಿ ಇಲಾಖೆ ಈ ಬಗ್ಗೆ ಗಮನಹರಿಸಬೇಕಿದೆ.

ಭರ್ಜರಿ ಮಳೆ ಬಂದರಂತೂ ಸಾಕು ಬೆಳ್ಳಾರೆ ಪೇಟೆಯ ರಸ್ತೆ ಮೇಲೆ ಸಂಪೂರ್ಣ ಚರಂಡಿ ನೀರು ಹರಿದು ಪೇಟೆಯೇ ಹೊಳೆಯಂತಾಗುತ್ತದೆ. ಅತಿಯಾದ ನೀರಿನ ಹರಿವಿನಿಂದ ನಡು ಪೇಟೆಯ ರಸ್ತೆಯೇ ಸಂಪೂರ್ಣ ಕೆಸರುಮಯವಾಗಿ ವಾಹನ ಸವಾರರು ಹಾಗು ಪಾದಾಚಾರಿಗಳು ಸಂಕಷ್ಟ ಎದುರಿಸುವಂತಾಗಿದೆ. ಇದಕ್ಕೆಲ್ಲ ಕಾರಣ ಬೆಳ್ಳಾರೆ ಪೇಟೆಯಲ್ಲಿರುವ ಅಸಮರ್ಪಕ ಚರಂಡಿ ವ್ಯವಸ್ಥೆ.

ಬೆಳ್ಳಾರೆ ಮೇಲಿನ ಪೇಟೆಯ ಬಸ್ ನಿಲ್ದಾಣ ಎದುರಿನಲ್ಲಿ ಬೃಹತ್ ಹೊಂಡ ನಿರ್ಮಾಣವಾಗಿದ್ದು ಕೆಸರು ನೀರು ನಿಂತು ಬಸ್ ನಿಲ್ದಾಣಕ್ಕೆ ಆಗಮಿಸಿದಾಗ ಪ್ರಯಾಣಿಕರಿಗೆ ಕೆಸರಿನ ಅಭಿಷೇಕವಾಗುತ್ತಿದೆ. ಇದರಿಂದ ಕೆಲವು ಬಸ್‍ಗಳು ನಿಲ್ದಾಣದೊಳಗೆ ಬಾರದೆ ರಸ್ತೆಯ ಮೇಲೆಯೆ ಹಲವು ಬಾರಿ ನಿಲುಗಡೆಯೂ ಮಾಡುವಂತಾಗಿದೆ. ನಿಲ್ದಾಣದ ಮುಂಭಾಗದಲ್ಲಿ ನಡೆಯಲಾರದಷ್ಟು ಕೆಸರಿನ ನೀರು ತುಂಬುತ್ತಿರುತ್ತದೆ. ಕೆಸರು ನೀರಿನೊಂದಿಗೆ ಪೇಟೆಯ ತ್ಯಾಜ್ಯಗಳು ಬೆರೆತಿರುವುದನ್ನು ಜೋರು ಮಳೆ ಬಂದಾಗ ಕಾಣ ಸಿಗುವುದು.
ಕೆಳಗಿನ ಪೇಟೆಯ ರಸ್ತೆಯೂ ಕೆಸರು ಗದ್ದೆಯಂತೆ ಬೆಳ್ಳಾರೆಯ ಮೇಲೆ ಪೇಟೆಗಿಂತ ಕೆಳಗಿನ ಪೇಟೆಯ ಸ್ಥಿತಿಯೂ ಭಿನ್ನವಾಗಿಲ್ಲ. ಇಲ್ಲಿಯೂ ಚರಂಡಿಯ ವ್ಯವಸ್ಥೆ ಸರಿಯಾಗಿಲ್ಲ. ಅಸಮರ್ಪಕವಾದ ಸ್ಲ್ಯಾಬ್ ಅಳವಡಿಕೆಯಿಂದಾಗಿ ಚರಂಡಿಯೊಳಗಿನ ನೀರು ತುಂಬಿ ರಸ್ತೆಯ ಮೇಲೆ ಹರಿಯುವಂತಗಿದೆ. ಉದಾಹರಣೆಯಾಗಿ ವರ್ಷದ ಮೊದಲ ಮಳೆಗೆ ಬೆಳ್ಳಾರೆಯ ಹಲವರಿಗೆ ಕೆಸರಿನ ಸಿಂಚನವಾಗಿದೆ.

ಅಭಿವೃದ್ದಿಯ ಶಿಖರದೆಡೆಗೆ ದಾಪುಗಾಲಿಡುತ್ತಿರುವ ಬೆಳ್ಳಾರೆ ಪೇಟೆಯ ಶೋಭೆಯನ್ನು ಇಂತಹ ಸಮಸ್ಯೆಗಳು ಕುಂದಿಸುತ್ತಿದೆ. ಪ್ರತಿ ನಿತ್ಯ ಪೇಟೆಯ ರಸ್ತೆಯ ಮೇಲೆ ನೂರಾರು ವಿದ್ಯಾರ್ಥಿಗಳು, ವೃದ್ದರು ನಡೆದುಕೊಂಡು ಹೋಗುತ್ತಿರುತ್ತಾರೆ. ಕೆಸರಿದ್ದಾಗ ನಡೆದುಕೊಂಡು ಹೋಗಲು ಕಷ್ಟಪಡುವ ಇಂಥಹವರು ಕೆಲವು ಬಾರಿ ಕೆಳ ಪೇಟೆಯಿಂದ ಮೇಲೆ ಪೇಟೆಗೆ ಅಂದರೆ 100ರಿಂದ 150 ಮೀ. ರಸ್ತೆಯನ್ನೂ ರಿಕ್ಷಗಳಲ್ಲಿ ಹೋಗುವ ಪರಿಸ್ಥಿಯುಂಟಾಗಿದೆ.

ಚರಂಡಿಯ ದುಸ್ಥಿತಿಯಿಂದಾಗಿ ಉಂಟಾಗುತ್ತಿರುವ ತೊಂದರೆಯನ್ನು ಕಣ್ಣಾರೆ ಕಂಡ ಹಲವು ಜನರು ಮಳೆಗಾಲಕ್ಕೂ ಮೊದಲೇ ಚರಂಡಿ ಸರಿಪಡಿಸಿ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಕಲ್ಪಿಸಿದ್ದರೆ ಈ ಸಮಸ್ಯೆಯನ್ನು ತಪ್ಪಿಸಬಹುದಿತ್ತೆಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಚರಂಡಿ ಸರಿಪಡಿಸಿ ಸರಾಗವಾಗಿ ನೀರು ಹರಿದುಹೋಗಲು ವ್ಯವಸ್ಥೆ ಮಾಡುವಂತೆ ಲೋಕೋಪಯೋಗಿ ಇಲಾಖೆಗೆ ಮನವಿ ಮಾಡಲಾಗಿದೆ. – ಶಕುಂತಳಾ ನಾಗರಾಜ್ ಬೆಳ್ಳಾರೆ ಗ್ರಾ.ಪಂ ಅಧ್ಯಕ್ಷೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

17 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

19 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

19 hours ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

22 hours ago

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

1 day ago