Advertisement
Uncategorized

ಬೆಳ್ಳಾರೆ ಮಸೀದಿಯ ಘಟನೆ : ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಪಿ ಕುಂಞಗುಡ್ಡೆ ಸ್ಪಷ್ಟೀಕರಣ

Share

ಬೆಳ್ಳಾರೆ: ರಂಝಾನ್ ಪ್ರಭಾಷಣಕ್ಕೆ ಶಾಫಿ ಅವರು ಈ ಬಾರಿ ಯಾವುದೇ ಅನುಮತಿಯನ್ನು ಕೋರಿ ಆಡಳಿತ ಸಭೆಗೆ ಅರ್ಜಿ ಸಲ್ಲಿಸಲಿಲ್ಲ.ಹೀಗಾಗಿ ಭಾಷಣದ ಬಗ್ಗೆ ಪ್ರಶ್ನಿಸಿದಾಗ ಈ ಘಟನೆ ನಡೆದಿದೆ ಎಂದು ಮಸೀದಿಯ ಪ್ರಧಾನ ಕಾರ್ಯ ದರ್ಶಿ ಇಬ್ರಾಹಿಂ ಪಿ ಕುಂಞಗುಡ್ಡೆ ಪತ್ರಿಕಾ ಪ್ರಕಟಣೆಯಲ್ಲಿ  ಸ್ಪಷ್ಟೀಕರಣ ನೀಡಿದ್ದಾರೆ.

ಶಾಫಿ ಬೆಳ್ಳಾರೆ ಅವರು ಸುಮಾರು 10 ವರ್ಷಗಳಿಂದ ಭಾಷಣ ಮಾಡುತ್ತಾ ಬಂದಿದ್ದು, ಅವರು ಬೆಳ್ಳಾರೆ ಮಸೀದಿಯ ಒಬ್ಬ ಸದಸ್ಯನಾಗಿದ್ದರೂ,ಅವರಿಗೆ ಭಾಷಣಕ್ಕೆ ಈ ಹಿಂದೆ ಅನುಮತಿ ನೀಡಲಾಗಿತ್ತು. ನಂತರ ಅದು ವಾಟ್ಸಾಪ್ ಗಳಲ್ಲಿ ರಾಜಕೀಯ ಪಕ್ಷದ ಕಾರ್ಯದರ್ಶಿಯ ಭಾಷಣ ಬೆಳ್ಳಾರೆ ಮಸೀದಿ ಯಲ್ಲಿದೆ ಎಂಬ ಪೋಸ್ಟರ್ ಗಳು ಬರಲಾರಂಭಿಸಿದ ನಂತರ ಅವರ ಭಾಷಣಕ್ಕೆ 2 ವರುಷಗಳ ಮೊದಲೆ ವಿರೋಧವಾಗಿತ್ತು. ಆಗ ಆಡಳಿತ ಸಮಿತಿಯು ಇನ್ನು ಮುಂದೆ ಯಾವುದೇ ಕಾರ್ಯಕ್ರಮವಿದ್ದರೂ ಆಡಳಿತ ಸಮಿತಿಯ ಸಭೆಗೆ ಅರ್ಜಿಯನ್ನು ಸಲ್ಲಿಸಬೇಕು. ಅದಲ್ಲದೆ ಆಡಳಿತ ಸಮಿತಿಯ ತೀರ್ಮಾನ ದಂತೆ ಅವರಿಗೆ ಅನುಮತಿ ನೀಡಲಾಗುದೆಂದು ತೀರ್ಮಾನ ಮಾಡಲಾಗಿತ್ತು. ಆದರೆ ಈ ವರುಷ ರಂಝಾನ್ ಪ್ರಭಾಷಣಕ್ಕೆ ಶಾಫಿ ಯಾವುದೇ ಅನುಮತಿಯನ್ನು ಕೋರಿ ಆಡಳಿತ ಸಭೆಗೆ ಅರ್ಜಿ ಸಲ್ಲಿಸಲಿಲ್ಲ. ಆದರೆ ಜೂನ್ 1 ರಂದು ಬೆಳಗ್ಗೆ ಭಾಷಣಕ್ಕೆ ಅನುಮತಿ ಇದೆ ಎಂದು ಗೊತ್ತಾಗಿದ್ದು ಅದರಂತೆಯೆ ರಾತ್ರಿ ತರಾವೀಹ್ ನಮಾಝಿನ ನಂತರ ಶಾಫಿ ಪ್ರಭಾಷಣಕ್ಕೆ ಎದ್ದು ನಿಂತಾಗ ಕಾರ್ಯದರ್ಶಿ ನಾನು ಮತ್ತು ಉಪಾಧ್ಯಕ್ಷ ರಾದ ಯು ಹೆಚ್ ಅಬೂಬಕ್ಕರ್ ಎಂಬುವವರು  ಅನುಮತಿ ನೀಡದಿರುವ ಬಗ್ಗೆ ವಿಚಾರಿಸಿದಾಗ ಘಟನೆ ನಡೆದಿದ್ದು ಅದಕ್ಕೆ ಆ ರಾಜಕೀಯ ಪಕ್ಷದ ಕಾರಣವಾಗಿರುತ್ತದೆ ಎಂದು ಈ ರಂಝಾನ್ ತಿಂಗಳ ಮೇಲೆ ಸತ್ಯ ಮಾಡಿ ಹೇಳುತ್ತೇನೆ ಹಾಗೂ ಎಲ್ಲಿ ಬೇಕಾದರೂ ಪ್ರಮಾಣಕ್ಕೂ ಸಿದ್ದನಿದ್ದೇನೆ ಎಂದು ಇಬ್ರಾಹಿಂ ಪಿ ಕುಂಞಗುಡ್ಡೆ  ಪತ್ರಿಕಾ  ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ | ಮಾರ್ಚ್‌ ತಿಂಗಳ ಇಳಿಕೆಗೆ ಹಲವು ಕಾರಣ…

ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…

8 hours ago

ಪೂರ್ವ ಮುಂಗಾರು ಸಿಡಿಲು, ಗಾಳಿ ಮಳೆಗೆ ಮುನ್ನೆಚ್ಚರಿಕೆ ವಹಿಸಿ : ವಿಜಯನಗರ ಜಿಲ್ಲಾಧಿಕಾರಿ ಸೂಚನೆ

ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…

14 hours ago

ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ: ಕೇರಳದಿಂದ ಖರೀದಿಗೆ ಸರ್ಕಾರ ನಿರ್ಧಾರ

ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…

14 hours ago

ಭತ್ತದ ಗದ್ದೆಯಿಂದ ಅಡಿಕೆ ತೋಟ | ಮಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬಿಚ್ಚಿಟ್ಟ ಸಂಶೋಧನೆ

ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್‌ ಲಭ್ಯತೆ ಕಡಿಮೆಯಾಗುತ್ತದೆ ಎಂದು…

23 hours ago

ಹವಾಮಾನ ವರದಿ | 09-03-2026 | ಕರಾವಳಿ–ಮಲೆನಾಡಿನಲ್ಲಿ ಇಂದು ಸಂಜೆ ಗುಡುಗು ಮಳೆಯ ಸಾಧ್ಯತೆ | ಮಾರ್ಚ್ ಮಧ್ಯಭಾಗದಲ್ಲಿ ಮಳೆ ಚಟುವಟಿಕೆ ಹೆಚ್ಚಳ..?

ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…

1 day ago

ರೈತರಿಂದ ಉದ್ಯಮಿಗಳವರೆಗೆ : ಕೃಷಿ ಕ್ಷೇತ್ರಕ್ಕೆ ಸರ್ಕಾರದ ಹೊಸ ದೃಷ್ಟಿಕೋನ

ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…

2 days ago