Advertisement
Uncategorized

ಬೆಳ್ಳಾರೆ ಮಸೀದಿಯ ಘಟನೆ : ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಪಿ ಕುಂಞಗುಡ್ಡೆ ಸ್ಪಷ್ಟೀಕರಣ

Share

ಬೆಳ್ಳಾರೆ: ರಂಝಾನ್ ಪ್ರಭಾಷಣಕ್ಕೆ ಶಾಫಿ ಅವರು ಈ ಬಾರಿ ಯಾವುದೇ ಅನುಮತಿಯನ್ನು ಕೋರಿ ಆಡಳಿತ ಸಭೆಗೆ ಅರ್ಜಿ ಸಲ್ಲಿಸಲಿಲ್ಲ.ಹೀಗಾಗಿ ಭಾಷಣದ ಬಗ್ಗೆ ಪ್ರಶ್ನಿಸಿದಾಗ ಈ ಘಟನೆ ನಡೆದಿದೆ ಎಂದು ಮಸೀದಿಯ ಪ್ರಧಾನ ಕಾರ್ಯ ದರ್ಶಿ ಇಬ್ರಾಹಿಂ ಪಿ ಕುಂಞಗುಡ್ಡೆ ಪತ್ರಿಕಾ ಪ್ರಕಟಣೆಯಲ್ಲಿ  ಸ್ಪಷ್ಟೀಕರಣ ನೀಡಿದ್ದಾರೆ.

Advertisement

ಶಾಫಿ ಬೆಳ್ಳಾರೆ ಅವರು ಸುಮಾರು 10 ವರ್ಷಗಳಿಂದ ಭಾಷಣ ಮಾಡುತ್ತಾ ಬಂದಿದ್ದು, ಅವರು ಬೆಳ್ಳಾರೆ ಮಸೀದಿಯ ಒಬ್ಬ ಸದಸ್ಯನಾಗಿದ್ದರೂ,ಅವರಿಗೆ ಭಾಷಣಕ್ಕೆ ಈ ಹಿಂದೆ ಅನುಮತಿ ನೀಡಲಾಗಿತ್ತು. ನಂತರ ಅದು ವಾಟ್ಸಾಪ್ ಗಳಲ್ಲಿ ರಾಜಕೀಯ ಪಕ್ಷದ ಕಾರ್ಯದರ್ಶಿಯ ಭಾಷಣ ಬೆಳ್ಳಾರೆ ಮಸೀದಿ ಯಲ್ಲಿದೆ ಎಂಬ ಪೋಸ್ಟರ್ ಗಳು ಬರಲಾರಂಭಿಸಿದ ನಂತರ ಅವರ ಭಾಷಣಕ್ಕೆ 2 ವರುಷಗಳ ಮೊದಲೆ ವಿರೋಧವಾಗಿತ್ತು. ಆಗ ಆಡಳಿತ ಸಮಿತಿಯು ಇನ್ನು ಮುಂದೆ ಯಾವುದೇ ಕಾರ್ಯಕ್ರಮವಿದ್ದರೂ ಆಡಳಿತ ಸಮಿತಿಯ ಸಭೆಗೆ ಅರ್ಜಿಯನ್ನು ಸಲ್ಲಿಸಬೇಕು. ಅದಲ್ಲದೆ ಆಡಳಿತ ಸಮಿತಿಯ ತೀರ್ಮಾನ ದಂತೆ ಅವರಿಗೆ ಅನುಮತಿ ನೀಡಲಾಗುದೆಂದು ತೀರ್ಮಾನ ಮಾಡಲಾಗಿತ್ತು. ಆದರೆ ಈ ವರುಷ ರಂಝಾನ್ ಪ್ರಭಾಷಣಕ್ಕೆ ಶಾಫಿ ಯಾವುದೇ ಅನುಮತಿಯನ್ನು ಕೋರಿ ಆಡಳಿತ ಸಭೆಗೆ ಅರ್ಜಿ ಸಲ್ಲಿಸಲಿಲ್ಲ. ಆದರೆ ಜೂನ್ 1 ರಂದು ಬೆಳಗ್ಗೆ ಭಾಷಣಕ್ಕೆ ಅನುಮತಿ ಇದೆ ಎಂದು ಗೊತ್ತಾಗಿದ್ದು ಅದರಂತೆಯೆ ರಾತ್ರಿ ತರಾವೀಹ್ ನಮಾಝಿನ ನಂತರ ಶಾಫಿ ಪ್ರಭಾಷಣಕ್ಕೆ ಎದ್ದು ನಿಂತಾಗ ಕಾರ್ಯದರ್ಶಿ ನಾನು ಮತ್ತು ಉಪಾಧ್ಯಕ್ಷ ರಾದ ಯು ಹೆಚ್ ಅಬೂಬಕ್ಕರ್ ಎಂಬುವವರು  ಅನುಮತಿ ನೀಡದಿರುವ ಬಗ್ಗೆ ವಿಚಾರಿಸಿದಾಗ ಘಟನೆ ನಡೆದಿದ್ದು ಅದಕ್ಕೆ ಆ ರಾಜಕೀಯ ಪಕ್ಷದ ಕಾರಣವಾಗಿರುತ್ತದೆ ಎಂದು ಈ ರಂಝಾನ್ ತಿಂಗಳ ಮೇಲೆ ಸತ್ಯ ಮಾಡಿ ಹೇಳುತ್ತೇನೆ ಹಾಗೂ ಎಲ್ಲಿ ಬೇಕಾದರೂ ಪ್ರಮಾಣಕ್ಕೂ ಸಿದ್ದನಿದ್ದೇನೆ ಎಂದು ಇಬ್ರಾಹಿಂ ಪಿ ಕುಂಞಗುಡ್ಡೆ  ಪತ್ರಿಕಾ  ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

4 hours ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

1 day ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

1 day ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

1 day ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

1 day ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

1 day ago