ಬೆಳ್ಳಾರೆ: ರಂಝಾನ್ ಪ್ರಭಾಷಣಕ್ಕೆ ಶಾಫಿ ಅವರು ಈ ಬಾರಿ ಯಾವುದೇ ಅನುಮತಿಯನ್ನು ಕೋರಿ ಆಡಳಿತ ಸಭೆಗೆ ಅರ್ಜಿ ಸಲ್ಲಿಸಲಿಲ್ಲ.ಹೀಗಾಗಿ ಭಾಷಣದ ಬಗ್ಗೆ ಪ್ರಶ್ನಿಸಿದಾಗ ಈ ಘಟನೆ ನಡೆದಿದೆ ಎಂದು ಮಸೀದಿಯ ಪ್ರಧಾನ ಕಾರ್ಯ ದರ್ಶಿ ಇಬ್ರಾಹಿಂ ಪಿ ಕುಂಞಗುಡ್ಡೆ ಪತ್ರಿಕಾ ಪ್ರಕಟಣೆಯಲ್ಲಿ ಸ್ಪಷ್ಟೀಕರಣ ನೀಡಿದ್ದಾರೆ.
ಶಾಫಿ ಬೆಳ್ಳಾರೆ ಅವರು ಸುಮಾರು 10 ವರ್ಷಗಳಿಂದ ಭಾಷಣ ಮಾಡುತ್ತಾ ಬಂದಿದ್ದು, ಅವರು ಬೆಳ್ಳಾರೆ ಮಸೀದಿಯ ಒಬ್ಬ ಸದಸ್ಯನಾಗಿದ್ದರೂ,ಅವರಿಗೆ ಭಾಷಣಕ್ಕೆ ಈ ಹಿಂದೆ ಅನುಮತಿ ನೀಡಲಾಗಿತ್ತು. ನಂತರ ಅದು ವಾಟ್ಸಾಪ್ ಗಳಲ್ಲಿ ರಾಜಕೀಯ ಪಕ್ಷದ ಕಾರ್ಯದರ್ಶಿಯ ಭಾಷಣ ಬೆಳ್ಳಾರೆ ಮಸೀದಿ ಯಲ್ಲಿದೆ ಎಂಬ ಪೋಸ್ಟರ್ ಗಳು ಬರಲಾರಂಭಿಸಿದ ನಂತರ ಅವರ ಭಾಷಣಕ್ಕೆ 2 ವರುಷಗಳ ಮೊದಲೆ ವಿರೋಧವಾಗಿತ್ತು. ಆಗ ಆಡಳಿತ ಸಮಿತಿಯು ಇನ್ನು ಮುಂದೆ ಯಾವುದೇ ಕಾರ್ಯಕ್ರಮವಿದ್ದರೂ ಆಡಳಿತ ಸಮಿತಿಯ ಸಭೆಗೆ ಅರ್ಜಿಯನ್ನು ಸಲ್ಲಿಸಬೇಕು. ಅದಲ್ಲದೆ ಆಡಳಿತ ಸಮಿತಿಯ ತೀರ್ಮಾನ ದಂತೆ ಅವರಿಗೆ ಅನುಮತಿ ನೀಡಲಾಗುದೆಂದು ತೀರ್ಮಾನ ಮಾಡಲಾಗಿತ್ತು. ಆದರೆ ಈ ವರುಷ ರಂಝಾನ್ ಪ್ರಭಾಷಣಕ್ಕೆ ಶಾಫಿ ಯಾವುದೇ ಅನುಮತಿಯನ್ನು ಕೋರಿ ಆಡಳಿತ ಸಭೆಗೆ ಅರ್ಜಿ ಸಲ್ಲಿಸಲಿಲ್ಲ. ಆದರೆ ಜೂನ್ 1 ರಂದು ಬೆಳಗ್ಗೆ ಭಾಷಣಕ್ಕೆ ಅನುಮತಿ ಇದೆ ಎಂದು ಗೊತ್ತಾಗಿದ್ದು ಅದರಂತೆಯೆ ರಾತ್ರಿ ತರಾವೀಹ್ ನಮಾಝಿನ ನಂತರ ಶಾಫಿ ಪ್ರಭಾಷಣಕ್ಕೆ ಎದ್ದು ನಿಂತಾಗ ಕಾರ್ಯದರ್ಶಿ ನಾನು ಮತ್ತು ಉಪಾಧ್ಯಕ್ಷ ರಾದ ಯು ಹೆಚ್ ಅಬೂಬಕ್ಕರ್ ಎಂಬುವವರು ಅನುಮತಿ ನೀಡದಿರುವ ಬಗ್ಗೆ ವಿಚಾರಿಸಿದಾಗ ಘಟನೆ ನಡೆದಿದ್ದು ಅದಕ್ಕೆ ಆ ರಾಜಕೀಯ ಪಕ್ಷದ ಕಾರಣವಾಗಿರುತ್ತದೆ ಎಂದು ಈ ರಂಝಾನ್ ತಿಂಗಳ ಮೇಲೆ ಸತ್ಯ ಮಾಡಿ ಹೇಳುತ್ತೇನೆ ಹಾಗೂ ಎಲ್ಲಿ ಬೇಕಾದರೂ ಪ್ರಮಾಣಕ್ಕೂ ಸಿದ್ದನಿದ್ದೇನೆ ಎಂದು ಇಬ್ರಾಹಿಂ ಪಿ ಕುಂಞಗುಡ್ಡೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
WHO ಮತ್ತು ಜಾಗತಿಕ ಆರೋಗ್ಯ ಸಂಸ್ಥೆಗಳ ಅಡಿಕೆ ಕುರಿತ ನಿಯಂತ್ರಣ ಚರ್ಚೆಗಳ ನಡುವೆಯೂ…
ಚಿಕ್ಕಮಗಳೂರಿನಲ್ಲಿ ಫೆ.17ರಂದು ಕಾಳುಮೆಣಸು ಹಾಗೂ ಸಂಬಾರು ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತು…
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…