Uncategorized

ಬೆಳ್ಳಾರೆ ಮಸೀದಿಯ ಘಟನೆ : ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಪಿ ಕುಂಞಗುಡ್ಡೆ ಸ್ಪಷ್ಟೀಕರಣ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬೆಳ್ಳಾರೆ: ರಂಝಾನ್ ಪ್ರಭಾಷಣಕ್ಕೆ ಶಾಫಿ ಅವರು ಈ ಬಾರಿ ಯಾವುದೇ ಅನುಮತಿಯನ್ನು ಕೋರಿ ಆಡಳಿತ ಸಭೆಗೆ ಅರ್ಜಿ ಸಲ್ಲಿಸಲಿಲ್ಲ.ಹೀಗಾಗಿ ಭಾಷಣದ ಬಗ್ಗೆ ಪ್ರಶ್ನಿಸಿದಾಗ ಈ ಘಟನೆ ನಡೆದಿದೆ ಎಂದು ಮಸೀದಿಯ ಪ್ರಧಾನ ಕಾರ್ಯ ದರ್ಶಿ ಇಬ್ರಾಹಿಂ ಪಿ ಕುಂಞಗುಡ್ಡೆ ಪತ್ರಿಕಾ ಪ್ರಕಟಣೆಯಲ್ಲಿ  ಸ್ಪಷ್ಟೀಕರಣ ನೀಡಿದ್ದಾರೆ.

Advertisement
Advertisement

ಶಾಫಿ ಬೆಳ್ಳಾರೆ ಅವರು ಸುಮಾರು 10 ವರ್ಷಗಳಿಂದ ಭಾಷಣ ಮಾಡುತ್ತಾ ಬಂದಿದ್ದು, ಅವರು ಬೆಳ್ಳಾರೆ ಮಸೀದಿಯ ಒಬ್ಬ ಸದಸ್ಯನಾಗಿದ್ದರೂ,ಅವರಿಗೆ ಭಾಷಣಕ್ಕೆ ಈ ಹಿಂದೆ ಅನುಮತಿ ನೀಡಲಾಗಿತ್ತು. ನಂತರ ಅದು ವಾಟ್ಸಾಪ್ ಗಳಲ್ಲಿ ರಾಜಕೀಯ ಪಕ್ಷದ ಕಾರ್ಯದರ್ಶಿಯ ಭಾಷಣ ಬೆಳ್ಳಾರೆ ಮಸೀದಿ ಯಲ್ಲಿದೆ ಎಂಬ ಪೋಸ್ಟರ್ ಗಳು ಬರಲಾರಂಭಿಸಿದ ನಂತರ ಅವರ ಭಾಷಣಕ್ಕೆ 2 ವರುಷಗಳ ಮೊದಲೆ ವಿರೋಧವಾಗಿತ್ತು. ಆಗ ಆಡಳಿತ ಸಮಿತಿಯು ಇನ್ನು ಮುಂದೆ ಯಾವುದೇ ಕಾರ್ಯಕ್ರಮವಿದ್ದರೂ ಆಡಳಿತ ಸಮಿತಿಯ ಸಭೆಗೆ ಅರ್ಜಿಯನ್ನು ಸಲ್ಲಿಸಬೇಕು. ಅದಲ್ಲದೆ ಆಡಳಿತ ಸಮಿತಿಯ ತೀರ್ಮಾನ ದಂತೆ ಅವರಿಗೆ ಅನುಮತಿ ನೀಡಲಾಗುದೆಂದು ತೀರ್ಮಾನ ಮಾಡಲಾಗಿತ್ತು. ಆದರೆ ಈ ವರುಷ ರಂಝಾನ್ ಪ್ರಭಾಷಣಕ್ಕೆ ಶಾಫಿ ಯಾವುದೇ ಅನುಮತಿಯನ್ನು ಕೋರಿ ಆಡಳಿತ ಸಭೆಗೆ ಅರ್ಜಿ ಸಲ್ಲಿಸಲಿಲ್ಲ. ಆದರೆ ಜೂನ್ 1 ರಂದು ಬೆಳಗ್ಗೆ ಭಾಷಣಕ್ಕೆ ಅನುಮತಿ ಇದೆ ಎಂದು ಗೊತ್ತಾಗಿದ್ದು ಅದರಂತೆಯೆ ರಾತ್ರಿ ತರಾವೀಹ್ ನಮಾಝಿನ ನಂತರ ಶಾಫಿ ಪ್ರಭಾಷಣಕ್ಕೆ ಎದ್ದು ನಿಂತಾಗ ಕಾರ್ಯದರ್ಶಿ ನಾನು ಮತ್ತು ಉಪಾಧ್ಯಕ್ಷ ರಾದ ಯು ಹೆಚ್ ಅಬೂಬಕ್ಕರ್ ಎಂಬುವವರು  ಅನುಮತಿ ನೀಡದಿರುವ ಬಗ್ಗೆ ವಿಚಾರಿಸಿದಾಗ ಘಟನೆ ನಡೆದಿದ್ದು ಅದಕ್ಕೆ ಆ ರಾಜಕೀಯ ಪಕ್ಷದ ಕಾರಣವಾಗಿರುತ್ತದೆ ಎಂದು ಈ ರಂಝಾನ್ ತಿಂಗಳ ಮೇಲೆ ಸತ್ಯ ಮಾಡಿ ಹೇಳುತ್ತೇನೆ ಹಾಗೂ ಎಲ್ಲಿ ಬೇಕಾದರೂ ಪ್ರಮಾಣಕ್ಕೂ ಸಿದ್ದನಿದ್ದೇನೆ ಎಂದು ಇಬ್ರಾಹಿಂ ಪಿ ಕುಂಞಗುಡ್ಡೆ  ಪತ್ರಿಕಾ  ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಕ್ರಮವಾಗಿ ಅಡಿಕೆ ಸಾಗಾಟ | ಮಿಜೋರಾಂನಲ್ಲಿ 386 ಚೀಲ ಅಡಿಕೆ ವಶಕ್ಕೆ ಪಡೆದ ಅಧಿಕಾರಿಗಳು

ಮಿಜೋರಾಂನ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ,…

9 hours ago

ಹವಾಮಾನ ವರದಿ | 13-06-2025 | ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ | ಜೂ.19 ರಿಂದ ಮಳೆಯ ಪ್ರಮಾಣ ಕಡಿಮೆ ಸಾಧ್ಯತೆ |

ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್…

16 hours ago

ಕರಾವಳಿ ಹಾಗೂ ರಾಜ್ಯದ ಹಲವೆಡೆ ಧಾರಾಕಾರ ಮಳೆ |

ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…

22 hours ago

ಈ ರಾಶಿಯವರ ಜಾತಕದಲ್ಲಿ ಗುರು ಬಲ | ಗಜಕೇಸರಿ ಯೋಗದಿಂದ ಸಕಲೈಶ್ವರ್ಯ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

23 hours ago

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ  ಘಟನೆ ಗುಜರಾತಿನ ಅಹಮದಾಬಾದ್​​ನಲ್ಲಿ…

2 days ago

ಹವಾಮಾನ ವರದಿ | 12-06-2025 | ಮುಂದೂಡಿದ ಭಾರೀ ಮಳೆ..! | ಜೂ.13 ರಿಂದ ಮುಂದುವರಿಯುವ ಮಳೆ |

ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…

2 days ago