ಸುಳ್ಯ:ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಸುಮಾರು 2 ವರ್ಷಗಳಿಂದ ಸಬ್ ಇನ್ಸ್ ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ಈರಯ್ಯ ಡಿ.ಎನ್.ರವರಿಗೆ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದು ಅವರಿಗೆ ಬೆಳ್ಳಾರೆ ಠಾಣೆಯ ವತಿಯಿಂದ ಬೀಳ್ಕೊಡುಗೆ ಮತ್ತು ಸನ್ಮಾನ ಕಾರ್ಯಕ್ರಮವು ಪೆರುವಾಜೆಯ ಜೆ.ಡಿ.ಅಡಿಟೋರಿಯಂನಲ್ಲಿ ನಡೆಯಿತು.
ಸುಳ್ಯ ಸರ್ಕಲ್ ಇನ್ಸ್ ಪೆಕ್ಟರ್ ಸತೀಶ್ ಕುಮಾರ್ ಈರಯ್ಯ ಡಿ.ಎನ್-ಚಂಪಲತಾ ದಂಪತಿಗಳನ್ನು ಶಾಲುಹೊದಿಸಿ ಫಲ ಪುಷ್ಪ ಸ್ಮರಣಿಕೆ ನೀಡಿ ಸನ್ಮಾನಿಸಿದರು. ಈರಯ್ಯ ಅವರನ್ನು ಬೆಳ್ಳಾರೆ ಠಾಣೆಯ ಹೋಂಗಾರ್ಡಗಳ ವತಿಯಿಂದ ಮತ್ತು ಪಿಗ್ಮಿ ಸಂಗ್ರಾಹಕರ ವತಿಯಿಂದ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿದ ಈರಯ್ಯರವರು ಸುಮಾರು 2 ವರ್ಷಗಳ ಕಾಲ ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ಸೇವೆ ದಿನಗಳನ್ನು ಸ್ಮರಿಸಿ ಸಹಕರಿಸಿದ ಹಿರಿಯ ಅಧಿಕಾರಿಗಳಿಗೆ, ಸಹೋದ್ಯೋಗಿ ಮಿತ್ರರಿಗೆ, ಸಿಬ್ಬಂದಿ ವರ್ಗದವರಿಗೆ ಹಾಗೂ ಗ್ರಾಮಸ್ಥರಿಗೆ ಕೃತಜ್ಞತೆ ಸಲ್ಲಿಸಿದರು.
ವೇದಿಕೆಯಲ್ಲಿ ಸುಳ್ಯ ಠಾಣೆಯ ಸಬ್ ಇನ್ಸ್ ಪೆಕ್ಟರ್ ಎಂ.ಆರ್.ಹರೀಶ್, ಸುಬ್ರಹ್ಮಣ್ಯ ಠಾಣೆಯ ಎ.ಎಸ್.ಐ.ಚಂದಪ್ಪ, ಸುಳ್ಯ ನ್ಯಾಯಾಲಯದ ಎ.ಪಿ.ಪಿ.ಸಂತೋಷ್,ಬೆಳ್ಳಾರೆ ಠಾಣೆಯ ಎ.ಎಸ್.ಐ.ಮಧುಕುಮಾರ್, ಸುಳ್ಯ ವಲಯ ಅರಣ್ಯಾಧಿಕಾರಿ ಎನ್.ಮಂಜುನಾಥ್ ಮಾತನಾಡಿದರು.
ವಿದ್ಯಾರ್ಥಿಗಳು ಪ್ರಾರ್ಥಿಸಿ, ಮಹಾದೇವ್ ಪ್ರಸಾದ್ ಪ್ರಾಸ್ತಾವಿಕ ಮಾತನಾಡಿದರು. ಎ.ಎಸ್.ಐ.ಭಾಸ್ಕರ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ಮಹಾದೇವ ಪ್ರಸಾದ್ ವಂದಿಸಿದರು. ಬೆಳ್ಳಾರೆ ಠಾಣೆಯ ಸಿಬ್ಬಂದಿ ವರ್ಗದವರು ಸಹಕರಿಸಿದರು.
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…
ರಸ್ತೆ ಬದಿ ತ್ಯಾಜ್ಯ ಎಸೆದ ಪ್ರಕರಣದಲ್ಲಿ ಅಂಗಡಿ ಮಾಲಿಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.…