Advertisement
Uncategorized

ಬೆಳ್ಳಾರೆ ಮಸೀದಿಯ ಘಟನೆ : ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಪಿ ಕುಂಞಗುಡ್ಡೆ ಸ್ಪಷ್ಟೀಕರಣ

Share

ಬೆಳ್ಳಾರೆ: ರಂಝಾನ್ ಪ್ರಭಾಷಣಕ್ಕೆ ಶಾಫಿ ಅವರು ಈ ಬಾರಿ ಯಾವುದೇ ಅನುಮತಿಯನ್ನು ಕೋರಿ ಆಡಳಿತ ಸಭೆಗೆ ಅರ್ಜಿ ಸಲ್ಲಿಸಲಿಲ್ಲ.ಹೀಗಾಗಿ ಭಾಷಣದ ಬಗ್ಗೆ ಪ್ರಶ್ನಿಸಿದಾಗ ಈ ಘಟನೆ ನಡೆದಿದೆ ಎಂದು ಮಸೀದಿಯ ಪ್ರಧಾನ ಕಾರ್ಯ ದರ್ಶಿ ಇಬ್ರಾಹಿಂ ಪಿ ಕುಂಞಗುಡ್ಡೆ ಪತ್ರಿಕಾ ಪ್ರಕಟಣೆಯಲ್ಲಿ  ಸ್ಪಷ್ಟೀಕರಣ ನೀಡಿದ್ದಾರೆ.

ಶಾಫಿ ಬೆಳ್ಳಾರೆ ಅವರು ಸುಮಾರು 10 ವರ್ಷಗಳಿಂದ ಭಾಷಣ ಮಾಡುತ್ತಾ ಬಂದಿದ್ದು, ಅವರು ಬೆಳ್ಳಾರೆ ಮಸೀದಿಯ ಒಬ್ಬ ಸದಸ್ಯನಾಗಿದ್ದರೂ,ಅವರಿಗೆ ಭಾಷಣಕ್ಕೆ ಈ ಹಿಂದೆ ಅನುಮತಿ ನೀಡಲಾಗಿತ್ತು. ನಂತರ ಅದು ವಾಟ್ಸಾಪ್ ಗಳಲ್ಲಿ ರಾಜಕೀಯ ಪಕ್ಷದ ಕಾರ್ಯದರ್ಶಿಯ ಭಾಷಣ ಬೆಳ್ಳಾರೆ ಮಸೀದಿ ಯಲ್ಲಿದೆ ಎಂಬ ಪೋಸ್ಟರ್ ಗಳು ಬರಲಾರಂಭಿಸಿದ ನಂತರ ಅವರ ಭಾಷಣಕ್ಕೆ 2 ವರುಷಗಳ ಮೊದಲೆ ವಿರೋಧವಾಗಿತ್ತು. ಆಗ ಆಡಳಿತ ಸಮಿತಿಯು ಇನ್ನು ಮುಂದೆ ಯಾವುದೇ ಕಾರ್ಯಕ್ರಮವಿದ್ದರೂ ಆಡಳಿತ ಸಮಿತಿಯ ಸಭೆಗೆ ಅರ್ಜಿಯನ್ನು ಸಲ್ಲಿಸಬೇಕು. ಅದಲ್ಲದೆ ಆಡಳಿತ ಸಮಿತಿಯ ತೀರ್ಮಾನ ದಂತೆ ಅವರಿಗೆ ಅನುಮತಿ ನೀಡಲಾಗುದೆಂದು ತೀರ್ಮಾನ ಮಾಡಲಾಗಿತ್ತು. ಆದರೆ ಈ ವರುಷ ರಂಝಾನ್ ಪ್ರಭಾಷಣಕ್ಕೆ ಶಾಫಿ ಯಾವುದೇ ಅನುಮತಿಯನ್ನು ಕೋರಿ ಆಡಳಿತ ಸಭೆಗೆ ಅರ್ಜಿ ಸಲ್ಲಿಸಲಿಲ್ಲ. ಆದರೆ ಜೂನ್ 1 ರಂದು ಬೆಳಗ್ಗೆ ಭಾಷಣಕ್ಕೆ ಅನುಮತಿ ಇದೆ ಎಂದು ಗೊತ್ತಾಗಿದ್ದು ಅದರಂತೆಯೆ ರಾತ್ರಿ ತರಾವೀಹ್ ನಮಾಝಿನ ನಂತರ ಶಾಫಿ ಪ್ರಭಾಷಣಕ್ಕೆ ಎದ್ದು ನಿಂತಾಗ ಕಾರ್ಯದರ್ಶಿ ನಾನು ಮತ್ತು ಉಪಾಧ್ಯಕ್ಷ ರಾದ ಯು ಹೆಚ್ ಅಬೂಬಕ್ಕರ್ ಎಂಬುವವರು  ಅನುಮತಿ ನೀಡದಿರುವ ಬಗ್ಗೆ ವಿಚಾರಿಸಿದಾಗ ಘಟನೆ ನಡೆದಿದ್ದು ಅದಕ್ಕೆ ಆ ರಾಜಕೀಯ ಪಕ್ಷದ ಕಾರಣವಾಗಿರುತ್ತದೆ ಎಂದು ಈ ರಂಝಾನ್ ತಿಂಗಳ ಮೇಲೆ ಸತ್ಯ ಮಾಡಿ ಹೇಳುತ್ತೇನೆ ಹಾಗೂ ಎಲ್ಲಿ ಬೇಕಾದರೂ ಪ್ರಮಾಣಕ್ಕೂ ಸಿದ್ದನಿದ್ದೇನೆ ಎಂದು ಇಬ್ರಾಹಿಂ ಪಿ ಕುಂಞಗುಡ್ಡೆ  ಪತ್ರಿಕಾ  ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

6 hours ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

13 hours ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

13 hours ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

21 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

22 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

1 day ago