ಮಾಹಿತಿ

ಬೆಳ್ಳಾರೆ ಪೊಲೀಸ್ ಠಾಣೆಯಿಂದ ಸಾರ್ವಜನಿಕರಿಗೆ ಮಹತ್ವದ ಸಂದೇಶ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬೆಳ್ಳಾರೆ : ಒಂಟಿ ಮನೆಯಲ್ಲಿರುವಂತಹ ಅಥವಾ ಜನ ಸಂದಣಿ ಕಡಿಮೆ‌ ಇರುವಂತಹ ಪ್ರದೇಶ ಗಳಲ್ಲಿ ನಿಮ್ಮ ಮನೆ ಅಥವಾ ವಠಾರದ ಕಡೆಗೆ ಚಿನ್ನ ಪಾಲಿಸ್ ಮಾಡಿಕೊಡುತ್ತೇವೆ ಎಂದು ಹೇಳಿಕೊಂಡು ಬಂದು ನಿಮ್ಮ ಚಿನ್ನಾಭರಣವನ್ನು ಬಿಚ್ಚಿಸಿ ಪಾಲಿಶ್ ಮಾಡುವ ನೆಪದಲ್ಲಿ ಮೋಸ ಮಾಡಬಹುದು ಎಚ್ಚರಿಕೆ….!

Advertisement
Advertisement

ವಿಮಾ ಕಂಪನಿಯವರೆಂದು, ಅಥವಾ ಮನೆಬಳಕೆಯ ವಸ್ತುಗಳ ಮಾರಾಟಗಾರರೆಂದು, ಸರಕಾರಿ ಇಲಾಖೆಯ ನಕಲಿ ಐಡಿ ಕಾರ್ಡ್ ತೋರಿಸಿ ನಂಬಿಸಿ ಹಣ ಮತ್ತು ಇತರೆ ವಸ್ತುಗಳನ್ನು ಮೋಸ ಮಾಡಿ ಲಪಟಾಯಿಸುವ ಸಾಧ್ಯತೆ ಇರುತ್ತದೆ..

ನೀವು ನಿಮ್ಮ ವಾಹನಗಳಲ್ಲಿ ಪ್ರಯಾಣಿಸುವಾಗ ಉದ್ದೇಶ ಪೂರ್ವಕವಾಗಿ ನಿಮ್ಮನ್ನೆ ಗುರಿಯಾಗಿಸಿಕೊಂಡು ನಿಮ್ಮ ಗಮನವನ್ನು ಬೇರೆಡೆಗೆ ಸೆಳೆದು ನಿಮ್ಮ ವಾಹನದಲ್ಲಿಟ್ಟಿರುವ ಬೆಲೆ ಬಾಳುವ ವಸ್ತುಗಳನ್ನು ಮೋಸದಿಂದ ಲಪಟಾಯಿಸುವ ತಂಡಗಳು ರಾಜ್ಯದ ವಿವಿಧ ಜಿಲ್ಲೆಗಳ ಭಾಗಗಳಲ್ಲಿ ಅಪರಾಧ ಕೃತ್ಯ ನಡೆಸುತ್ತಿರುವುದು ಕಂಡು ಬಂದಿರುತ್ತದೆ…

ಈ ಮೇಲಿನ ರೀತಿಯಲ್ಲಿ ತಮ್ಮ ಕೃತ್ಯ ಗಳನ್ನು ಎಸಗುವ ಗ್ಯಾಂಗ್ ಗಳು ನಮ್ಮ ಸುತ್ತಲಿನ ಜಿಲ್ಲೆಗಳಲ್ಲಿ ಸಕ್ರಿಯವಾಗಿರುವುದು ಕಂಡುಬಂದಿರುತ್ತದೆ…

ಆದುದರಿಂದ ನಿಮ್ಮ ಪರಿಸರದಲ್ಲಿ ಇಂತಹ ಅನುಮಾನಸ್ಪದ ವ್ಯಕ್ತಿಗಳ ಬಗ್ಗೆ ನಿಮ್ಮ ಗಮನಕ್ಕೆ ಬಂದರೆ ಸದಾ‌ ನಿಮ್ಮೊಂದಿಗೆ ಇರುವ ನಮ್ಮ‌ ಠಾಣೆಗೆ ಕೂಡಲೇ ಮಾಹಿತಿ ನೀಡಿ ಸಹಕರಿಸಿ ಎಂದು ಠಾಣಾಧಿಕಾರಿ ಈರಯ್ಯ ಡಿ ಎನ್ ಪ್ರಕಟನೆಯಲ್ಲಿ ತಿಳಿಸಿರುತ್ತಾರೆ ಅಲ್ಲದೆ 9743053901 ,08257-271995  ನಂಬರಿಗೂ ತಕ್ಷಣ ಸಂಪರ್ಕಿಸಿ ತಿಳಿಸಬೇಕೆಂದು ತಿಳಿಸಿರುತ್ತಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ

ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…

3 hours ago

ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…

3 hours ago

14 ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ

ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…

4 hours ago

ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ – ಉಪಲೋಕಾಯುಕ್ತ ಬಿ. ವೀರಪ್ಪ

ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ  ಉಪಲೋಕಾಯುಕ್ತ ಬಿ.…

4 hours ago

ಇದೆಲ್ಲಾ ಹೇಗಾಗ್ತದೆ? ಇದು ನಮ್ಗೆಲ್ಲಿ ಗೊತ್ತಾಗ್ತದೆ!?

ಪಂಚಾಯತು ವಿಧಿಸುವ ವಿವಿಧ ಕರಗಳ ಬಗ್ಗೆ ನಿಮಗೆ ಅರಿವಿದೆಯೆ? ನಿಮ್ಮ ಪಂಚಾಯತುಗಳಿಗೆ ಸರಕಾರದಿಂದ…

4 hours ago