Advertisement
Uncategorized

ಬೆಳ್ಳಾರೆ ಮಸೀದಿಯ ಘಟನೆ : ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಪಿ ಕುಂಞಗುಡ್ಡೆ ಸ್ಪಷ್ಟೀಕರಣ

Share

ಬೆಳ್ಳಾರೆ: ರಂಝಾನ್ ಪ್ರಭಾಷಣಕ್ಕೆ ಶಾಫಿ ಅವರು ಈ ಬಾರಿ ಯಾವುದೇ ಅನುಮತಿಯನ್ನು ಕೋರಿ ಆಡಳಿತ ಸಭೆಗೆ ಅರ್ಜಿ ಸಲ್ಲಿಸಲಿಲ್ಲ.ಹೀಗಾಗಿ ಭಾಷಣದ ಬಗ್ಗೆ ಪ್ರಶ್ನಿಸಿದಾಗ ಈ ಘಟನೆ ನಡೆದಿದೆ ಎಂದು ಮಸೀದಿಯ ಪ್ರಧಾನ ಕಾರ್ಯ ದರ್ಶಿ ಇಬ್ರಾಹಿಂ ಪಿ ಕುಂಞಗುಡ್ಡೆ ಪತ್ರಿಕಾ ಪ್ರಕಟಣೆಯಲ್ಲಿ  ಸ್ಪಷ್ಟೀಕರಣ ನೀಡಿದ್ದಾರೆ.

ಶಾಫಿ ಬೆಳ್ಳಾರೆ ಅವರು ಸುಮಾರು 10 ವರ್ಷಗಳಿಂದ ಭಾಷಣ ಮಾಡುತ್ತಾ ಬಂದಿದ್ದು, ಅವರು ಬೆಳ್ಳಾರೆ ಮಸೀದಿಯ ಒಬ್ಬ ಸದಸ್ಯನಾಗಿದ್ದರೂ,ಅವರಿಗೆ ಭಾಷಣಕ್ಕೆ ಈ ಹಿಂದೆ ಅನುಮತಿ ನೀಡಲಾಗಿತ್ತು. ನಂತರ ಅದು ವಾಟ್ಸಾಪ್ ಗಳಲ್ಲಿ ರಾಜಕೀಯ ಪಕ್ಷದ ಕಾರ್ಯದರ್ಶಿಯ ಭಾಷಣ ಬೆಳ್ಳಾರೆ ಮಸೀದಿ ಯಲ್ಲಿದೆ ಎಂಬ ಪೋಸ್ಟರ್ ಗಳು ಬರಲಾರಂಭಿಸಿದ ನಂತರ ಅವರ ಭಾಷಣಕ್ಕೆ 2 ವರುಷಗಳ ಮೊದಲೆ ವಿರೋಧವಾಗಿತ್ತು. ಆಗ ಆಡಳಿತ ಸಮಿತಿಯು ಇನ್ನು ಮುಂದೆ ಯಾವುದೇ ಕಾರ್ಯಕ್ರಮವಿದ್ದರೂ ಆಡಳಿತ ಸಮಿತಿಯ ಸಭೆಗೆ ಅರ್ಜಿಯನ್ನು ಸಲ್ಲಿಸಬೇಕು. ಅದಲ್ಲದೆ ಆಡಳಿತ ಸಮಿತಿಯ ತೀರ್ಮಾನ ದಂತೆ ಅವರಿಗೆ ಅನುಮತಿ ನೀಡಲಾಗುದೆಂದು ತೀರ್ಮಾನ ಮಾಡಲಾಗಿತ್ತು. ಆದರೆ ಈ ವರುಷ ರಂಝಾನ್ ಪ್ರಭಾಷಣಕ್ಕೆ ಶಾಫಿ ಯಾವುದೇ ಅನುಮತಿಯನ್ನು ಕೋರಿ ಆಡಳಿತ ಸಭೆಗೆ ಅರ್ಜಿ ಸಲ್ಲಿಸಲಿಲ್ಲ. ಆದರೆ ಜೂನ್ 1 ರಂದು ಬೆಳಗ್ಗೆ ಭಾಷಣಕ್ಕೆ ಅನುಮತಿ ಇದೆ ಎಂದು ಗೊತ್ತಾಗಿದ್ದು ಅದರಂತೆಯೆ ರಾತ್ರಿ ತರಾವೀಹ್ ನಮಾಝಿನ ನಂತರ ಶಾಫಿ ಪ್ರಭಾಷಣಕ್ಕೆ ಎದ್ದು ನಿಂತಾಗ ಕಾರ್ಯದರ್ಶಿ ನಾನು ಮತ್ತು ಉಪಾಧ್ಯಕ್ಷ ರಾದ ಯು ಹೆಚ್ ಅಬೂಬಕ್ಕರ್ ಎಂಬುವವರು  ಅನುಮತಿ ನೀಡದಿರುವ ಬಗ್ಗೆ ವಿಚಾರಿಸಿದಾಗ ಘಟನೆ ನಡೆದಿದ್ದು ಅದಕ್ಕೆ ಆ ರಾಜಕೀಯ ಪಕ್ಷದ ಕಾರಣವಾಗಿರುತ್ತದೆ ಎಂದು ಈ ರಂಝಾನ್ ತಿಂಗಳ ಮೇಲೆ ಸತ್ಯ ಮಾಡಿ ಹೇಳುತ್ತೇನೆ ಹಾಗೂ ಎಲ್ಲಿ ಬೇಕಾದರೂ ಪ್ರಮಾಣಕ್ಕೂ ಸಿದ್ದನಿದ್ದೇನೆ ಎಂದು ಇಬ್ರಾಹಿಂ ಪಿ ಕುಂಞಗುಡ್ಡೆ  ಪತ್ರಿಕಾ  ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

5 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

6 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

6 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

13 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

18 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

1 day ago