ಬೆಳ್ಳಾರೆ: ರಂಝಾನ್ ಪ್ರಭಾಷಣಕ್ಕೆ ಶಾಫಿ ಅವರು ಈ ಬಾರಿ ಯಾವುದೇ ಅನುಮತಿಯನ್ನು ಕೋರಿ ಆಡಳಿತ ಸಭೆಗೆ ಅರ್ಜಿ ಸಲ್ಲಿಸಲಿಲ್ಲ.ಹೀಗಾಗಿ ಭಾಷಣದ ಬಗ್ಗೆ ಪ್ರಶ್ನಿಸಿದಾಗ ಈ ಘಟನೆ ನಡೆದಿದೆ ಎಂದು ಮಸೀದಿಯ ಪ್ರಧಾನ ಕಾರ್ಯ ದರ್ಶಿ ಇಬ್ರಾಹಿಂ ಪಿ ಕುಂಞಗುಡ್ಡೆ ಪತ್ರಿಕಾ ಪ್ರಕಟಣೆಯಲ್ಲಿ ಸ್ಪಷ್ಟೀಕರಣ ನೀಡಿದ್ದಾರೆ.
ಶಾಫಿ ಬೆಳ್ಳಾರೆ ಅವರು ಸುಮಾರು 10 ವರ್ಷಗಳಿಂದ ಭಾಷಣ ಮಾಡುತ್ತಾ ಬಂದಿದ್ದು, ಅವರು ಬೆಳ್ಳಾರೆ ಮಸೀದಿಯ ಒಬ್ಬ ಸದಸ್ಯನಾಗಿದ್ದರೂ,ಅವರಿಗೆ ಭಾಷಣಕ್ಕೆ ಈ ಹಿಂದೆ ಅನುಮತಿ ನೀಡಲಾಗಿತ್ತು. ನಂತರ ಅದು ವಾಟ್ಸಾಪ್ ಗಳಲ್ಲಿ ರಾಜಕೀಯ ಪಕ್ಷದ ಕಾರ್ಯದರ್ಶಿಯ ಭಾಷಣ ಬೆಳ್ಳಾರೆ ಮಸೀದಿ ಯಲ್ಲಿದೆ ಎಂಬ ಪೋಸ್ಟರ್ ಗಳು ಬರಲಾರಂಭಿಸಿದ ನಂತರ ಅವರ ಭಾಷಣಕ್ಕೆ 2 ವರುಷಗಳ ಮೊದಲೆ ವಿರೋಧವಾಗಿತ್ತು. ಆಗ ಆಡಳಿತ ಸಮಿತಿಯು ಇನ್ನು ಮುಂದೆ ಯಾವುದೇ ಕಾರ್ಯಕ್ರಮವಿದ್ದರೂ ಆಡಳಿತ ಸಮಿತಿಯ ಸಭೆಗೆ ಅರ್ಜಿಯನ್ನು ಸಲ್ಲಿಸಬೇಕು. ಅದಲ್ಲದೆ ಆಡಳಿತ ಸಮಿತಿಯ ತೀರ್ಮಾನ ದಂತೆ ಅವರಿಗೆ ಅನುಮತಿ ನೀಡಲಾಗುದೆಂದು ತೀರ್ಮಾನ ಮಾಡಲಾಗಿತ್ತು. ಆದರೆ ಈ ವರುಷ ರಂಝಾನ್ ಪ್ರಭಾಷಣಕ್ಕೆ ಶಾಫಿ ಯಾವುದೇ ಅನುಮತಿಯನ್ನು ಕೋರಿ ಆಡಳಿತ ಸಭೆಗೆ ಅರ್ಜಿ ಸಲ್ಲಿಸಲಿಲ್ಲ. ಆದರೆ ಜೂನ್ 1 ರಂದು ಬೆಳಗ್ಗೆ ಭಾಷಣಕ್ಕೆ ಅನುಮತಿ ಇದೆ ಎಂದು ಗೊತ್ತಾಗಿದ್ದು ಅದರಂತೆಯೆ ರಾತ್ರಿ ತರಾವೀಹ್ ನಮಾಝಿನ ನಂತರ ಶಾಫಿ ಪ್ರಭಾಷಣಕ್ಕೆ ಎದ್ದು ನಿಂತಾಗ ಕಾರ್ಯದರ್ಶಿ ನಾನು ಮತ್ತು ಉಪಾಧ್ಯಕ್ಷ ರಾದ ಯು ಹೆಚ್ ಅಬೂಬಕ್ಕರ್ ಎಂಬುವವರು ಅನುಮತಿ ನೀಡದಿರುವ ಬಗ್ಗೆ ವಿಚಾರಿಸಿದಾಗ ಘಟನೆ ನಡೆದಿದ್ದು ಅದಕ್ಕೆ ಆ ರಾಜಕೀಯ ಪಕ್ಷದ ಕಾರಣವಾಗಿರುತ್ತದೆ ಎಂದು ಈ ರಂಝಾನ್ ತಿಂಗಳ ಮೇಲೆ ಸತ್ಯ ಮಾಡಿ ಹೇಳುತ್ತೇನೆ ಹಾಗೂ ಎಲ್ಲಿ ಬೇಕಾದರೂ ಪ್ರಮಾಣಕ್ಕೂ ಸಿದ್ದನಿದ್ದೇನೆ ಎಂದು ಇಬ್ರಾಹಿಂ ಪಿ ಕುಂಞಗುಡ್ಡೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…