Uncategorized

ಬೆಳ್ಳಾರೆ ಮಸೀದಿಯ ಘಟನೆ : ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಪಿ ಕುಂಞಗುಡ್ಡೆ ಸ್ಪಷ್ಟೀಕರಣ

Share

ಬೆಳ್ಳಾರೆ: ರಂಝಾನ್ ಪ್ರಭಾಷಣಕ್ಕೆ ಶಾಫಿ ಅವರು ಈ ಬಾರಿ ಯಾವುದೇ ಅನುಮತಿಯನ್ನು ಕೋರಿ ಆಡಳಿತ ಸಭೆಗೆ ಅರ್ಜಿ ಸಲ್ಲಿಸಲಿಲ್ಲ.ಹೀಗಾಗಿ ಭಾಷಣದ ಬಗ್ಗೆ ಪ್ರಶ್ನಿಸಿದಾಗ ಈ ಘಟನೆ ನಡೆದಿದೆ ಎಂದು ಮಸೀದಿಯ ಪ್ರಧಾನ ಕಾರ್ಯ ದರ್ಶಿ ಇಬ್ರಾಹಿಂ ಪಿ ಕುಂಞಗುಡ್ಡೆ ಪತ್ರಿಕಾ ಪ್ರಕಟಣೆಯಲ್ಲಿ  ಸ್ಪಷ್ಟೀಕರಣ ನೀಡಿದ್ದಾರೆ.

ಶಾಫಿ ಬೆಳ್ಳಾರೆ ಅವರು ಸುಮಾರು 10 ವರ್ಷಗಳಿಂದ ಭಾಷಣ ಮಾಡುತ್ತಾ ಬಂದಿದ್ದು, ಅವರು ಬೆಳ್ಳಾರೆ ಮಸೀದಿಯ ಒಬ್ಬ ಸದಸ್ಯನಾಗಿದ್ದರೂ,ಅವರಿಗೆ ಭಾಷಣಕ್ಕೆ ಈ ಹಿಂದೆ ಅನುಮತಿ ನೀಡಲಾಗಿತ್ತು. ನಂತರ ಅದು ವಾಟ್ಸಾಪ್ ಗಳಲ್ಲಿ ರಾಜಕೀಯ ಪಕ್ಷದ ಕಾರ್ಯದರ್ಶಿಯ ಭಾಷಣ ಬೆಳ್ಳಾರೆ ಮಸೀದಿ ಯಲ್ಲಿದೆ ಎಂಬ ಪೋಸ್ಟರ್ ಗಳು ಬರಲಾರಂಭಿಸಿದ ನಂತರ ಅವರ ಭಾಷಣಕ್ಕೆ 2 ವರುಷಗಳ ಮೊದಲೆ ವಿರೋಧವಾಗಿತ್ತು. ಆಗ ಆಡಳಿತ ಸಮಿತಿಯು ಇನ್ನು ಮುಂದೆ ಯಾವುದೇ ಕಾರ್ಯಕ್ರಮವಿದ್ದರೂ ಆಡಳಿತ ಸಮಿತಿಯ ಸಭೆಗೆ ಅರ್ಜಿಯನ್ನು ಸಲ್ಲಿಸಬೇಕು. ಅದಲ್ಲದೆ ಆಡಳಿತ ಸಮಿತಿಯ ತೀರ್ಮಾನ ದಂತೆ ಅವರಿಗೆ ಅನುಮತಿ ನೀಡಲಾಗುದೆಂದು ತೀರ್ಮಾನ ಮಾಡಲಾಗಿತ್ತು. ಆದರೆ ಈ ವರುಷ ರಂಝಾನ್ ಪ್ರಭಾಷಣಕ್ಕೆ ಶಾಫಿ ಯಾವುದೇ ಅನುಮತಿಯನ್ನು ಕೋರಿ ಆಡಳಿತ ಸಭೆಗೆ ಅರ್ಜಿ ಸಲ್ಲಿಸಲಿಲ್ಲ. ಆದರೆ ಜೂನ್ 1 ರಂದು ಬೆಳಗ್ಗೆ ಭಾಷಣಕ್ಕೆ ಅನುಮತಿ ಇದೆ ಎಂದು ಗೊತ್ತಾಗಿದ್ದು ಅದರಂತೆಯೆ ರಾತ್ರಿ ತರಾವೀಹ್ ನಮಾಝಿನ ನಂತರ ಶಾಫಿ ಪ್ರಭಾಷಣಕ್ಕೆ ಎದ್ದು ನಿಂತಾಗ ಕಾರ್ಯದರ್ಶಿ ನಾನು ಮತ್ತು ಉಪಾಧ್ಯಕ್ಷ ರಾದ ಯು ಹೆಚ್ ಅಬೂಬಕ್ಕರ್ ಎಂಬುವವರು  ಅನುಮತಿ ನೀಡದಿರುವ ಬಗ್ಗೆ ವಿಚಾರಿಸಿದಾಗ ಘಟನೆ ನಡೆದಿದ್ದು ಅದಕ್ಕೆ ಆ ರಾಜಕೀಯ ಪಕ್ಷದ ಕಾರಣವಾಗಿರುತ್ತದೆ ಎಂದು ಈ ರಂಝಾನ್ ತಿಂಗಳ ಮೇಲೆ ಸತ್ಯ ಮಾಡಿ ಹೇಳುತ್ತೇನೆ ಹಾಗೂ ಎಲ್ಲಿ ಬೇಕಾದರೂ ಪ್ರಮಾಣಕ್ಕೂ ಸಿದ್ದನಿದ್ದೇನೆ ಎಂದು ಇಬ್ರಾಹಿಂ ಪಿ ಕುಂಞಗುಡ್ಡೆ  ಪತ್ರಿಕಾ  ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

