Advertisement
ಮಾಹಿತಿ

ಬೆಳ್ಳಾರೆ ಪೊಲೀಸ್ ಠಾಣೆ ವತಿಯಿಂದ ಶಾಂತಿ ಸೌಹಾರ್ದತೆ ಸಭೆ

Share

ಬೆಳ್ಳಾರೆ: ಮುಂಬರುತ್ತಿರುವ ಈದ್ ಮಿಲಾದ್, ಟಿಪ್ಪು ಜಯಂತಿ ಮತ್ತು ಅಯೋಧ್ಯೆ ತೀರ್ಪಿನ ಹಿನ್ನೆಲೆಯಲ್ಲಿ ಬೆಳ್ಳಾರೆ ಪೊಲೀಸ್ ಠಾಣೆ ವತಿಯಿಂದ ಶಾಂತಿ ಸೌಹಾರ್ದತೆಯ ವಿಶೇಷ ಸಭೆ ರಾಜೀವ್ ಗಾಂಧಿ ಸೇವಾ ಕೇಂದ್ರದಲ್ಲಿ ನಡೆಯಿತು.

ಬೆಳ್ಳಾರೆ ಪೊಲೀಸ್ ಠಾಣೆಯ ಸಬ್‍ಇನ್‍ಸ್ಪೆಕ್ಟರ್ ಈರಯ್ಯ.ಡಿ.ಎನ್ ಅವರು ಮಾಹಿತಿ ನೀಡುತ್ತಾ ಹಬ್ಬದ ದಿನದಂದು ಯಾವುದೇ ಅಹಿತಕರ ಘಟನೆ ನಡೆಯಲು ಆಸ್ಪದ ನೀಡಬಾರದು. ಈದ್ ಮಿಲಾದ್ ಜಾಥದಲ್ಲಿ ಅನುಮತಿ ಪಡೆದು ಕಾಲ್ನಡಿಗೆ ಜಾಥಾ ನಡೆಸಬಹುದು. ವಾಹನದ ಜಾಥಕ್ಕೆ ಅವಕಾಶವಿರುವುದಿಲ್ಲ ಎಂದರು.  ಬಳಿಕ ಸಾರ್ವಜನಿಕ ಹಿತಾಸಕ್ತಿ ಹಾಗು ಸಮಾಜದಲ್ಲಿ ಶಾಂತಿ ಹಾಗು ಸುವ್ಯವಸ್ಥೆ ಕುರಿತು ಮಾತನಾಡಿದ ಸಬ್‍ಇನ್‍ಸ್ಪೆಕ್ಟರ್ ಅವರು ಟಿಪ್ಪು ಜಯಂತಿಯನ್ನು ಸರ್ಕಾರ ನಿಷೇಧಿಸಿರುವುದರಿಂದ ಸಾರ್ವಜನಿಕವಾಗಿ ಆಚರಣೆಗೆ ಯಾವುದೇ ಅವಕಾಶವಿಲ್ಲ. ಅಯೋಧ್ಯೆ ತೀರ್ಪು ಬಂದಾಗ ಯಾರ ಪರವಾಗಿದ್ದರೂ ಅದನ್ನು ಸಮಾನವಾಗಿ ಸ್ವೀಕರಿಸಬೇಕು. ಪರವಾಗಿ ತೀರ್ಪು ಬಂದಾಗ ಸಾರ್ವಜನಿಕವಾಗಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸುವುದು, ವಾಹನ ಜಾಥಾ ನಡೆಸುವುದು ಮಾಡಕೂಡದು. ಅಂಥಹ ತೊಂದರೆಗಳಾದಾಗ ತಕ್ಷಣವೇ ಠಾಣೆಗೆ ಮಾಹಿತಿ ನೀಡಿ ಎಂದು ಹೇಳಿದರು.

ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ ಸಬ್‍ಇನ್‍ಸ್ಪೆಕ್ಟರ್ ಅವರು ಅಯೋಧ್ಯೆ ತೀರ್ಪಿನ ಕುರಿತು ಸಾಮಾಜಿಕ ಜಾಲತಾಣಗಳಾದ ವಾಟ್ಸಪ್, ಫೆಸ್‍ಬುಕ್‍ಗಳಲ್ಲಿ ಪೋಸ್ಟ್ ಗಳನ್ನು ರವಾನಿಸುವುದಾಗಲಿ ಅಥವಾ ಫಾರ್ವಡ್ ಮಾಡುವುದಾಗಲಿ ಮಾಡಿದರೆ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.
ಸಭೆಯಲ್ಲಿ ಬೆಳ್ಳಾರೆ ಪೊಲೀಸ್ ಠಾಣೆಯ ವ್ಯಾಪ್ತಿಗೊಳಪಟ್ಟ ಎಲ್ಲಾ ದೇವಸ್ಥಾನಗಳ, ಚರ್ಚ್‍ಗಳ ಹಾಗೂ ಮಸೀದಿಗಳ ಮುಖ್ಯಸ್ಥರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಠಾಣೆಯ ಸಿಬ್ಬಂದಿಗಳು ಸಹಕರಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

4 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

4 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

6 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

9 hours ago