Advertisement
Uncategorized

ಬೆಳ್ಳಾರೆ ಮಸೀದಿಯ ಘಟನೆ : ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಪಿ ಕುಂಞಗುಡ್ಡೆ ಸ್ಪಷ್ಟೀಕರಣ

Share

ಬೆಳ್ಳಾರೆ: ರಂಝಾನ್ ಪ್ರಭಾಷಣಕ್ಕೆ ಶಾಫಿ ಅವರು ಈ ಬಾರಿ ಯಾವುದೇ ಅನುಮತಿಯನ್ನು ಕೋರಿ ಆಡಳಿತ ಸಭೆಗೆ ಅರ್ಜಿ ಸಲ್ಲಿಸಲಿಲ್ಲ.ಹೀಗಾಗಿ ಭಾಷಣದ ಬಗ್ಗೆ ಪ್ರಶ್ನಿಸಿದಾಗ ಈ ಘಟನೆ ನಡೆದಿದೆ ಎಂದು ಮಸೀದಿಯ ಪ್ರಧಾನ ಕಾರ್ಯ ದರ್ಶಿ ಇಬ್ರಾಹಿಂ ಪಿ ಕುಂಞಗುಡ್ಡೆ ಪತ್ರಿಕಾ ಪ್ರಕಟಣೆಯಲ್ಲಿ  ಸ್ಪಷ್ಟೀಕರಣ ನೀಡಿದ್ದಾರೆ.

ಶಾಫಿ ಬೆಳ್ಳಾರೆ ಅವರು ಸುಮಾರು 10 ವರ್ಷಗಳಿಂದ ಭಾಷಣ ಮಾಡುತ್ತಾ ಬಂದಿದ್ದು, ಅವರು ಬೆಳ್ಳಾರೆ ಮಸೀದಿಯ ಒಬ್ಬ ಸದಸ್ಯನಾಗಿದ್ದರೂ,ಅವರಿಗೆ ಭಾಷಣಕ್ಕೆ ಈ ಹಿಂದೆ ಅನುಮತಿ ನೀಡಲಾಗಿತ್ತು. ನಂತರ ಅದು ವಾಟ್ಸಾಪ್ ಗಳಲ್ಲಿ ರಾಜಕೀಯ ಪಕ್ಷದ ಕಾರ್ಯದರ್ಶಿಯ ಭಾಷಣ ಬೆಳ್ಳಾರೆ ಮಸೀದಿ ಯಲ್ಲಿದೆ ಎಂಬ ಪೋಸ್ಟರ್ ಗಳು ಬರಲಾರಂಭಿಸಿದ ನಂತರ ಅವರ ಭಾಷಣಕ್ಕೆ 2 ವರುಷಗಳ ಮೊದಲೆ ವಿರೋಧವಾಗಿತ್ತು. ಆಗ ಆಡಳಿತ ಸಮಿತಿಯು ಇನ್ನು ಮುಂದೆ ಯಾವುದೇ ಕಾರ್ಯಕ್ರಮವಿದ್ದರೂ ಆಡಳಿತ ಸಮಿತಿಯ ಸಭೆಗೆ ಅರ್ಜಿಯನ್ನು ಸಲ್ಲಿಸಬೇಕು. ಅದಲ್ಲದೆ ಆಡಳಿತ ಸಮಿತಿಯ ತೀರ್ಮಾನ ದಂತೆ ಅವರಿಗೆ ಅನುಮತಿ ನೀಡಲಾಗುದೆಂದು ತೀರ್ಮಾನ ಮಾಡಲಾಗಿತ್ತು. ಆದರೆ ಈ ವರುಷ ರಂಝಾನ್ ಪ್ರಭಾಷಣಕ್ಕೆ ಶಾಫಿ ಯಾವುದೇ ಅನುಮತಿಯನ್ನು ಕೋರಿ ಆಡಳಿತ ಸಭೆಗೆ ಅರ್ಜಿ ಸಲ್ಲಿಸಲಿಲ್ಲ. ಆದರೆ ಜೂನ್ 1 ರಂದು ಬೆಳಗ್ಗೆ ಭಾಷಣಕ್ಕೆ ಅನುಮತಿ ಇದೆ ಎಂದು ಗೊತ್ತಾಗಿದ್ದು ಅದರಂತೆಯೆ ರಾತ್ರಿ ತರಾವೀಹ್ ನಮಾಝಿನ ನಂತರ ಶಾಫಿ ಪ್ರಭಾಷಣಕ್ಕೆ ಎದ್ದು ನಿಂತಾಗ ಕಾರ್ಯದರ್ಶಿ ನಾನು ಮತ್ತು ಉಪಾಧ್ಯಕ್ಷ ರಾದ ಯು ಹೆಚ್ ಅಬೂಬಕ್ಕರ್ ಎಂಬುವವರು  ಅನುಮತಿ ನೀಡದಿರುವ ಬಗ್ಗೆ ವಿಚಾರಿಸಿದಾಗ ಘಟನೆ ನಡೆದಿದ್ದು ಅದಕ್ಕೆ ಆ ರಾಜಕೀಯ ಪಕ್ಷದ ಕಾರಣವಾಗಿರುತ್ತದೆ ಎಂದು ಈ ರಂಝಾನ್ ತಿಂಗಳ ಮೇಲೆ ಸತ್ಯ ಮಾಡಿ ಹೇಳುತ್ತೇನೆ ಹಾಗೂ ಎಲ್ಲಿ ಬೇಕಾದರೂ ಪ್ರಮಾಣಕ್ಕೂ ಸಿದ್ದನಿದ್ದೇನೆ ಎಂದು ಇಬ್ರಾಹಿಂ ಪಿ ಕುಂಞಗುಡ್ಡೆ  ಪತ್ರಿಕಾ  ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

6 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

14 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

14 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

14 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

15 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

1 day ago