ಬೆಳ್ಳಾರೆ: ಮುಂಬರುತ್ತಿರುವ ಈದ್ ಮಿಲಾದ್, ಟಿಪ್ಪು ಜಯಂತಿ ಮತ್ತು ಅಯೋಧ್ಯೆ ತೀರ್ಪಿನ ಹಿನ್ನೆಲೆಯಲ್ಲಿ ಬೆಳ್ಳಾರೆ ಪೊಲೀಸ್ ಠಾಣೆ ವತಿಯಿಂದ ಶಾಂತಿ ಸೌಹಾರ್ದತೆಯ ವಿಶೇಷ ಸಭೆ ರಾಜೀವ್ ಗಾಂಧಿ ಸೇವಾ ಕೇಂದ್ರದಲ್ಲಿ ನಡೆಯಿತು.
ಬೆಳ್ಳಾರೆ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಈರಯ್ಯ.ಡಿ.ಎನ್ ಅವರು ಮಾಹಿತಿ ನೀಡುತ್ತಾ ಹಬ್ಬದ ದಿನದಂದು ಯಾವುದೇ ಅಹಿತಕರ ಘಟನೆ ನಡೆಯಲು ಆಸ್ಪದ ನೀಡಬಾರದು. ಈದ್ ಮಿಲಾದ್ ಜಾಥದಲ್ಲಿ ಅನುಮತಿ ಪಡೆದು ಕಾಲ್ನಡಿಗೆ ಜಾಥಾ ನಡೆಸಬಹುದು. ವಾಹನದ ಜಾಥಕ್ಕೆ ಅವಕಾಶವಿರುವುದಿಲ್ಲ ಎಂದರು. ಬಳಿಕ ಸಾರ್ವಜನಿಕ ಹಿತಾಸಕ್ತಿ ಹಾಗು ಸಮಾಜದಲ್ಲಿ ಶಾಂತಿ ಹಾಗು ಸುವ್ಯವಸ್ಥೆ ಕುರಿತು ಮಾತನಾಡಿದ ಸಬ್ಇನ್ಸ್ಪೆಕ್ಟರ್ ಅವರು ಟಿಪ್ಪು ಜಯಂತಿಯನ್ನು ಸರ್ಕಾರ ನಿಷೇಧಿಸಿರುವುದರಿಂದ ಸಾರ್ವಜನಿಕವಾಗಿ ಆಚರಣೆಗೆ ಯಾವುದೇ ಅವಕಾಶವಿಲ್ಲ. ಅಯೋಧ್ಯೆ ತೀರ್ಪು ಬಂದಾಗ ಯಾರ ಪರವಾಗಿದ್ದರೂ ಅದನ್ನು ಸಮಾನವಾಗಿ ಸ್ವೀಕರಿಸಬೇಕು. ಪರವಾಗಿ ತೀರ್ಪು ಬಂದಾಗ ಸಾರ್ವಜನಿಕವಾಗಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸುವುದು, ವಾಹನ ಜಾಥಾ ನಡೆಸುವುದು ಮಾಡಕೂಡದು. ಅಂಥಹ ತೊಂದರೆಗಳಾದಾಗ ತಕ್ಷಣವೇ ಠಾಣೆಗೆ ಮಾಹಿತಿ ನೀಡಿ ಎಂದು ಹೇಳಿದರು.
ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ ಸಬ್ಇನ್ಸ್ಪೆಕ್ಟರ್ ಅವರು ಅಯೋಧ್ಯೆ ತೀರ್ಪಿನ ಕುರಿತು ಸಾಮಾಜಿಕ ಜಾಲತಾಣಗಳಾದ ವಾಟ್ಸಪ್, ಫೆಸ್ಬುಕ್ಗಳಲ್ಲಿ ಪೋಸ್ಟ್ ಗಳನ್ನು ರವಾನಿಸುವುದಾಗಲಿ ಅಥವಾ ಫಾರ್ವಡ್ ಮಾಡುವುದಾಗಲಿ ಮಾಡಿದರೆ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.
ಸಭೆಯಲ್ಲಿ ಬೆಳ್ಳಾರೆ ಪೊಲೀಸ್ ಠಾಣೆಯ ವ್ಯಾಪ್ತಿಗೊಳಪಟ್ಟ ಎಲ್ಲಾ ದೇವಸ್ಥಾನಗಳ, ಚರ್ಚ್ಗಳ ಹಾಗೂ ಮಸೀದಿಗಳ ಮುಖ್ಯಸ್ಥರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಠಾಣೆಯ ಸಿಬ್ಬಂದಿಗಳು ಸಹಕರಿಸಿದರು.
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…