 

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸುನಿತಾ ವಿಲಿಯಮ್ಸ್ ಈ ಸಮಾಜಕ್ಕೆ ಸ್ಫೂರ್ತಿ ಏಕೆ…?

ಸಣ್ಣಪುಟ್ಟ ಸಮಸ್ಯೆಗಳಿಗೆ, ಮುಂದೆ ಆಗಬಹುದಾದ ಅನೇಕ ಸಾಧ್ಯತೆಗಳ ಊಹಾತ್ಮಕ ಘಟನೆಗಳಿಗೆ, ಇನ್ನೂ ಅನೇಕ…

48 minutes ago

ಗಗನಯಾನಿ ಸುನಿತಾ ವಿಲಿಯಮ್ಸ್‌ಗೆ 9 ತಿಂಗಳ ಬಾಹ್ಯಾಕಾಶ ವಾಸ | ಭೂಮಿಗೆ ಕರೆತರುವ ಪ್ರಯತ್ನಕ್ಕೆ ಚಾಲನೆ | ನಾಸಾ ಹೇಳಿಕೆ |

ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ…

3 hours ago

ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಪೋಷಕರನ್ನು ಬಿಟ್ಟು ಮಕ್ಕಳು ನಾಪತ್ತೆ…!

ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ನಂತರ, ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಬಿಟ್ಟು…

4 hours ago

ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್

ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಬಿಹಾರ ಮತ್ತು ಉತ್ತರ…

5 hours ago

ರಾಜ್ಯದಲ್ಲಿ ಶೀಘ್ರ 5 ಸಾವಿರ ಶಿಕ್ಷಕರ ನೇಮಕ

ಕಲ್ಯಾಣ ಕರ್ನಾಟಕ ಭಾಗದಲ್ಲಿ 1800 ಶಿಕ್ಷಕರು ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 5 ಸಾವಿರ…

5 hours ago

ಎಫ್‌ಪಿಒ ಗಳಿಗೆ ರಾಜ್ಯ ಸರ್ಕಾರದಿಂದ ನೆರವು

ರೈತರು ಸ್ಥಾಪಿಸಿರುವ ರೈತ ಉತ್ಪಾದಕ ಸಂಸ್ಥೆಗಳ ಅಭಿವೃದ್ಧಿಗೆ ರಾಜ್ಯ ಸರಕಾರದಿಂದ ಸಕಲ ಸಹಕಾರ…

5 hours ago