Advertisement
Uncategorized

ಬೆಳ್ಳಾರೆ ಮಸೀದಿಯ ಘಟನೆ : ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಪಿ ಕುಂಞಗುಡ್ಡೆ ಸ್ಪಷ್ಟೀಕರಣ

Share

ಬೆಳ್ಳಾರೆ: ರಂಝಾನ್ ಪ್ರಭಾಷಣಕ್ಕೆ ಶಾಫಿ ಅವರು ಈ ಬಾರಿ ಯಾವುದೇ ಅನುಮತಿಯನ್ನು ಕೋರಿ ಆಡಳಿತ ಸಭೆಗೆ ಅರ್ಜಿ ಸಲ್ಲಿಸಲಿಲ್ಲ.ಹೀಗಾಗಿ ಭಾಷಣದ ಬಗ್ಗೆ ಪ್ರಶ್ನಿಸಿದಾಗ ಈ ಘಟನೆ ನಡೆದಿದೆ ಎಂದು ಮಸೀದಿಯ ಪ್ರಧಾನ ಕಾರ್ಯ ದರ್ಶಿ ಇಬ್ರಾಹಿಂ ಪಿ ಕುಂಞಗುಡ್ಡೆ ಪತ್ರಿಕಾ ಪ್ರಕಟಣೆಯಲ್ಲಿ  ಸ್ಪಷ್ಟೀಕರಣ ನೀಡಿದ್ದಾರೆ.

Advertisement
Advertisement

ಶಾಫಿ ಬೆಳ್ಳಾರೆ ಅವರು ಸುಮಾರು 10 ವರ್ಷಗಳಿಂದ ಭಾಷಣ ಮಾಡುತ್ತಾ ಬಂದಿದ್ದು, ಅವರು ಬೆಳ್ಳಾರೆ ಮಸೀದಿಯ ಒಬ್ಬ ಸದಸ್ಯನಾಗಿದ್ದರೂ,ಅವರಿಗೆ ಭಾಷಣಕ್ಕೆ ಈ ಹಿಂದೆ ಅನುಮತಿ ನೀಡಲಾಗಿತ್ತು. ನಂತರ ಅದು ವಾಟ್ಸಾಪ್ ಗಳಲ್ಲಿ ರಾಜಕೀಯ ಪಕ್ಷದ ಕಾರ್ಯದರ್ಶಿಯ ಭಾಷಣ ಬೆಳ್ಳಾರೆ ಮಸೀದಿ ಯಲ್ಲಿದೆ ಎಂಬ ಪೋಸ್ಟರ್ ಗಳು ಬರಲಾರಂಭಿಸಿದ ನಂತರ ಅವರ ಭಾಷಣಕ್ಕೆ 2 ವರುಷಗಳ ಮೊದಲೆ ವಿರೋಧವಾಗಿತ್ತು. ಆಗ ಆಡಳಿತ ಸಮಿತಿಯು ಇನ್ನು ಮುಂದೆ ಯಾವುದೇ ಕಾರ್ಯಕ್ರಮವಿದ್ದರೂ ಆಡಳಿತ ಸಮಿತಿಯ ಸಭೆಗೆ ಅರ್ಜಿಯನ್ನು ಸಲ್ಲಿಸಬೇಕು. ಅದಲ್ಲದೆ ಆಡಳಿತ ಸಮಿತಿಯ ತೀರ್ಮಾನ ದಂತೆ ಅವರಿಗೆ ಅನುಮತಿ ನೀಡಲಾಗುದೆಂದು ತೀರ್ಮಾನ ಮಾಡಲಾಗಿತ್ತು. ಆದರೆ ಈ ವರುಷ ರಂಝಾನ್ ಪ್ರಭಾಷಣಕ್ಕೆ ಶಾಫಿ ಯಾವುದೇ ಅನುಮತಿಯನ್ನು ಕೋರಿ ಆಡಳಿತ ಸಭೆಗೆ ಅರ್ಜಿ ಸಲ್ಲಿಸಲಿಲ್ಲ. ಆದರೆ ಜೂನ್ 1 ರಂದು ಬೆಳಗ್ಗೆ ಭಾಷಣಕ್ಕೆ ಅನುಮತಿ ಇದೆ ಎಂದು ಗೊತ್ತಾಗಿದ್ದು ಅದರಂತೆಯೆ ರಾತ್ರಿ ತರಾವೀಹ್ ನಮಾಝಿನ ನಂತರ ಶಾಫಿ ಪ್ರಭಾಷಣಕ್ಕೆ ಎದ್ದು ನಿಂತಾಗ ಕಾರ್ಯದರ್ಶಿ ನಾನು ಮತ್ತು ಉಪಾಧ್ಯಕ್ಷ ರಾದ ಯು ಹೆಚ್ ಅಬೂಬಕ್ಕರ್ ಎಂಬುವವರು  ಅನುಮತಿ ನೀಡದಿರುವ ಬಗ್ಗೆ ವಿಚಾರಿಸಿದಾಗ ಘಟನೆ ನಡೆದಿದ್ದು ಅದಕ್ಕೆ ಆ ರಾಜಕೀಯ ಪಕ್ಷದ ಕಾರಣವಾಗಿರುತ್ತದೆ ಎಂದು ಈ ರಂಝಾನ್ ತಿಂಗಳ ಮೇಲೆ ಸತ್ಯ ಮಾಡಿ ಹೇಳುತ್ತೇನೆ ಹಾಗೂ ಎಲ್ಲಿ ಬೇಕಾದರೂ ಪ್ರಮಾಣಕ್ಕೂ ಸಿದ್ದನಿದ್ದೇನೆ ಎಂದು ಇಬ್ರಾಹಿಂ ಪಿ ಕುಂಞಗುಡ್ಡೆ  ಪತ್ರಿಕಾ  ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

9 hours ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

10 hours ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

1 day ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

2 days ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

2 days ago