ಮಾಹಿತಿ

ಬೆಳ್ಳಾರೆ ಪೊಲೀಸ್ ಠಾಣೆ ವತಿಯಿಂದ ಶಾಂತಿ ಸೌಹಾರ್ದತೆ ಸಭೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬೆಳ್ಳಾರೆ: ಮುಂಬರುತ್ತಿರುವ ಈದ್ ಮಿಲಾದ್, ಟಿಪ್ಪು ಜಯಂತಿ ಮತ್ತು ಅಯೋಧ್ಯೆ ತೀರ್ಪಿನ ಹಿನ್ನೆಲೆಯಲ್ಲಿ ಬೆಳ್ಳಾರೆ ಪೊಲೀಸ್ ಠಾಣೆ ವತಿಯಿಂದ ಶಾಂತಿ ಸೌಹಾರ್ದತೆಯ ವಿಶೇಷ ಸಭೆ ರಾಜೀವ್ ಗಾಂಧಿ ಸೇವಾ ಕೇಂದ್ರದಲ್ಲಿ ನಡೆಯಿತು.

Advertisement

ಬೆಳ್ಳಾರೆ ಪೊಲೀಸ್ ಠಾಣೆಯ ಸಬ್‍ಇನ್‍ಸ್ಪೆಕ್ಟರ್ ಈರಯ್ಯ.ಡಿ.ಎನ್ ಅವರು ಮಾಹಿತಿ ನೀಡುತ್ತಾ ಹಬ್ಬದ ದಿನದಂದು ಯಾವುದೇ ಅಹಿತಕರ ಘಟನೆ ನಡೆಯಲು ಆಸ್ಪದ ನೀಡಬಾರದು. ಈದ್ ಮಿಲಾದ್ ಜಾಥದಲ್ಲಿ ಅನುಮತಿ ಪಡೆದು ಕಾಲ್ನಡಿಗೆ ಜಾಥಾ ನಡೆಸಬಹುದು. ವಾಹನದ ಜಾಥಕ್ಕೆ ಅವಕಾಶವಿರುವುದಿಲ್ಲ ಎಂದರು.  ಬಳಿಕ ಸಾರ್ವಜನಿಕ ಹಿತಾಸಕ್ತಿ ಹಾಗು ಸಮಾಜದಲ್ಲಿ ಶಾಂತಿ ಹಾಗು ಸುವ್ಯವಸ್ಥೆ ಕುರಿತು ಮಾತನಾಡಿದ ಸಬ್‍ಇನ್‍ಸ್ಪೆಕ್ಟರ್ ಅವರು ಟಿಪ್ಪು ಜಯಂತಿಯನ್ನು ಸರ್ಕಾರ ನಿಷೇಧಿಸಿರುವುದರಿಂದ ಸಾರ್ವಜನಿಕವಾಗಿ ಆಚರಣೆಗೆ ಯಾವುದೇ ಅವಕಾಶವಿಲ್ಲ. ಅಯೋಧ್ಯೆ ತೀರ್ಪು ಬಂದಾಗ ಯಾರ ಪರವಾಗಿದ್ದರೂ ಅದನ್ನು ಸಮಾನವಾಗಿ ಸ್ವೀಕರಿಸಬೇಕು. ಪರವಾಗಿ ತೀರ್ಪು ಬಂದಾಗ ಸಾರ್ವಜನಿಕವಾಗಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸುವುದು, ವಾಹನ ಜಾಥಾ ನಡೆಸುವುದು ಮಾಡಕೂಡದು. ಅಂಥಹ ತೊಂದರೆಗಳಾದಾಗ ತಕ್ಷಣವೇ ಠಾಣೆಗೆ ಮಾಹಿತಿ ನೀಡಿ ಎಂದು ಹೇಳಿದರು.

ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ ಸಬ್‍ಇನ್‍ಸ್ಪೆಕ್ಟರ್ ಅವರು ಅಯೋಧ್ಯೆ ತೀರ್ಪಿನ ಕುರಿತು ಸಾಮಾಜಿಕ ಜಾಲತಾಣಗಳಾದ ವಾಟ್ಸಪ್, ಫೆಸ್‍ಬುಕ್‍ಗಳಲ್ಲಿ ಪೋಸ್ಟ್ ಗಳನ್ನು ರವಾನಿಸುವುದಾಗಲಿ ಅಥವಾ ಫಾರ್ವಡ್ ಮಾಡುವುದಾಗಲಿ ಮಾಡಿದರೆ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.
ಸಭೆಯಲ್ಲಿ ಬೆಳ್ಳಾರೆ ಪೊಲೀಸ್ ಠಾಣೆಯ ವ್ಯಾಪ್ತಿಗೊಳಪಟ್ಟ ಎಲ್ಲಾ ದೇವಸ್ಥಾನಗಳ, ಚರ್ಚ್‍ಗಳ ಹಾಗೂ ಮಸೀದಿಗಳ ಮುಖ್ಯಸ್ಥರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಠಾಣೆಯ ಸಿಬ್ಬಂದಿಗಳು ಸಹಕರಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಸುರೆಂಬ ಉಸಿರಿನ ಮಹತ್ವ ಇದು…

ವರುಷದಿಂದ ವರುಷಕ್ಕೆ ಬಿಸಿ ಏರುತ್ತಿರುವ ಭೂಮಿ, ಕಳಕೊಳ್ಳುತ್ತಿರುವ ಸಸ್ಯ ಸಂಪತ್ತು, ಭೂಮಿಯನ್ನು ತಂಪಾಗಿಸಲು…

1 hour ago

ಹಲಸಿನ ಬೀಜದ ಖಾರಾ ಸೇವ್‌ – ನೀವೂ ಮಾಡಿನೋಡಿ

ಹಲಸು ಮೌಲ್ಯವರ್ಧನೆಯಾಗಿ ಅಡುಗೆ ಮನೆ ಸೇರುತ್ತಿದೆ. ಅದರ ಜೊತೆಗೇ ಹಲಸು ವಿವಿಧ ರೂಪದಲ್ಲಿ…

2 hours ago

ಸಂಪತ್ತಿನಷ್ಟೇ ಸದ್ಭುದ್ಧಿಯೂ ಮುಖ್ಯ – ರಾಘವೇಶ್ವರ ಶ್ರೀ

ಸಮಾಜಕ್ಕೆ, ರಾಷ್ಟ್ರಕ್ಕೆ ವಿಶ್ವಕ್ಕೆ ಬೆಳಕು ನೀಡುವ ವ್ಯವಸ್ಥೆಯನ್ನು ಬೆಳೆಸುವುದು ಇಡೀ ಸಮಾಜದ ಜವಾಬ್ದಾರಿ…

3 hours ago

ಸಾಮಾಜಿಕ ಕಾರ್ಯಕರ್ತ ಧನಂಜಯ ವಾಗ್ಲೆ ಇನ್ನಿಲ್ಲ | ಅವರು ಬರೆದಿರುವ ಓದಲೇಬೇಕಾದ ಬರಹ ಇಲ್ಲಿದೆ…

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಧನಂಜಯ ವಾಗ್ಲೆ ಅವರು ಈಚೆಗೆ ನಿಧನರಾದರು.…

7 hours ago

ಹವಾಮಾನ ವರದಿ | 13-07-2025 | ಇಂದು ಸಾಮಾನ್ಯ ಮಳೆ | ಕರಾವಳಿ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ – ಏಕೆ?

ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯ ಪರಿಣಾಮದಿಂದ ನಮ್ಮ ಕರಾವಳಿಯಲ್ಲಿ ಮಳೆಯ ಪ್ರಮಾಣ…

10 hours ago

ಮೊಬೈಲ್‌ ಕಣ್ಣು ಮಾತ್ರವಲ್ಲ – ಮನಸ್ಸನ್ನೂ ಹಾಳು ಮಾಡುತ್ತದೆ..!

ಮೊಬೈಲ್‌ ಎಷ್ಟು ಅಪಾಯಕಾರಿ ಸ್ಥಿತಿಗೆ ಮಕ್ಕಳನ್ನು ದೂಡುತ್ತದೆ ಎಂದರೆ, ಕಣ್ಣು ಮಾತ್ರವಲ್ಲ ಮನಸ್ಸುಗಳನ್ನೂ…

13 hours ago